Homeಮುಖಪುಟತಮಿಳುನಾಡು: ಆರ್‌ಎಸ್‌ಎಸ್‌‌ ಹಮ್ಮಿಕೊಂಡಿದ್ದ ರಸ್ತೆ ಮೆರವಣಿಗೆಗೆ ಹೈಕೋರ್ಟ್ ತಡೆ

ತಮಿಳುನಾಡು: ಆರ್‌ಎಸ್‌ಎಸ್‌‌ ಹಮ್ಮಿಕೊಂಡಿದ್ದ ರಸ್ತೆ ಮೆರವಣಿಗೆಗೆ ಹೈಕೋರ್ಟ್ ತಡೆ

- Advertisement -
- Advertisement -

ತಮಿಳುನಾಡು ರಾಜ್ಯಾದ್ಯಂತ ಆರ್‌ಎಸ್‌ಎಸ್‌ ನಾಳೆ ಹಮ್ಮಿಕೊಳ್ಳಲು ಹೊರಟಿದ್ದ ರಸ್ತೆ ಮೆರವಣಿಗೆಗೆ ಮದ್ರಾಸ್ ಹೈಕೋರ್ಟ್ ಅನುಮತಿ ನಿರಾಕರಿಸಿದೆ. ಮೈದಾನ ಅಥವಾ ಕ್ರೀಡಾಂಗಣದಂತಹ ಕಾಂಪೌಂಡ್ ಆವರಣದಲ್ಲಿ ಮಾತ್ರ ಮೆರವಣಿಗೆ ನಡೆಸಲು ಕೋರ್ಟ್ ಸೂಚಿಸಿದ್ದು, ರಸ್ತೆ ಮೆರವಣಿಗೆಯನ್ನು ನಡೆಸುವುದಿಲ್ಲ ಎಂದು ಆರ್‌ಎಸ್‌ಎಸ್ ಹೇಳಿದೆ.

ತನ್ನ ಹೇಳಿಕೆಯಲ್ಲಿ ಹಿಂದುತ್ವವಾದಿ ಸಂಘಟನೆ “ಈ ಆದೇಶವು ಸ್ವೀಕಾರಾರ್ಹವಲ್ಲ, ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು” ಎಂದಿದೆ.

ತಮಿಳುನಾಡಿನಾದ್ಯಂತ ನವೆಂಬರ್ 6ರ ಭಾನುವಾರದಂದು 44 ಸ್ಥಳಗಳಲ್ಲಿ ಮೆರವಣಿಗೆ ನಡೆಸಲು ಮದ್ರಾಸ್ ಹೈಕೋರ್ಟ್ ಆರ್‌ಎಸ್‌ಎಸ್‌ಗೆ ಷರತ್ತುಬದ್ಧ ಅನುಮತಿ ನೀಡಿದೆ. ಬಲಪಂಥೀಯ ಸಂಘಟನೆಯು ಕೋರಿದ್ದ 50 ಸ್ಥಳಗಳ ಪೈಕಿ ಮೂರರಲ್ಲಿ ಮಾತ್ರ ರಾಜ್ಯ ಸರ್ಕಾರವು ಈ ಹಿಂದೆ ಮೆರವಣಿಗೆಗೆ ಅನುಮತಿ ನೀಡಿತ್ತು. ಆರ್‌ಎಸ್‌ಎಸ್, ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಬೇಕು, ಇಲ್ಲದಿದ್ದರೆ ಪರಿಣಾಮ ಎದುರಿಸಬೇಕು ಎಂದು ಕೋರ್ಟ್‌ ಎಚ್ಚರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಶ್ಮೀರ, ಪಶ್ಚಿಮ ಬಂಗಾಳ, ಕೇರಳ ಮತ್ತು ಇತರ ಸ್ಥಳಗಳಲ್ಲಿ ರಸ್ತೆ ಮೆರವಣಿಗೆಗಳು ನಡೆಯುತ್ತವೆ. ನಾವು ನವೆಂಬರ್ 6 ರಂದು ನಮ್ಮ ತಮಿಳುನಾಡಿನಲ್ಲಿ ರಸ್ತೆ ಮೆರವಣಿಗೆಗಳನ್ನು ನಡೆಸುತ್ತಿಲ್ಲ. ನಾವು ಮನವಿ ಮಾಡುತ್ತೇವೆ” ಎಂದು ಆರ್‌ಎಸ್‌ಎಸ್ ಹೇಳಿಕೆ ತಿಳಿಸಿದೆ.

ಗುಪ್ತಚರ ಮಾಹಿತಿಯ ಮೇರೆಗೆ ಕೊಯಮತ್ತೂರು, ಪೊಲ್ಲಾಚಿ ಮತ್ತು ನಾಗರ್‌ಕೋಯಿಲ್ ಸೇರಿದಂತೆ ಆರು ಕೋಮು ಸೂಕ್ಷ್ಮ ಸ್ಥಳಗಳಲ್ಲಿ ಮೆರವಣಿಗೆಗೆ ನ್ಯಾಯಾಲಯ ಅನುಮತಿ ನಿರಾಕರಿಸಿತ್ತು.

ಎರಡು ತಿಂಗಳ ನಂತರ ಇತರ ಆರು ಸ್ಥಳಗಳಲ್ಲಿ ಮೆರವಣಿಗೆಗೆ ಅನುಮತಿ ಪಡೆಯಲು ಆರ್‌ಎಸ್‌ಎಸ್‌ಗೆ ಕೋರ್ಟ್ ಅನುಮತಿ ನೀಡಿದೆ.

ಕೊಯಮತ್ತೂರಿನಲ್ಲಿ ಇತ್ತೀಚೆಗೆ ದೀಪಾವಳಿಯ ಒಂದು ದಿನದ ಮೊದಲು ಕಾರ್ ಸ್ಫೋಟ ನಡೆದಿತ್ತು. ಇದರಲ್ಲಿ ಜಮೀಶಾ ಮುಬಿನ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.

ಅಕ್ಟೋಬರ್ 2ರಂದು ನ್ಯಾಯಾಲಯವು ಅನುಮತಿ ನೀಡಿದ್ದರೂ ತಮಿಳುನಾಡು ಸರ್ಕಾರವು ಈ ಹಿಂದೆ ಅನುಮತಿ ನಿರಾಕರಿಸಿತ್ತು. ಆರ್‌ಎಸ್‌ಎಸ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಲು ಮುಂದಾಯಿತು.

ಇದನ್ನೂ ಓದಿರಿ: ಗುಜರಾತ್ ಚುನಾವಣೆ: ಬಿಜೆಪಿ ತೊರೆದ ಹಿರಿಯ ಮುಖಂಡ ಜಯ್ ನಾರಾಯಣ್ ವ್ಯಾಸ್

ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಮತ್ತು ಪೊಲೀಸ್ ಕಮಿಷನರ್‌ಗಳಿಗೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಸುತ್ತೋಲೆಯನ್ನು ಹೊರಡಿಸಿದ್ದು, ಸ್ಥಳೀಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗಳಿಗೆ ಒಳಪಟ್ಟು ಅನುಮತಿ ನೀಡುವಂತೆ ತಿಳಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲಿನ ನಿಷೇಧದ ನಂತರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ವಿಚಾರವನ್ನು ಸರ್ಕಾರ ಪ್ರಸ್ತಾಪಿಸುತ್ತಿದೆ.

ಆಡಳಿತಾರೂಢ ಡಿಎಂಕೆಯ ಮಿತ್ರಪಕ್ಷವಾದ ವಿದುತಲೈ ಚಿರುತೈಗಲ್ ಕೂಡ ಅದೇ ದಿನ ಶಾಂತಿಗಾಗಿ ಮಾನವ ಸರಪಳಿ ನಿರ್ಮಿಸಲು ಅನುಮತಿ ಕೋರಿದ್ದರು. ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಲ್ಲಿ, ಮಹಾತ್ಮ ಗಾಂಧಿಯವರ ಹತ್ಯೆಯಲ್ಲಿ ಆರೆಸ್ಸೆಸ್ ಪಾತ್ರ ಮತ್ತು ಗಾಂಧಿಯವರ ಮರಣವನ್ನು ಹೇಗೆ ಸಂಭ್ರಮಿಸಲಾಗಿದೆ ಎಂಬುದನ್ನು ಪಕ್ಷವು ಉಲ್ಲೇಖಿಸಿದೆ. ಈ ಕಾರ್ಯಕ್ರಮಕ್ಕೆ ಗಾಂಧಿ ಜಯಂತಿಯನ್ನು ಆಯ್ಕೆ ಮಾಡಿಕೊಂಡಿರುವುದು ಸರಿಯಲ್ಲ ಎಂದು ಪಕ್ಷವು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....