Homeದಲಿತ್ ಫೈಲ್ಸ್ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

- Advertisement -
- Advertisement -

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ.

ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ ಮಣಿಕಂಡನ್, ಎಳುಮಲೈ, ನಂದೀಶ್ ಮತ್ತು ಗೌತಮ್ ಎಂಬುವವರು ಮಚ್ಚುಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್, ಆಗಸ್ಟ್ 20 ರಂದು ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿರುವ ಪೊಲೀಸರು, ಆಗಸ್ಟ್ 17 ರಂದು ಅವರನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಐದನೇ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಆರೋಪಿ ಏಳುಮಲೈ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸದಸ್ಯನಾಗಿದ್ದು, ಆತನ ಮಗಳು ಅಶ್ವಥಿ ಹಾಗೂ ಪ್ರವೀಣ್ ಪ್ರೀತಿಸುತ್ತಿದ್ದರು ಎಂದು ಹಲವಾರು ವರದಿಗಳು ತಿಳಿಸಿವೆ. ಏಳುಮಲೈ ಮತ್ತು ಪ್ರವೀಣ್ ಇಬ್ಬರೂ ಪರಿಶಿಷ್ಟ ಜಾತಿಗೆ ಸೇರಿದ ಆದಿ ದ್ರಾವಿಡ ಸಮುದಾಯದವರಾಗಿದ್ದರೂ, ಮೃತ ಪ್ರವೀಣ್ ಅತ್ಯಂತ ಬಡ ಕುಟುಂಬಕ್ಕೆ ಸೇರಿದವನಾಗಿದ್ದ ಎಂದು ನೆರೆಹೊರೆಯವರಾದ ಸತೀಶ್ ಕುಮಾರ್ ತಿಳಿಸಿದ್ದಾರೆ.

ಕೊಲೆಗೂ ಮುನ್ನ ಹಲವು ಬಾರಿ ದಾಳಿ

ಆಗಸ್ಟ್ 16 ರ ದಾಳಿಯು ಮೊದಲಿನದ್ದೇನೂ ಅಲ್ಲ. ಅಶ್ವಥಿ ಕುಟುಂಬದವರು ಪ್ರವೀಣ್‌ಗೆ ಹಲವು ಬಾರಿ ಬೆದರಿಕೆ ಹಾಕಿದ್ದರು. “ಹಿಂದೊಮ್ಮೆ ಅಶ್ವಥಿಯ ಸಂಬಂಧಿಯೊಬ್ಬ ಮಾರಕಾಸ್ತ್ರದೊಂದಿಗೆ ಪ್ರವೀಣ್ ಮನೆಗೆ ಬಂದು, ಬೆದರಿಕೆ ಹಾಕಿ, ಚಾಕುವಿನಿಂದ ಇರಿಯಲು ಯತ್ನಿಸಿದ್ದ. ನಂತರ ಅಲ್ಲಿಂದ ಹೊರಟುಹೋದ” ಎಂದು ಸತೀಶ್ ಹೇಳಿದ್ದಾರೆ.

ಸುಮಾರು ಆರು ತಿಂಗಳ ಹಿಂದೆ ಏಳುಮಲೈ ಮತ್ತು ಇತರ ಆರೋಪಿಗಳು ಪ್ರವೀಣ್‌ನನ್ನು ಕಟ್ಟಿಹಾಕಿ ಥಳಿಸಿದ್ದರು. ಆದರೆ, ಪ್ರವೀಣ್ ಕುಟುಂಬದವರು ಪ್ರಕರಣ ದಾಖಲಿಸದಿರಲು ನಿರ್ಧರಿಸಿದ್ದರು ಎಂದು ಸತೀಶ್ ತಿಳಿಸಿದ್ದಾರೆ.

ಕೊಲೆಯಾದ ದಿನದಂದು, ಮೂರು ತಿಂಗಳ ಹಿಂದೆ ಪ್ರವೀಣ್ ಜೊತೆ ಸ್ನೇಹ ಬೆಳೆಸಿದ್ದ ಆರೋಪಿ ಮಣಿಕಂಡನ್‌ನನ್ನು ಭೇಟಿಯಾಗಲು ಪ್ರವೀಣ್ ಹೋಗಿದ್ದ. ಈ ವೇಳೆ ಕಾರಿನಲ್ಲಿ ಆತನನ್ನು ಅಪಹರಿಸಿ, ಮತ್ತೊಂದು ಸ್ಥಳಕ್ಕೆ ಕರೆದೊಯ್ದು ದಾಳಿ ನಡೆಸಲಾಗಿದೆ.

ಮರ್ಯಾದಾ ಹತ್ಯೆ ವಿರೋಧಿ ಕಾಯ್ದೆಗೆ ಆಗ್ರಹ

ಜಾತಿ ವಿರೋಧಿ ಹೋರಾಟಗಾರರ ಪ್ರಕಾರ, 2026 ರ ಜನವರಿಯಿಂದ ಮಾರ್ಚ್ ಅವಧಿಯಲ್ಲೇ ತಮಿಳುನಾಡಿನಲ್ಲಿ 59 ಮರ್ಯಾದೆಗೇಡು ಕೊಲೆಗಳು ದಾಖಲಾಗಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಅತ್ಯಾಚಾರ ತಡೆ) ಕಾಯ್ದೆಯು ಗೌರವ ಕೊಲೆಗಳನ್ನು ತಡೆಯಲು ಸಾಲುತ್ತಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ವಿಶೇಷ ಮರ್ಯಾದಾ ಹತ್ಯೆ ವಿರೋಧಿ ಕಾಯ್ದೆಗೆ ಆಗ್ರಹಿಸಿರುವ ಹೋರಾಟಗಾರರು, ಇಂತಹ ಅಪರಾಧಗಳಿಗೆ ಕೇವಲ ಜಾತಿ ಶ್ರೇಷ್ಠತೆಯಷ್ಟೇ ಕಾರಣವಲ್ಲ; ವರ್ಗ (ಆರ್ಥಿಕ ಸ್ಥಿತಿ), ಧರ್ಮ ಮತ್ತು ಲಿಂಗ ಗುರುತುಗಳೂ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದ್ದಾರೆ. ಪ್ರವೀಣ್ ಕೊಲೆಯಂತೆಯೇ, ದಲಿತ ಸಮುದಾಯಗಳ ಒಳಗೇ ನಡೆಯುವ ಕೊಲೆಗಳಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ಜಾರಿಗೆ ತರುವುದು ಕಷ್ಟಕರವಾಗಿದೆ. ಅಲ್ಲದೆ, ಕ್ರಿಶ್ಚಿಯನ್ ಅಥವಾ ಮುಸ್ಲಿಂ ದಲಿತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸದಿರುವುದರಿಂದ ಅವರಿಗೂ ಈ ಕಾಯ್ದೆಯಡಿ ರಕ್ಷಣೆ ಸಿಗುವುದಿಲ್ಲ ಎಂದು ಹೋರಾಟಗಾರರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...