Homeಮುಖಪುಟತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

ತಮಿಳುನಾಡಿನಲ್ಲಿ ಮರ್ಯಾದೆಗೇಡು ಹತ್ಯೆ: ತಂಗಿ-ಬಾವನನ್ನು ಊಟಕ್ಕೆ ಕರೆದು ಕೊಲೆ ಮಾಡಿದ ಅಣ್ಣ

- Advertisement -
- Advertisement -

ತಮಿಳುನಾಡಿನಲ್ಲಿ ಮತ್ತೊಂದು ಮರ್ಯಾದೆಗೇಡು ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಇಚ್ಛೆಗೆ ವಿರೋಧವಾಗಿ ಐದು ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದ ತಂಗಿ-ಬಾವನನ್ನು ಮನೆಗೆ ಊಟಕ್ಕೆ ಕರೆದ ಅಣ್ಣ ಇಬ್ಬರನ್ನು ಹತ್ಯೆ ಮಾಡಿರುವ ಪ್ರಕರಣ ಕುಂಭಕೋಣಂ ಬಳಿ ನಡೆದಿದೆ.

ತಮಿಳುನಾಡಿನ ತಂಜಾವೂರು ಜಿಲ್ಲೆಯ ಕುಂಭಕೋಣಂನಲ್ಲಿ ಸೋಮವಾರ ಸಂಜೆ ಈ ಭೀಕರ ಕೃತ್ಯ ನಡೆದಿದೆ. 24 ವರ್ಷದ ಶರಣ್ಯ ಮತ್ತು 31 ವರ್ಷದ ಆಕೆಯ ಪತಿ ಮೋಹನ್ ಮೃತರು. ತನಗೆ ಇಷ್ಟ ಇಲ್ಲದವರನ್ನು ಮದುವೆಯಾದ ಕಾರಣಕ್ಕೆ ಅಣ್ಣನೇ ಇಬ್ಬರನ್ನು ಕೊಂದಿದ್ದು, ಚೋಳಪುರಂ ಪೊಲೀಸರು ಮೃತಳ ಅಣ್ಣ ಮತ್ತು ಸಂಬಂಧಿಯನ್ನು ಬಂಧಿಸಿದ್ದಾರೆ.

ದಲಿತ ಮಹಿಳೆಯಾಗಿರುವ ಯುವತಿ ಶರಣ್ಯ, ನಾಯ್ಕರ್ ಜಾತಿಗೆ ಸೇರಿದ್ದ ಮೋಹನ್ ಎಂಬಾತನನ್ನು ಐದು ತಿಂಗಳಿಂದ ಪ್ರೀತಿಸಿ ಮದುವೆಯಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿಯನ್ನು ಚೆನ್ನೈನ ಆಸ್ಪತ್ರೆಗೆ ಕರೆ ತಂದಿದ್ದ ಮೋಹನ್, ಅಲ್ಲೇ ನರ್ಸ್‌ ಆಗಿರುವ ಶರಣ್ಯ ಅವರನ್ನು ಭೇಟಿಯಾಗಿದ್ದರು. ಅಲ್ಲಿ ಅವರಿಬ್ಬರಿಗೂ ಪರಿಚಯವಾಗಿ, ಸ್ನೇಹ ಪ್ರೇಮಕ್ಕೆ ತಿರುಗಿತ್ತು. ಆದರೆ ಎರಡೂ ಮನೆಯವರು ಇವರ ಪ್ರೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿರೋಧದ ನಡುವೆ ಇಬ್ಬರು ಮದುವೆಯಾಗಿದ್ದರು.

ಇದನ್ನೂ ಓದಿ: ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ದಲಿತ ಯುವಕನ ಕೊಲೆ: ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ

ಶರಣ್ಯ ಅವರ ಅಣ್ಣ 31 ವರ್ಷದ ಶಕ್ತಿವೇಲ್‌ಗೆ ತನ್ನ ತಂಗಿಯನ್ನು ಸ್ನೇಹಿತ ಮತ್ತು ಸೋದರ ಮಾವ ದೇವನಗಿರಿಯ 28 ವರ್ಷದ ರಂಜಿತ್‌ನೊಂದಿಗೆ ಮದುವೆ ಮಾಡುವ ಆಸೆಯಿತ್ತು. ಇದನ್ನು ಇತ್ತೀಚೆಗೆ ಶರಣ್ಯ ಅವರಿಗೆ ತಿಳಿಸಿದ್ದರು. ಇದರ ಬೆನ್ನಲ್ಲೇ ಶರಣ್ಯ ಮತ್ತು ಮೋಹನ್ ಕಳೆದ ವಾರ ಚೆನ್ನೈನಲ್ಲಿ ಮದುವೆಯಾಗಿದ್ದು, ಮನೆಯವರಿಗೆ ದೂರವಾಣಿ ಮೂಲಕ ಸುದ್ದಿ ಮುಟ್ಟಿಸಿದ್ದಾರೆ.

ಇದನ್ನು ಕೇಳಿದ ಶಕ್ತಿವೇಲ್, ಮದುವೆಗೆ ತನ್ನ ಒಪ್ಪಿಗೆ ಇದೆ ಎಂದು ಹೇಳಿ ದಂಪತಿಯನ್ನು ಊಟಕ್ಕೆಂದು ಮನೆಗೆ ಆಹ್ವಾನಿಸಿದ್ದಾರೆ. ಸೋಮವಾರ ತುಳುಕ್ಕವೇಲಿಗೆ ಆಗಮಿಸಿ ಊಟ ಮುಗಿಸಿ, ಚೆನ್ನೈಗೆ ಮರಳಲು ತಯಾರಾಗುತ್ತಿದ್ದಂತೆ ಶಕ್ತಿವೇಲ್ ಮತ್ತು ರಂಜಿತ್ ದಂಪತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಪೊಲೀಸರು ಶವಗಳನ್ನು ಮನೆಯಿಂದ ಹೊರತೆಗೆದಿದ್ದಾರೆ.

ಘಟನೆ ಬಳಿಕ ಶಕ್ತಿವೇಲ್ ಮತ್ತು ರಂಜಿತ್ ಸ್ಥಳದಿಂದ ಓಡಿಹೋಗಿದ್ದರು, ಆದರೆ ಅವರನ್ನು ಕುಂಭಕೋಣಂ ಬಸ್ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಸದ್ಯ ಆರೋಪಿಗಳಾದ ಶಕ್ತಿವೇಲ್ ಮತ್ತು ರಂಜಿತ್ ಇಬ್ಬರೂ ಪೊಲೀಸ್ ವಶದಲ್ಲಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಪ್ರತ್ಯಕ್ಷದರ್ಶಿಗಳು, ಸಂಬಂಧಿಕರು ಮತ್ತು ಸ್ನೇಹಿತರು ಮತ್ತು ಸ್ಥಳೀಯರಿಂದ ಮಾಹಿತಿ ಪಡೆದ ನಂತರ ವಿವರವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಂಜಾವೂರು ಪೊಲೀಸ್ ವರಿಷ್ಠಾಧಿಕಾರಿ ಜಿ.ರವಳಿ ಪ್ರಿಯಾ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...