Homeಮುಖಪುಟತಮಿಳುನಾಡು| ತಿರುಪರಂಕುಂದ್ರಂ ಬೆಟ್ಟ ವಿವಾದದ ಹಿನ್ನೆಲೆ ನಿಷೇಧಾಜ್ಞೆ ಜಾರಿ

ತಮಿಳುನಾಡು| ತಿರುಪರಂಕುಂದ್ರಂ ಬೆಟ್ಟ ವಿವಾದದ ಹಿನ್ನೆಲೆ ನಿಷೇಧಾಜ್ಞೆ ಜಾರಿ

- Advertisement -
- Advertisement -

ತಮಿಳುನಾಡಿನ ತಿರುಪರಂಕುಂದ್ರಂ ಅರುಲ್ಮಿಗು ಸುಬ್ರಮಣಿಯ ಸ್ವಾಮಿ ದೇವಾಲಯ ಬೆಟ್ಟದ ವಿಷಯಕ್ಕೆ ಸಂಬಂಧಿಸಿದ ಪ್ರತಿಭಟನೆಗಳನ್ನು ತಡೆಯಲು ಸರ್ಕಾರವು ಪ್ರದೇಶದಾದ್ಯಂತ ಸೆಕ್ಷನ್ 144 ವಿಧಿಸಿದ ನಂತರ ಮಂಗಳವಾರ ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ ಕಂಡುಬಂದಿದೆ.

ರಾಜ್ಯ ಸರ್ಕಾರದ ಕ್ರಮಗಳ ವಿರುದ್ಧ ಹಿಂದುತ್ವ ಸಂಘಟನೆಗಳು ಹೋರಾಟ ಯೋಜಿಸುತ್ತಿರುವುದಕ್ಕೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ತಿರುಪರಂಕುಂದ್ರಂ ಬೆಟ್ಟದಲ್ಲಿ ಎಐಎಎಂಐ ಸಂಸದ ಸೇರಿದಂತೆ ಹಲವರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ ವಿಡಿಯೊ ವೈರಲ್ ಆದ ಬಳಿಕ ವಿವಾದ ಉಂಟಾಗಿದೆ. ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರೂ ಸಹ ಹಿಂದೂ ಮುನ್ನಾನಿ ಸುಬ್ರಮಣಿಯ ಸ್ವಾಮಿ ದೇವಾಲಯದ ಬಳಿ ಪ್ರತಿಭಟನೆ ನಡೆಸಲು ಹಿಂದುತ್ವ ಗುಂಪುಗಳು ಯೋಜಿಸಿದ್ದವು. ಬೆಟ್ಟದಲ್ಲಿ ಒಂದು ದರ್ಗಾ ಕೂಡ ಇದೆ, ಮುಸ್ಲಿಮರ ಒಂದು ವರ್ಗವು ತಿರುಪರಂಕುಂದ್ರಂ ಬೆಟ್ಟಗಳನ್ನು ಸಿಕ್ಕಂದರ್ ಮಲೈ ಎಂದು ಮರುನಾಮಕರಣ ಮಾಡಲು ಪ್ರಯತ್ನಿಸಿದೆ ಎಂದು ವರದಿಯಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಅಧಿಕಾರಿಗಳು, ಮಧುರೈನಾದ್ಯಂತ ಸಭೆಗಳನ್ನು ನಿರ್ಬಂಧಿಸಿ, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಬೆಟ್ಟದ ಪ್ರವೇಶದ್ವಾರದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದರು, ಇದರಿಂದಾಗಿ ದೇವಸ್ಥಾನ ಮತ್ತು ದರ್ಗಾ ಎರಡರಲ್ಲೂ ಭಕ್ತರು ದರ್ಶನ ಪಡೆಯುವುದನ್ನು ತಡೆಯಲಾಯಿತು. ಥೇಣಿ ಜಿಲ್ಲಾ ಗಡಿಯ ಬಳಿಯ ಆಂಡಿಪಟ್ಟಿ ಕಣವೈ, ಉಸಿಲಂಪಟ್ಟಿ ತೇವರ್ ಪ್ರತಿಮೆ ಪ್ರದೇಶ, ದಿಂಡಿಗಲ್ ಜಿಲ್ಲಾ ಗಡಿಯ ಬಳಿಯ ಉತ್ತಪ್ಪನಾಯಕನೂರ್ ಮತ್ತು ಏಳುಮಲೈ ಜಂಕ್ಷನ್ ಸೇರಿದಂತೆ ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ಕಠಿಣ ವಾಹನ ತಪಾಸಣೆ ನಡೆಸಲಾಯಿತು.

ತಿರುಪ್ಪೂರಿನಲ್ಲಿ ಉದ್ವಿಗ್ನತೆ ಹೆಚ್ಚಾಯಿತು, ಪ್ರತಿಭಟನೆಗಾಗಿ ಮಧುರೈ ತಲುಪಲು ಯತ್ನಿಸಿದ ಪೊಲೀಸರು ಮತ್ತು ಹಿಂದೂ ಪರ ಗುಂಪುಗಳ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಕಾನೂನು ಜಾರಿ ಸಂಸ್ಥೆಗಳು ಗುಂಪಿನ ಪ್ರಮುಖ ನಾಯಕನನ್ನು ಬಂಧಿಸಿದವು, ಇದು ಘರ್ಷಣೆಗೆ ಕಾರಣವಾಯಿತು.

ಬಿಜೆಪಿ ತಮಿಳುನಾಡು ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಪರಿಸ್ಥಿತಿಯನ್ನು ನಿಭಾಯಿಸಿದ್ದಕ್ಕಾಗಿ ಡಿಎಂಕೆ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು. ಎಕ್ಸ್ ಪೋಸ್ಟ್‌ ಮಾಡಿರುವ ಅವರು, ವಿರುಧುನಗರ ಪೂರ್ವ ಜಿಲ್ಲಾ ಅಧ್ಯಕ್ಷ ಪೆಂಟಗನ್ ಜಿ. ಪಾಂಡುರಂಗನ್, ಕೊಯಮತ್ತೂರು ನಗರ ಜಿಲ್ಲಾ ಅಧ್ಯಕ್ಷ ರಮೇಶ್, ತೂತುಕುಡಿ ಉತ್ತರ ಜಿಲ್ಲಾ ಅಧ್ಯಕ್ಷ ಕೆ. ಸರವಣಕೃಷ್ಣನ್ ಮತ್ತು ಸೇಲಂ ನಗರ ಜಿಲ್ಲಾ ಅಧ್ಯಕ್ಷ ಟಿವಿ ಶಶಿಕುಮಾರ್ ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ನಾಯಕರು ಮತ್ತು ಸದಸ್ಯರನ್ನು ಬಂಧಿಸುವ ಮೂಲಕ ಆಡಳಿತ ಪಕ್ಷವು “ಪ್ರಜಾಪ್ರಭುತ್ವ ವಿರೋಧಿ” ರೀತಿಯಲ್ಲಿ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಮಧುರೈನಲ್ಲಿ ಸೆಕ್ಷನ್ 144 ರ ಹೊರತಾಗಿಯೂ ಡಿಎಂಕೆ ನಾಯಕರೊಬ್ಬರು ರ್ಯಾಲಿ ನಡೆಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ. “ಎಲ್ಲದಕ್ಕೂ ಒಂದು ಮಿತಿ ಇದೆ. ಡಿಎಂಕೆ ಸಚಿವರಿಗೆ ಒಂದು ನಿಯಮ ಮತ್ತು ಸಾರ್ವಜನಿಕರಿಗೆ ಇನ್ನೊಂದು ನಿಯಮವಿದೆಯೇ? ಬಂಧಿಸಲ್ಪಟ್ಟ ಎಲ್ಲರನ್ನು ತಕ್ಷಣ ಬಿಡುಗಡೆ ಮಾಡಬೇಕು ಮತ್ತು ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಗೆ ಅವಕಾಶ ನೀಡಬೇಕು” ಎಂದು ಅಣ್ಣಾಮಲೈ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ; ಯುಎಪಿಎ ತಿದ್ದುಪಡಿ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್; ದೆಹಲಿ ಹೈಕೋರ್ಟ್‌ಗೆ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...