Homeಮುಖಪುಟತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

ತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

- Advertisement -
- Advertisement -

ಚೆನ್ನೈ: ಅಂತರಜಾತಿ ವಿವಾಹಗಳಿಗೆ ಕುಟುಂಬಗಳಿಂದ ವಿರೋಧ ಎದುರಾದಲ್ಲಿ ಅಂತಹ ವಿವಾಹಗಳನ್ನು ಸಿಪಿಐ(ಎಂ) ಪಕ್ಷದ ಕಚೇರಿಗಳಲ್ಲಿ ನೆರವೇರಿಸಲು ಅವಕಾಶ ನೀಡಲಾಗುತ್ತದೆ ಎಂದು ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‍ವಾದಿ) ಪಕ್ಷದ (ಸಿಪಿಎಂ) ತಮಿಳುನಾಡು ರಾಜ್ಯ ಘಟಕದ ಕಾರ್ಯದರ್ಶಿ ಪಿ.ಷಣ್ಮುಗಂ ಅವರು ಇತ್ತೀಚೆಗೆ ಪ್ರಕಟಿಸಿದ್ದಾರೆ.

ನಿನ್ನೆ ( ಆ.27) ವಿನಾಯಕ ಚತುರ್ಥಿಯ ದಿನದಂದು ತಿರುತ್ತುರೈಪೂಂಡಿಯ ಸಿಪಿಐ(ಎಂ) ಕಚೇರಿಯಲ್ಲಿ ಒಂದು ಅಂತರಜಾತಿ ವಿವಾಹ ನೆರವೇರಿಸುವ ಮೂಲಕ ಇದಕ್ಕೆ ಚಾಲನೆ ನೀಡಲಾಗಿದೆ.

ವಧು, ಅಮೃತಾ, ತಿರುವಾರೂರು ಜಿಲ್ಲೆಯ ವಾರಂಬಿಯಂ ಪ್ರದೇಶದವರು. ವರ ಸಂಜಯ್‌ಕುಮಾರ್ ಪುದುಕೊಟ್ಟೈ ಜಿಲ್ಲೆಯ ಮಾಥೂರಿನವರು. ಇಬ್ಬರೂ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬಗಳೂ ಆರಂಭದಲ್ಲಿ ಮದುವೆಗೆ ಒಪ್ಪಿದ್ದವು. ತಿರುವಾರೂರು ಜಿಲ್ಲೆಯ ಒಂದು ಪ್ರಮುಖ ಹಿಂದೂ ದೇವಸ್ಥಾನದಲ್ಲಿ ಆಗಸ್ಟ್ 27ರಂದು ವಿವಾಹ ಸಮಾರಂಭ ನಡೆಸಲು ನಿಶ್ಚಯಿಸಲಾಗಿತ್ತು. ಆದರೆ, ಸಂಜಯ್‌ಕುಮಾರ್ ಅವರ ಚಿಕ್ಕಪ್ಪ ಮದುವೆಗೆ ವಿರೋಧ ವ್ಯಕ್ತಪಡಿಸಿ, ಮದುವೆಯನ್ನು ನಿಲ್ಲಿಸುವ ಉದ್ದೇಶದಿಂದ ಸಂಜಯ್‌ಕುಮಾರ್ ಅವರನ್ನು ಅಪಹರಿಸಿದ್ದರು. ಈ ಸಂಬಂಧ ತಿರುತ್ತುರೈಪೂಂಡಿ ಪೊಲೀಸರಿಗೆ ದೂರು ನೀಡಲಾಗಿತ್ತು.

ವಿನಾಯಕ ಚತುರ್ಥಿಯ ದಿನ ಪೊಲೀಸರು ವರ ಸಂಜಯ್‌ಕುಮಾರ್ ಅವರನ್ನು ಪತ್ತೆಹಚ್ಚಿ ರಕ್ಷಿಸಿ ತಿರುತ್ತುರೈಪೂಂಡಿ ಪೊಲೀಸ್ ಠಾಣೆಗೆ ಕರೆತಂದರು. ಅಂದೇ ಸಂಜೆ, ತಿರುತ್ತುರೈಪೂಂಡಿಯಲ್ಲಿರುವ ಸಿಪಿಐ(ಎಂ) ಕಚೇರಿಯಲ್ಲಿ ವಿವಾಹ ನೆರವೇರಿಸಲಾಯಿತು. ಸಿಪಿಐ(ಎಂ)ನ ರಾಜ್ಯ ಸಮಿತಿ ಸದಸ್ಯ ಐ.ವಿ. ನಾಗರಾಜನ್ ಅವರು ತಿರುವಾರೂರು ಜಿಲ್ಲಾ ಕಾರ್ಯದರ್ಶಿ ಟಿ. ಮುರುಗೈಯನ್ ಅವರ ಸಮ್ಮುಖದಲ್ಲಿ ವಿವಾಹ ನೆರವೇರಿಸಿದರು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ನವ ದಂಪತಿಗೆ ರಕ್ಷಣೆ ನೀಡುವಂತೆ ಪಕ್ಷದಿಂದ ತಿರುತ್ತುರೈಪೂಂಡಿ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.

ಜಾತಿ ಹಿಂಸಾಚಾರಗಳ ವಿರುದ್ಧ ಹೋರಾಟಕ್ಕೆ ಕರೆ

ಚೆನ್ನೈನಲ್ಲಿ ನಡೆದ ಜಾತಿ ಹತ್ಯೆಗಳ ವಿರುದ್ಧದ ಸಭೆಯಲ್ಲಿ ಮಾತನಾಡಿದ ಪಿ. ಷಣ್ಮುಗಂ ಅವರು, ‘ನಾವು ತಿರುನೆಲ್ವೇಲಿಯಲ್ಲಿ ನಮ್ಮ ಕಚೇರಿಯಲ್ಲಿ ಮದುವೆ ನಡೆಸಿದಾಗ ವಧುವಿನ ಸಂಬಂಧಿಕರು ಕಚೇರಿಯನ್ನು ಹಾಳುಗೆಡವಿದರು. ಆದರೂ ನಾವು ಅಂತರಜಾತಿ ವಿವಾಹಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಪ್ರಗತಿಪರ ಶಕ್ತಿಗಳು ಎಲ್ಲ ಸಮುದಾಯಗಳಲ್ಲಿಯೂ ಇವೆ, ನಾವು ಅವರನ್ನು ಗುರುತಿಸಿ ಸಂಘಟಿಸಬೇಕು. ಆಗ ಮಾತ್ರ ಜಾತಿವಾದಿ ಶಕ್ತಿಗಳ ವಿರುದ್ಧ ಸಂಘಟಿತ ಹೋರಾಟವನ್ನು ರೂಪಿಸಬಹುದು’ ಎಂದರು.

2015ರಲ್ಲಿ ಆಗಿನ ಸಿಪಿಐ(ಎಂ) ಶಾಸಕಾಂಗ ಪಕ್ಷದ ನಾಯಕ ಎ. ಸೌಂದರರಾಜನ್ ಅವರು ಜಾತಿ ಹತ್ಯೆಗಳನ್ನು ತಡೆಯಲು ವಿಶೇಷ ಕಾಯ್ದೆಯನ್ನು ಜಾರಿಗೊಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಆದರೆ, ಅದು ಸೋಲಪ್ಪಿತು ಎಂದು ನೆನಪಿಸಿಕೊಂಡರು.

‘ಮಧ್ಯಂತರ ಜಾತಿಗಳು ಮತ್ತು ಪರಿಶಿಷ್ಟ ಜಾತಿಗಳ ನಡುವೆ ತಪ್ಪು ತಿಳಿವಳಿಕೆ ಇದೆ. ಇದು ಅನೇಕ ಯುವ ದಂಪತಿಗಳ ಕೊಲೆಗೆ ಕಾರಣವಾಗಿದೆ. ಜಾತಿ ಗೌರವದ ಹೆಸರಿನಲ್ಲಿ ನಡೆಯುವ ಮರ್ಯಾದೆಗೇಡು ಹತ್ಯೆಗಳನ್ನು ತಡೆಯಲು ಕಾನೂನು ಜಾರಿಗೊಳಿಸಬೇಕು’ ಎಂದು ಷಣ್ಮುಗಂ ಒತ್ತಾಯಿಸಿದರು.

ಈ ಸಂಬಂಧ ತಾವು, ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತ್ತರಸನ್ ಮತ್ತು ವಿಸಿಕೆ ನಾಯಕ ಥೋಳ್. ತಿರುಮಾವಳವನ್ ಅವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿ ಅಂತಹ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು.

‘ನಾವು 30 ನಿಮಿಷಗಳ ಕಾಲ ಮುಖ್ಯಮಂತ್ರಿಯವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದೇವೆ. ಅವರು ನಮ್ಮ ಬೇಡಿಕೆಗೆ ಒಲವು ತೋರಿಸಿದ್ದಾರೆ ಎಂದು ನಮಗೆ ಅನಿಸಿತು. ಅವರು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಕಾನೂನನ್ನು ಜಾರಿಗೊಳಿಸಬೇಕು’ ಎಂದರು.

ಕೇವಲ ತಿರುನೆಲ್ವೇಲಿ ಜಿಲ್ಲೆಯಲ್ಲಿಯೇ ಒಂದು ವರ್ಷದಲ್ಲಿ 240 ಮರ್ಯಾದೆಗೇಡು ಹತ್ಯೆಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣ ಮೀರಿ ಹೋಗಿದೆ ಎಂದು ಷಣ್ಮುಗಂ ಅವರು  ಹೇಳಿದರು.

‘ಈಗ ಕಾಯ್ದೆಗಾಗಿ ಸಾರ್ವಜನಿಕರ ಬೆಂಬಲ ಹೆಚ್ಚುತ್ತಿದೆ ಮತ್ತು ಸರ್ಕಾರ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...