Homeಮುಖಪುಟತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

ತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

- Advertisement -
- Advertisement -

ಚೆನ್ನೈ: ಅಂತರಜಾತಿ ವಿವಾಹಗಳಿಗೆ ಕುಟುಂಬಗಳಿಂದ ವಿರೋಧ ಎದುರಾದಲ್ಲಿ ಅಂತಹ ವಿವಾಹಗಳನ್ನು ಸಿಪಿಐ(ಎಂ) ಪಕ್ಷದ ಕಚೇರಿಗಳಲ್ಲಿ ನೆರವೇರಿಸಲು ಅವಕಾಶ ನೀಡಲಾಗುತ್ತದೆ ಎಂದು ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‍ವಾದಿ) ಪಕ್ಷದ (ಸಿಪಿಎಂ) ತಮಿಳುನಾಡು ರಾಜ್ಯ ಘಟಕದ ಕಾರ್ಯದರ್ಶಿ ಪಿ.ಷಣ್ಮುಗಂ ಅವರು ಇತ್ತೀಚೆಗೆ ಪ್ರಕಟಿಸಿದ್ದಾರೆ.

ನಿನ್ನೆ ( ಆ.27) ವಿನಾಯಕ ಚತುರ್ಥಿಯ ದಿನದಂದು ತಿರುತ್ತುರೈಪೂಂಡಿಯ ಸಿಪಿಐ(ಎಂ) ಕಚೇರಿಯಲ್ಲಿ ಒಂದು ಅಂತರಜಾತಿ ವಿವಾಹ ನೆರವೇರಿಸುವ ಮೂಲಕ ಇದಕ್ಕೆ ಚಾಲನೆ ನೀಡಲಾಗಿದೆ.

ವಧು, ಅಮೃತಾ, ತಿರುವಾರೂರು ಜಿಲ್ಲೆಯ ವಾರಂಬಿಯಂ ಪ್ರದೇಶದವರು. ವರ ಸಂಜಯ್‌ಕುಮಾರ್ ಪುದುಕೊಟ್ಟೈ ಜಿಲ್ಲೆಯ ಮಾಥೂರಿನವರು. ಇಬ್ಬರೂ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬಗಳೂ ಆರಂಭದಲ್ಲಿ ಮದುವೆಗೆ ಒಪ್ಪಿದ್ದವು. ತಿರುವಾರೂರು ಜಿಲ್ಲೆಯ ಒಂದು ಪ್ರಮುಖ ಹಿಂದೂ ದೇವಸ್ಥಾನದಲ್ಲಿ ಆಗಸ್ಟ್ 27ರಂದು ವಿವಾಹ ಸಮಾರಂಭ ನಡೆಸಲು ನಿಶ್ಚಯಿಸಲಾಗಿತ್ತು. ಆದರೆ, ಸಂಜಯ್‌ಕುಮಾರ್ ಅವರ ಚಿಕ್ಕಪ್ಪ ಮದುವೆಗೆ ವಿರೋಧ ವ್ಯಕ್ತಪಡಿಸಿ, ಮದುವೆಯನ್ನು ನಿಲ್ಲಿಸುವ ಉದ್ದೇಶದಿಂದ ಸಂಜಯ್‌ಕುಮಾರ್ ಅವರನ್ನು ಅಪಹರಿಸಿದ್ದರು. ಈ ಸಂಬಂಧ ತಿರುತ್ತುರೈಪೂಂಡಿ ಪೊಲೀಸರಿಗೆ ದೂರು ನೀಡಲಾಗಿತ್ತು.

ವಿನಾಯಕ ಚತುರ್ಥಿಯ ದಿನ ಪೊಲೀಸರು ವರ ಸಂಜಯ್‌ಕುಮಾರ್ ಅವರನ್ನು ಪತ್ತೆಹಚ್ಚಿ ರಕ್ಷಿಸಿ ತಿರುತ್ತುರೈಪೂಂಡಿ ಪೊಲೀಸ್ ಠಾಣೆಗೆ ಕರೆತಂದರು. ಅಂದೇ ಸಂಜೆ, ತಿರುತ್ತುರೈಪೂಂಡಿಯಲ್ಲಿರುವ ಸಿಪಿಐ(ಎಂ) ಕಚೇರಿಯಲ್ಲಿ ವಿವಾಹ ನೆರವೇರಿಸಲಾಯಿತು. ಸಿಪಿಐ(ಎಂ)ನ ರಾಜ್ಯ ಸಮಿತಿ ಸದಸ್ಯ ಐ.ವಿ. ನಾಗರಾಜನ್ ಅವರು ತಿರುವಾರೂರು ಜಿಲ್ಲಾ ಕಾರ್ಯದರ್ಶಿ ಟಿ. ಮುರುಗೈಯನ್ ಅವರ ಸಮ್ಮುಖದಲ್ಲಿ ವಿವಾಹ ನೆರವೇರಿಸಿದರು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ನವ ದಂಪತಿಗೆ ರಕ್ಷಣೆ ನೀಡುವಂತೆ ಪಕ್ಷದಿಂದ ತಿರುತ್ತುರೈಪೂಂಡಿ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.

ಜಾತಿ ಹಿಂಸಾಚಾರಗಳ ವಿರುದ್ಧ ಹೋರಾಟಕ್ಕೆ ಕರೆ

ಚೆನ್ನೈನಲ್ಲಿ ನಡೆದ ಜಾತಿ ಹತ್ಯೆಗಳ ವಿರುದ್ಧದ ಸಭೆಯಲ್ಲಿ ಮಾತನಾಡಿದ ಪಿ. ಷಣ್ಮುಗಂ ಅವರು, ‘ನಾವು ತಿರುನೆಲ್ವೇಲಿಯಲ್ಲಿ ನಮ್ಮ ಕಚೇರಿಯಲ್ಲಿ ಮದುವೆ ನಡೆಸಿದಾಗ ವಧುವಿನ ಸಂಬಂಧಿಕರು ಕಚೇರಿಯನ್ನು ಹಾಳುಗೆಡವಿದರು. ಆದರೂ ನಾವು ಅಂತರಜಾತಿ ವಿವಾಹಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಪ್ರಗತಿಪರ ಶಕ್ತಿಗಳು ಎಲ್ಲ ಸಮುದಾಯಗಳಲ್ಲಿಯೂ ಇವೆ, ನಾವು ಅವರನ್ನು ಗುರುತಿಸಿ ಸಂಘಟಿಸಬೇಕು. ಆಗ ಮಾತ್ರ ಜಾತಿವಾದಿ ಶಕ್ತಿಗಳ ವಿರುದ್ಧ ಸಂಘಟಿತ ಹೋರಾಟವನ್ನು ರೂಪಿಸಬಹುದು’ ಎಂದರು.

2015ರಲ್ಲಿ ಆಗಿನ ಸಿಪಿಐ(ಎಂ) ಶಾಸಕಾಂಗ ಪಕ್ಷದ ನಾಯಕ ಎ. ಸೌಂದರರಾಜನ್ ಅವರು ಜಾತಿ ಹತ್ಯೆಗಳನ್ನು ತಡೆಯಲು ವಿಶೇಷ ಕಾಯ್ದೆಯನ್ನು ಜಾರಿಗೊಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಆದರೆ, ಅದು ಸೋಲಪ್ಪಿತು ಎಂದು ನೆನಪಿಸಿಕೊಂಡರು.

‘ಮಧ್ಯಂತರ ಜಾತಿಗಳು ಮತ್ತು ಪರಿಶಿಷ್ಟ ಜಾತಿಗಳ ನಡುವೆ ತಪ್ಪು ತಿಳಿವಳಿಕೆ ಇದೆ. ಇದು ಅನೇಕ ಯುವ ದಂಪತಿಗಳ ಕೊಲೆಗೆ ಕಾರಣವಾಗಿದೆ. ಜಾತಿ ಗೌರವದ ಹೆಸರಿನಲ್ಲಿ ನಡೆಯುವ ಮರ್ಯಾದೆಗೇಡು ಹತ್ಯೆಗಳನ್ನು ತಡೆಯಲು ಕಾನೂನು ಜಾರಿಗೊಳಿಸಬೇಕು’ ಎಂದು ಷಣ್ಮುಗಂ ಒತ್ತಾಯಿಸಿದರು.

ಈ ಸಂಬಂಧ ತಾವು, ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತ್ತರಸನ್ ಮತ್ತು ವಿಸಿಕೆ ನಾಯಕ ಥೋಳ್. ತಿರುಮಾವಳವನ್ ಅವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿ ಅಂತಹ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು.

‘ನಾವು 30 ನಿಮಿಷಗಳ ಕಾಲ ಮುಖ್ಯಮಂತ್ರಿಯವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದೇವೆ. ಅವರು ನಮ್ಮ ಬೇಡಿಕೆಗೆ ಒಲವು ತೋರಿಸಿದ್ದಾರೆ ಎಂದು ನಮಗೆ ಅನಿಸಿತು. ಅವರು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಕಾನೂನನ್ನು ಜಾರಿಗೊಳಿಸಬೇಕು’ ಎಂದರು.

ಕೇವಲ ತಿರುನೆಲ್ವೇಲಿ ಜಿಲ್ಲೆಯಲ್ಲಿಯೇ ಒಂದು ವರ್ಷದಲ್ಲಿ 240 ಮರ್ಯಾದೆಗೇಡು ಹತ್ಯೆಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣ ಮೀರಿ ಹೋಗಿದೆ ಎಂದು ಷಣ್ಮುಗಂ ಅವರು  ಹೇಳಿದರು.

‘ಈಗ ಕಾಯ್ದೆಗಾಗಿ ಸಾರ್ವಜನಿಕರ ಬೆಂಬಲ ಹೆಚ್ಚುತ್ತಿದೆ ಮತ್ತು ಸರ್ಕಾರ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...