Homeಮುಖಪುಟತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

ತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

- Advertisement -
- Advertisement -

ಚೆನ್ನೈ: ಅಂತರಜಾತಿ ವಿವಾಹಗಳಿಗೆ ಕುಟುಂಬಗಳಿಂದ ವಿರೋಧ ಎದುರಾದಲ್ಲಿ ಅಂತಹ ವಿವಾಹಗಳನ್ನು ಸಿಪಿಐ(ಎಂ) ಪಕ್ಷದ ಕಚೇರಿಗಳಲ್ಲಿ ನೆರವೇರಿಸಲು ಅವಕಾಶ ನೀಡಲಾಗುತ್ತದೆ ಎಂದು ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‍ವಾದಿ) ಪಕ್ಷದ (ಸಿಪಿಎಂ) ತಮಿಳುನಾಡು ರಾಜ್ಯ ಘಟಕದ ಕಾರ್ಯದರ್ಶಿ ಪಿ.ಷಣ್ಮುಗಂ ಅವರು ಇತ್ತೀಚೆಗೆ ಪ್ರಕಟಿಸಿದ್ದಾರೆ.

ನಿನ್ನೆ ( ಆ.27) ವಿನಾಯಕ ಚತುರ್ಥಿಯ ದಿನದಂದು ತಿರುತ್ತುರೈಪೂಂಡಿಯ ಸಿಪಿಐ(ಎಂ) ಕಚೇರಿಯಲ್ಲಿ ಒಂದು ಅಂತರಜಾತಿ ವಿವಾಹ ನೆರವೇರಿಸುವ ಮೂಲಕ ಇದಕ್ಕೆ ಚಾಲನೆ ನೀಡಲಾಗಿದೆ.

ವಧು, ಅಮೃತಾ, ತಿರುವಾರೂರು ಜಿಲ್ಲೆಯ ವಾರಂಬಿಯಂ ಪ್ರದೇಶದವರು. ವರ ಸಂಜಯ್‌ಕುಮಾರ್ ಪುದುಕೊಟ್ಟೈ ಜಿಲ್ಲೆಯ ಮಾಥೂರಿನವರು. ಇಬ್ಬರೂ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬಗಳೂ ಆರಂಭದಲ್ಲಿ ಮದುವೆಗೆ ಒಪ್ಪಿದ್ದವು. ತಿರುವಾರೂರು ಜಿಲ್ಲೆಯ ಒಂದು ಪ್ರಮುಖ ಹಿಂದೂ ದೇವಸ್ಥಾನದಲ್ಲಿ ಆಗಸ್ಟ್ 27ರಂದು ವಿವಾಹ ಸಮಾರಂಭ ನಡೆಸಲು ನಿಶ್ಚಯಿಸಲಾಗಿತ್ತು. ಆದರೆ, ಸಂಜಯ್‌ಕುಮಾರ್ ಅವರ ಚಿಕ್ಕಪ್ಪ ಮದುವೆಗೆ ವಿರೋಧ ವ್ಯಕ್ತಪಡಿಸಿ, ಮದುವೆಯನ್ನು ನಿಲ್ಲಿಸುವ ಉದ್ದೇಶದಿಂದ ಸಂಜಯ್‌ಕುಮಾರ್ ಅವರನ್ನು ಅಪಹರಿಸಿದ್ದರು. ಈ ಸಂಬಂಧ ತಿರುತ್ತುರೈಪೂಂಡಿ ಪೊಲೀಸರಿಗೆ ದೂರು ನೀಡಲಾಗಿತ್ತು.

ವಿನಾಯಕ ಚತುರ್ಥಿಯ ದಿನ ಪೊಲೀಸರು ವರ ಸಂಜಯ್‌ಕುಮಾರ್ ಅವರನ್ನು ಪತ್ತೆಹಚ್ಚಿ ರಕ್ಷಿಸಿ ತಿರುತ್ತುರೈಪೂಂಡಿ ಪೊಲೀಸ್ ಠಾಣೆಗೆ ಕರೆತಂದರು. ಅಂದೇ ಸಂಜೆ, ತಿರುತ್ತುರೈಪೂಂಡಿಯಲ್ಲಿರುವ ಸಿಪಿಐ(ಎಂ) ಕಚೇರಿಯಲ್ಲಿ ವಿವಾಹ ನೆರವೇರಿಸಲಾಯಿತು. ಸಿಪಿಐ(ಎಂ)ನ ರಾಜ್ಯ ಸಮಿತಿ ಸದಸ್ಯ ಐ.ವಿ. ನಾಗರಾಜನ್ ಅವರು ತಿರುವಾರೂರು ಜಿಲ್ಲಾ ಕಾರ್ಯದರ್ಶಿ ಟಿ. ಮುರುಗೈಯನ್ ಅವರ ಸಮ್ಮುಖದಲ್ಲಿ ವಿವಾಹ ನೆರವೇರಿಸಿದರು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ನವ ದಂಪತಿಗೆ ರಕ್ಷಣೆ ನೀಡುವಂತೆ ಪಕ್ಷದಿಂದ ತಿರುತ್ತುರೈಪೂಂಡಿ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.

ಜಾತಿ ಹಿಂಸಾಚಾರಗಳ ವಿರುದ್ಧ ಹೋರಾಟಕ್ಕೆ ಕರೆ

ಚೆನ್ನೈನಲ್ಲಿ ನಡೆದ ಜಾತಿ ಹತ್ಯೆಗಳ ವಿರುದ್ಧದ ಸಭೆಯಲ್ಲಿ ಮಾತನಾಡಿದ ಪಿ. ಷಣ್ಮುಗಂ ಅವರು, ‘ನಾವು ತಿರುನೆಲ್ವೇಲಿಯಲ್ಲಿ ನಮ್ಮ ಕಚೇರಿಯಲ್ಲಿ ಮದುವೆ ನಡೆಸಿದಾಗ ವಧುವಿನ ಸಂಬಂಧಿಕರು ಕಚೇರಿಯನ್ನು ಹಾಳುಗೆಡವಿದರು. ಆದರೂ ನಾವು ಅಂತರಜಾತಿ ವಿವಾಹಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಪ್ರಗತಿಪರ ಶಕ್ತಿಗಳು ಎಲ್ಲ ಸಮುದಾಯಗಳಲ್ಲಿಯೂ ಇವೆ, ನಾವು ಅವರನ್ನು ಗುರುತಿಸಿ ಸಂಘಟಿಸಬೇಕು. ಆಗ ಮಾತ್ರ ಜಾತಿವಾದಿ ಶಕ್ತಿಗಳ ವಿರುದ್ಧ ಸಂಘಟಿತ ಹೋರಾಟವನ್ನು ರೂಪಿಸಬಹುದು’ ಎಂದರು.

2015ರಲ್ಲಿ ಆಗಿನ ಸಿಪಿಐ(ಎಂ) ಶಾಸಕಾಂಗ ಪಕ್ಷದ ನಾಯಕ ಎ. ಸೌಂದರರಾಜನ್ ಅವರು ಜಾತಿ ಹತ್ಯೆಗಳನ್ನು ತಡೆಯಲು ವಿಶೇಷ ಕಾಯ್ದೆಯನ್ನು ಜಾರಿಗೊಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಆದರೆ, ಅದು ಸೋಲಪ್ಪಿತು ಎಂದು ನೆನಪಿಸಿಕೊಂಡರು.

‘ಮಧ್ಯಂತರ ಜಾತಿಗಳು ಮತ್ತು ಪರಿಶಿಷ್ಟ ಜಾತಿಗಳ ನಡುವೆ ತಪ್ಪು ತಿಳಿವಳಿಕೆ ಇದೆ. ಇದು ಅನೇಕ ಯುವ ದಂಪತಿಗಳ ಕೊಲೆಗೆ ಕಾರಣವಾಗಿದೆ. ಜಾತಿ ಗೌರವದ ಹೆಸರಿನಲ್ಲಿ ನಡೆಯುವ ಮರ್ಯಾದೆಗೇಡು ಹತ್ಯೆಗಳನ್ನು ತಡೆಯಲು ಕಾನೂನು ಜಾರಿಗೊಳಿಸಬೇಕು’ ಎಂದು ಷಣ್ಮುಗಂ ಒತ್ತಾಯಿಸಿದರು.

ಈ ಸಂಬಂಧ ತಾವು, ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತ್ತರಸನ್ ಮತ್ತು ವಿಸಿಕೆ ನಾಯಕ ಥೋಳ್. ತಿರುಮಾವಳವನ್ ಅವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿ ಅಂತಹ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು.

‘ನಾವು 30 ನಿಮಿಷಗಳ ಕಾಲ ಮುಖ್ಯಮಂತ್ರಿಯವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದೇವೆ. ಅವರು ನಮ್ಮ ಬೇಡಿಕೆಗೆ ಒಲವು ತೋರಿಸಿದ್ದಾರೆ ಎಂದು ನಮಗೆ ಅನಿಸಿತು. ಅವರು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಕಾನೂನನ್ನು ಜಾರಿಗೊಳಿಸಬೇಕು’ ಎಂದರು.

ಕೇವಲ ತಿರುನೆಲ್ವೇಲಿ ಜಿಲ್ಲೆಯಲ್ಲಿಯೇ ಒಂದು ವರ್ಷದಲ್ಲಿ 240 ಮರ್ಯಾದೆಗೇಡು ಹತ್ಯೆಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣ ಮೀರಿ ಹೋಗಿದೆ ಎಂದು ಷಣ್ಮುಗಂ ಅವರು  ಹೇಳಿದರು.

‘ಈಗ ಕಾಯ್ದೆಗಾಗಿ ಸಾರ್ವಜನಿಕರ ಬೆಂಬಲ ಹೆಚ್ಚುತ್ತಿದೆ ಮತ್ತು ಸರ್ಕಾರ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...