Homeಮುಖಪುಟತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

ತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

- Advertisement -
- Advertisement -

ಚೆನ್ನೈ: ಅಂತರಜಾತಿ ವಿವಾಹಗಳಿಗೆ ಕುಟುಂಬಗಳಿಂದ ವಿರೋಧ ಎದುರಾದಲ್ಲಿ ಅಂತಹ ವಿವಾಹಗಳನ್ನು ಸಿಪಿಐ(ಎಂ) ಪಕ್ಷದ ಕಚೇರಿಗಳಲ್ಲಿ ನೆರವೇರಿಸಲು ಅವಕಾಶ ನೀಡಲಾಗುತ್ತದೆ ಎಂದು ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‍ವಾದಿ) ಪಕ್ಷದ (ಸಿಪಿಎಂ) ತಮಿಳುನಾಡು ರಾಜ್ಯ ಘಟಕದ ಕಾರ್ಯದರ್ಶಿ ಪಿ.ಷಣ್ಮುಗಂ ಅವರು ಇತ್ತೀಚೆಗೆ ಪ್ರಕಟಿಸಿದ್ದಾರೆ.

ನಿನ್ನೆ ( ಆ.27) ವಿನಾಯಕ ಚತುರ್ಥಿಯ ದಿನದಂದು ತಿರುತ್ತುರೈಪೂಂಡಿಯ ಸಿಪಿಐ(ಎಂ) ಕಚೇರಿಯಲ್ಲಿ ಒಂದು ಅಂತರಜಾತಿ ವಿವಾಹ ನೆರವೇರಿಸುವ ಮೂಲಕ ಇದಕ್ಕೆ ಚಾಲನೆ ನೀಡಲಾಗಿದೆ.

ವಧು, ಅಮೃತಾ, ತಿರುವಾರೂರು ಜಿಲ್ಲೆಯ ವಾರಂಬಿಯಂ ಪ್ರದೇಶದವರು. ವರ ಸಂಜಯ್‌ಕುಮಾರ್ ಪುದುಕೊಟ್ಟೈ ಜಿಲ್ಲೆಯ ಮಾಥೂರಿನವರು. ಇಬ್ಬರೂ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬಗಳೂ ಆರಂಭದಲ್ಲಿ ಮದುವೆಗೆ ಒಪ್ಪಿದ್ದವು. ತಿರುವಾರೂರು ಜಿಲ್ಲೆಯ ಒಂದು ಪ್ರಮುಖ ಹಿಂದೂ ದೇವಸ್ಥಾನದಲ್ಲಿ ಆಗಸ್ಟ್ 27ರಂದು ವಿವಾಹ ಸಮಾರಂಭ ನಡೆಸಲು ನಿಶ್ಚಯಿಸಲಾಗಿತ್ತು. ಆದರೆ, ಸಂಜಯ್‌ಕುಮಾರ್ ಅವರ ಚಿಕ್ಕಪ್ಪ ಮದುವೆಗೆ ವಿರೋಧ ವ್ಯಕ್ತಪಡಿಸಿ, ಮದುವೆಯನ್ನು ನಿಲ್ಲಿಸುವ ಉದ್ದೇಶದಿಂದ ಸಂಜಯ್‌ಕುಮಾರ್ ಅವರನ್ನು ಅಪಹರಿಸಿದ್ದರು. ಈ ಸಂಬಂಧ ತಿರುತ್ತುರೈಪೂಂಡಿ ಪೊಲೀಸರಿಗೆ ದೂರು ನೀಡಲಾಗಿತ್ತು.

ವಿನಾಯಕ ಚತುರ್ಥಿಯ ದಿನ ಪೊಲೀಸರು ವರ ಸಂಜಯ್‌ಕುಮಾರ್ ಅವರನ್ನು ಪತ್ತೆಹಚ್ಚಿ ರಕ್ಷಿಸಿ ತಿರುತ್ತುರೈಪೂಂಡಿ ಪೊಲೀಸ್ ಠಾಣೆಗೆ ಕರೆತಂದರು. ಅಂದೇ ಸಂಜೆ, ತಿರುತ್ತುರೈಪೂಂಡಿಯಲ್ಲಿರುವ ಸಿಪಿಐ(ಎಂ) ಕಚೇರಿಯಲ್ಲಿ ವಿವಾಹ ನೆರವೇರಿಸಲಾಯಿತು. ಸಿಪಿಐ(ಎಂ)ನ ರಾಜ್ಯ ಸಮಿತಿ ಸದಸ್ಯ ಐ.ವಿ. ನಾಗರಾಜನ್ ಅವರು ತಿರುವಾರೂರು ಜಿಲ್ಲಾ ಕಾರ್ಯದರ್ಶಿ ಟಿ. ಮುರುಗೈಯನ್ ಅವರ ಸಮ್ಮುಖದಲ್ಲಿ ವಿವಾಹ ನೆರವೇರಿಸಿದರು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ನವ ದಂಪತಿಗೆ ರಕ್ಷಣೆ ನೀಡುವಂತೆ ಪಕ್ಷದಿಂದ ತಿರುತ್ತುರೈಪೂಂಡಿ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.

ಜಾತಿ ಹಿಂಸಾಚಾರಗಳ ವಿರುದ್ಧ ಹೋರಾಟಕ್ಕೆ ಕರೆ

ಚೆನ್ನೈನಲ್ಲಿ ನಡೆದ ಜಾತಿ ಹತ್ಯೆಗಳ ವಿರುದ್ಧದ ಸಭೆಯಲ್ಲಿ ಮಾತನಾಡಿದ ಪಿ. ಷಣ್ಮುಗಂ ಅವರು, ‘ನಾವು ತಿರುನೆಲ್ವೇಲಿಯಲ್ಲಿ ನಮ್ಮ ಕಚೇರಿಯಲ್ಲಿ ಮದುವೆ ನಡೆಸಿದಾಗ ವಧುವಿನ ಸಂಬಂಧಿಕರು ಕಚೇರಿಯನ್ನು ಹಾಳುಗೆಡವಿದರು. ಆದರೂ ನಾವು ಅಂತರಜಾತಿ ವಿವಾಹಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಪ್ರಗತಿಪರ ಶಕ್ತಿಗಳು ಎಲ್ಲ ಸಮುದಾಯಗಳಲ್ಲಿಯೂ ಇವೆ, ನಾವು ಅವರನ್ನು ಗುರುತಿಸಿ ಸಂಘಟಿಸಬೇಕು. ಆಗ ಮಾತ್ರ ಜಾತಿವಾದಿ ಶಕ್ತಿಗಳ ವಿರುದ್ಧ ಸಂಘಟಿತ ಹೋರಾಟವನ್ನು ರೂಪಿಸಬಹುದು’ ಎಂದರು.

2015ರಲ್ಲಿ ಆಗಿನ ಸಿಪಿಐ(ಎಂ) ಶಾಸಕಾಂಗ ಪಕ್ಷದ ನಾಯಕ ಎ. ಸೌಂದರರಾಜನ್ ಅವರು ಜಾತಿ ಹತ್ಯೆಗಳನ್ನು ತಡೆಯಲು ವಿಶೇಷ ಕಾಯ್ದೆಯನ್ನು ಜಾರಿಗೊಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಆದರೆ, ಅದು ಸೋಲಪ್ಪಿತು ಎಂದು ನೆನಪಿಸಿಕೊಂಡರು.

‘ಮಧ್ಯಂತರ ಜಾತಿಗಳು ಮತ್ತು ಪರಿಶಿಷ್ಟ ಜಾತಿಗಳ ನಡುವೆ ತಪ್ಪು ತಿಳಿವಳಿಕೆ ಇದೆ. ಇದು ಅನೇಕ ಯುವ ದಂಪತಿಗಳ ಕೊಲೆಗೆ ಕಾರಣವಾಗಿದೆ. ಜಾತಿ ಗೌರವದ ಹೆಸರಿನಲ್ಲಿ ನಡೆಯುವ ಮರ್ಯಾದೆಗೇಡು ಹತ್ಯೆಗಳನ್ನು ತಡೆಯಲು ಕಾನೂನು ಜಾರಿಗೊಳಿಸಬೇಕು’ ಎಂದು ಷಣ್ಮುಗಂ ಒತ್ತಾಯಿಸಿದರು.

ಈ ಸಂಬಂಧ ತಾವು, ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತ್ತರಸನ್ ಮತ್ತು ವಿಸಿಕೆ ನಾಯಕ ಥೋಳ್. ತಿರುಮಾವಳವನ್ ಅವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿ ಅಂತಹ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು.

‘ನಾವು 30 ನಿಮಿಷಗಳ ಕಾಲ ಮುಖ್ಯಮಂತ್ರಿಯವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದೇವೆ. ಅವರು ನಮ್ಮ ಬೇಡಿಕೆಗೆ ಒಲವು ತೋರಿಸಿದ್ದಾರೆ ಎಂದು ನಮಗೆ ಅನಿಸಿತು. ಅವರು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಕಾನೂನನ್ನು ಜಾರಿಗೊಳಿಸಬೇಕು’ ಎಂದರು.

ಕೇವಲ ತಿರುನೆಲ್ವೇಲಿ ಜಿಲ್ಲೆಯಲ್ಲಿಯೇ ಒಂದು ವರ್ಷದಲ್ಲಿ 240 ಮರ್ಯಾದೆಗೇಡು ಹತ್ಯೆಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣ ಮೀರಿ ಹೋಗಿದೆ ಎಂದು ಷಣ್ಮುಗಂ ಅವರು  ಹೇಳಿದರು.

‘ಈಗ ಕಾಯ್ದೆಗಾಗಿ ಸಾರ್ವಜನಿಕರ ಬೆಂಬಲ ಹೆಚ್ಚುತ್ತಿದೆ ಮತ್ತು ಸರ್ಕಾರ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...