Homeಮುಖಪುಟತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

ತಮಿಳುನಾಡು| ಪಕ್ಷದ ಕಚೇರಿಯಲ್ಲಿ ನೆರವೇರಿದ ಅಂತರಜಾತಿ ವಿವಾಹ: ಇಂತಹ ಸಮಾರಂಭಗಳಿಗೆ ರಾಜ್ಯದ ಪಕ್ಷದ ಕಚೇರಿಗಳಲ್ಲಿ ಅವಕಾಶ-ಸಿಪಿಎಂ

- Advertisement -
- Advertisement -

ಚೆನ್ನೈ: ಅಂತರಜಾತಿ ವಿವಾಹಗಳಿಗೆ ಕುಟುಂಬಗಳಿಂದ ವಿರೋಧ ಎದುರಾದಲ್ಲಿ ಅಂತಹ ವಿವಾಹಗಳನ್ನು ಸಿಪಿಐ(ಎಂ) ಪಕ್ಷದ ಕಚೇರಿಗಳಲ್ಲಿ ನೆರವೇರಿಸಲು ಅವಕಾಶ ನೀಡಲಾಗುತ್ತದೆ ಎಂದು ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‍ವಾದಿ) ಪಕ್ಷದ (ಸಿಪಿಎಂ) ತಮಿಳುನಾಡು ರಾಜ್ಯ ಘಟಕದ ಕಾರ್ಯದರ್ಶಿ ಪಿ.ಷಣ್ಮುಗಂ ಅವರು ಇತ್ತೀಚೆಗೆ ಪ್ರಕಟಿಸಿದ್ದಾರೆ.

ನಿನ್ನೆ ( ಆ.27) ವಿನಾಯಕ ಚತುರ್ಥಿಯ ದಿನದಂದು ತಿರುತ್ತುರೈಪೂಂಡಿಯ ಸಿಪಿಐ(ಎಂ) ಕಚೇರಿಯಲ್ಲಿ ಒಂದು ಅಂತರಜಾತಿ ವಿವಾಹ ನೆರವೇರಿಸುವ ಮೂಲಕ ಇದಕ್ಕೆ ಚಾಲನೆ ನೀಡಲಾಗಿದೆ.

ವಧು, ಅಮೃತಾ, ತಿರುವಾರೂರು ಜಿಲ್ಲೆಯ ವಾರಂಬಿಯಂ ಪ್ರದೇಶದವರು. ವರ ಸಂಜಯ್‌ಕುಮಾರ್ ಪುದುಕೊಟ್ಟೈ ಜಿಲ್ಲೆಯ ಮಾಥೂರಿನವರು. ಇಬ್ಬರೂ ಏಳು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಕುಟುಂಬಗಳೂ ಆರಂಭದಲ್ಲಿ ಮದುವೆಗೆ ಒಪ್ಪಿದ್ದವು. ತಿರುವಾರೂರು ಜಿಲ್ಲೆಯ ಒಂದು ಪ್ರಮುಖ ಹಿಂದೂ ದೇವಸ್ಥಾನದಲ್ಲಿ ಆಗಸ್ಟ್ 27ರಂದು ವಿವಾಹ ಸಮಾರಂಭ ನಡೆಸಲು ನಿಶ್ಚಯಿಸಲಾಗಿತ್ತು. ಆದರೆ, ಸಂಜಯ್‌ಕುಮಾರ್ ಅವರ ಚಿಕ್ಕಪ್ಪ ಮದುವೆಗೆ ವಿರೋಧ ವ್ಯಕ್ತಪಡಿಸಿ, ಮದುವೆಯನ್ನು ನಿಲ್ಲಿಸುವ ಉದ್ದೇಶದಿಂದ ಸಂಜಯ್‌ಕುಮಾರ್ ಅವರನ್ನು ಅಪಹರಿಸಿದ್ದರು. ಈ ಸಂಬಂಧ ತಿರುತ್ತುರೈಪೂಂಡಿ ಪೊಲೀಸರಿಗೆ ದೂರು ನೀಡಲಾಗಿತ್ತು.

ವಿನಾಯಕ ಚತುರ್ಥಿಯ ದಿನ ಪೊಲೀಸರು ವರ ಸಂಜಯ್‌ಕುಮಾರ್ ಅವರನ್ನು ಪತ್ತೆಹಚ್ಚಿ ರಕ್ಷಿಸಿ ತಿರುತ್ತುರೈಪೂಂಡಿ ಪೊಲೀಸ್ ಠಾಣೆಗೆ ಕರೆತಂದರು. ಅಂದೇ ಸಂಜೆ, ತಿರುತ್ತುರೈಪೂಂಡಿಯಲ್ಲಿರುವ ಸಿಪಿಐ(ಎಂ) ಕಚೇರಿಯಲ್ಲಿ ವಿವಾಹ ನೆರವೇರಿಸಲಾಯಿತು. ಸಿಪಿಐ(ಎಂ)ನ ರಾಜ್ಯ ಸಮಿತಿ ಸದಸ್ಯ ಐ.ವಿ. ನಾಗರಾಜನ್ ಅವರು ತಿರುವಾರೂರು ಜಿಲ್ಲಾ ಕಾರ್ಯದರ್ಶಿ ಟಿ. ಮುರುಗೈಯನ್ ಅವರ ಸಮ್ಮುಖದಲ್ಲಿ ವಿವಾಹ ನೆರವೇರಿಸಿದರು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪಿ. ಷಣ್ಮುಗಂ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜೊತೆಗೆ ನವ ದಂಪತಿಗೆ ರಕ್ಷಣೆ ನೀಡುವಂತೆ ಪಕ್ಷದಿಂದ ತಿರುತ್ತುರೈಪೂಂಡಿ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.

ಜಾತಿ ಹಿಂಸಾಚಾರಗಳ ವಿರುದ್ಧ ಹೋರಾಟಕ್ಕೆ ಕರೆ

ಚೆನ್ನೈನಲ್ಲಿ ನಡೆದ ಜಾತಿ ಹತ್ಯೆಗಳ ವಿರುದ್ಧದ ಸಭೆಯಲ್ಲಿ ಮಾತನಾಡಿದ ಪಿ. ಷಣ್ಮುಗಂ ಅವರು, ‘ನಾವು ತಿರುನೆಲ್ವೇಲಿಯಲ್ಲಿ ನಮ್ಮ ಕಚೇರಿಯಲ್ಲಿ ಮದುವೆ ನಡೆಸಿದಾಗ ವಧುವಿನ ಸಂಬಂಧಿಕರು ಕಚೇರಿಯನ್ನು ಹಾಳುಗೆಡವಿದರು. ಆದರೂ ನಾವು ಅಂತರಜಾತಿ ವಿವಾಹಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ. ಪ್ರಗತಿಪರ ಶಕ್ತಿಗಳು ಎಲ್ಲ ಸಮುದಾಯಗಳಲ್ಲಿಯೂ ಇವೆ, ನಾವು ಅವರನ್ನು ಗುರುತಿಸಿ ಸಂಘಟಿಸಬೇಕು. ಆಗ ಮಾತ್ರ ಜಾತಿವಾದಿ ಶಕ್ತಿಗಳ ವಿರುದ್ಧ ಸಂಘಟಿತ ಹೋರಾಟವನ್ನು ರೂಪಿಸಬಹುದು’ ಎಂದರು.

2015ರಲ್ಲಿ ಆಗಿನ ಸಿಪಿಐ(ಎಂ) ಶಾಸಕಾಂಗ ಪಕ್ಷದ ನಾಯಕ ಎ. ಸೌಂದರರಾಜನ್ ಅವರು ಜಾತಿ ಹತ್ಯೆಗಳನ್ನು ತಡೆಯಲು ವಿಶೇಷ ಕಾಯ್ದೆಯನ್ನು ಜಾರಿಗೊಳಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಆದರೆ, ಅದು ಸೋಲಪ್ಪಿತು ಎಂದು ನೆನಪಿಸಿಕೊಂಡರು.

‘ಮಧ್ಯಂತರ ಜಾತಿಗಳು ಮತ್ತು ಪರಿಶಿಷ್ಟ ಜಾತಿಗಳ ನಡುವೆ ತಪ್ಪು ತಿಳಿವಳಿಕೆ ಇದೆ. ಇದು ಅನೇಕ ಯುವ ದಂಪತಿಗಳ ಕೊಲೆಗೆ ಕಾರಣವಾಗಿದೆ. ಜಾತಿ ಗೌರವದ ಹೆಸರಿನಲ್ಲಿ ನಡೆಯುವ ಮರ್ಯಾದೆಗೇಡು ಹತ್ಯೆಗಳನ್ನು ತಡೆಯಲು ಕಾನೂನು ಜಾರಿಗೊಳಿಸಬೇಕು’ ಎಂದು ಷಣ್ಮುಗಂ ಒತ್ತಾಯಿಸಿದರು.

ಈ ಸಂಬಂಧ ತಾವು, ಸಿಪಿಐ ರಾಜ್ಯ ಕಾರ್ಯದರ್ಶಿ ಆರ್. ಮುತ್ತರಸನ್ ಮತ್ತು ವಿಸಿಕೆ ನಾಯಕ ಥೋಳ್. ತಿರುಮಾವಳವನ್ ಅವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿ ಅಂತಹ ಕಾನೂನನ್ನು ಜಾರಿಗೊಳಿಸುವಂತೆ ಒತ್ತಾಯಿಸಿದ್ದೇವೆ ಎಂದು ಹೇಳಿದರು.

‘ನಾವು 30 ನಿಮಿಷಗಳ ಕಾಲ ಮುಖ್ಯಮಂತ್ರಿಯವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದೇವೆ. ಅವರು ನಮ್ಮ ಬೇಡಿಕೆಗೆ ಒಲವು ತೋರಿಸಿದ್ದಾರೆ ಎಂದು ನಮಗೆ ಅನಿಸಿತು. ಅವರು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಕಾನೂನನ್ನು ಜಾರಿಗೊಳಿಸಬೇಕು’ ಎಂದರು.

ಕೇವಲ ತಿರುನೆಲ್ವೇಲಿ ಜಿಲ್ಲೆಯಲ್ಲಿಯೇ ಒಂದು ವರ್ಷದಲ್ಲಿ 240 ಮರ್ಯಾದೆಗೇಡು ಹತ್ಯೆಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣ ಮೀರಿ ಹೋಗಿದೆ ಎಂದು ಷಣ್ಮುಗಂ ಅವರು  ಹೇಳಿದರು.

‘ಈಗ ಕಾಯ್ದೆಗಾಗಿ ಸಾರ್ವಜನಿಕರ ಬೆಂಬಲ ಹೆಚ್ಚುತ್ತಿದೆ ಮತ್ತು ಸರ್ಕಾರ ಈ ಅವಕಾಶವನ್ನು ಬಳಸಿಕೊಳ್ಳಬೇಕು’ ಎಂದು ಅವರು ಹೇಳಿದರು.

ಕೇರಳ| ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೃಷ್ಣಕುಮಾರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...