Homeಮುಖಪುಟತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ಉಳಿದ 80 ಸ್ಥಾನಗಳಲ್ಲಿ ತಲಾ 40 ಸ್ಥಾನಗಳಲ್ಲಿ ಎರಡು ಮೈತ್ರಿ ಪಕ್ಷಗಳು ಸ್ಪರ್ಧಿಸಲಿವೆ

- Advertisement -
- Advertisement -

ಪಂಚರಾಜ್ಯ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರಾಜ್ಯಗಳೆಂದರೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ. ರಾಜಕಾರಣಿಗಳ ಜೊತೆಗೆ ನಟ-ನಟಿಯರು ಸೇರಿ ಚುನಾವಣೆಯನ್ನು ರಂಗೇರಿಸಿದ್ದಾರೆ. ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 234 ವಿಧಾನಸಭಾ ಸ್ಥಾನಗಳ ಪೈಕಿ 154 ಸ್ಥಾನಗಳಲ್ಲಿ ಮಕ್ಕಳ್ ನೀಧಿ ಮಯ್ಯಂ ಸ್ಪರ್ಧಿಸುವುದಾಗಿ ಕಮಲ್ ಹಾಸನ್ ಘೋಷಿಸಿದ್ದಾರೆ.

ಮಕ್ಕಳ್ ನೀಧಿ ಮಯ್ಯಂ ತನ್ನ ಇಬ್ಬರು ಮೈತ್ರಿ ಪಾಲುದಾರರಾದ ಅಖಿಲ ಭಾರತ ಸಮತುವಾ ಮಕ್ಕಳ್ ಕಚ್ಚಿ ಮತ್ತು ಇಂಡಿಯಾ ಜನನಾಯಾಗ ಕಚ್ಚಿ ಪಕ್ಷಗಳು ಉಳಿದ 80 ಸ್ಥಾನಗಳಲ್ಲಿ ತಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಅವರು ತಿಳಿಸಿದ್ದಾರೆ.

ಸೀಟು ಹಂಚಿಕೆ ಒಪ್ಪಂದವನ್ನು ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಸೋಮವಾರ ತಡರಾತ್ರಿ ಘೋಷಿಸಿತು. 2019 ರ ಲೋಕಸಭಾ ಚುನಾವಣೆಯಲ್ಲಿ ಮಕ್ಕಳ್ ನೀಧಿ ಮಯ್ಯಂ ತಮಿಳುನಾಡಿನಲ್ಲಿ ಶೇಕಡಾ 4 ರಷ್ಟು ಮತಗಳನ್ನು ಗಳಿಸಿ ಗಮನ ಸೆಳೆದಿತ್ತು.

ಇದನ್ನೂ ಓದಿ: ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

“ಜನರ ಬಹುದಿನಗಳ ಆಕಾಂಕ್ಷೆಗಳನ್ನು ಈಡೇರಿಸುವ ಮೂಲಕ ತಮಿಳುನಾಡನ್ನು ಪರಿವರ್ತಿಸುವ ಸಾಮಾನ್ಯ ಗುರಿಗೆ ಪಕ್ಷಗಳು ಬದ್ಧವಾಗಿವೆ. ತಮಿಳುನಾಡಿನ ಹೆಮ್ಮೆ ಮತ್ತು ವೈಭವವನ್ನು ಪುನಃಸ್ಥಾಪಿಸುವ ಸಾಮಾನ್ಯ ಕಾರ್ಯಸೂಚಿಯೊಂದಿಗೆ, ಈ ಪಕ್ಷಗಳು ದೀರ್ಘಕಾಲ ಒಟ್ಟಾಗಿರಲು ನಿರ್ಧರಿಸಿದ್ದಾರೆ” ಎಂದು ಪಕ್ಷ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಕ್ಷವು ವಿಶಿಷ್ಟವಾದ ಟಿಕೆಟ್ ವಿತರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಅಭ್ಯರ್ಥಿಗಳಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ವ್ಯವಸ್ಥೆಯನ್ನು ಪ್ರಾರಂಭಿಸಿದ್ದಾರೆ. ಚುನಾವಣೆಯಲ್ಲಿ ಅಂತಿಮವಾಗಿ ಆಯ್ಕೆಯಾಗಲು ಶಾರ್ಟ್‌ಲಿಸ್ಟ್ ಮಾಡಿದ ಮೇಲೆ ಅಬ್ಯರ್ಥಿಗಳ ಸಂದರ್ಶನ ನಡೆಯುತ್ತವೆ.

ಎಂಎನ್‌ಎಂ ಭ್ರಷ್ಟಾಚಾರ, ಉದ್ಯೋಗಗಳು, ಅಭಿವೃದ್ಧಿ ಹೊಂದುತ್ತಿರುವ ಹಳ್ಳಿಗಳು ಮತ್ತು ಜನ ಸ್ನೇಹಿ ಇ-ಆಡಳಿತವನ್ನು ಪ್ರಮುಖ ವಿಷಯಗಳಾಗಿ ಪ್ರಚಾರದಲ್ಲಿ ಬಳಸುತ್ತಿದೆ. ಗೃಹಿಣಿಗಳಿಗೆ ಸಂಬಳ ನೀಡುವ ಭರವಸೆ ನೀಡಿದೆ ಮತ್ತು ಸರ್ಕಾರಿ ಯೋಜನೆಗಳನ್ನು ಸುಲಭವಾಗಿ ತಿಳಿಯಲು ಮತ್ತು ಪ್ರಯೋಜನ ಪಡೆಯಲು ಜನರಿಗೆ ಸಹಾಯ ಮಾಡಲು ಸಾರ್ವಜನಿಕ ಸಂಪನ್ಮೂಲವಾಗಿ ಎಲ್ಲಾ ಮನೆಗಳಲ್ಲಿ ಇಂಟರ್ನೆಟ್ ಹೊಂದಿರುವ ಉಚಿತ ಕಂಪ್ಯೂಟರ್‌ಗಳನ್ನು ನೀಡುವ ಭರವಸೆ ನೀಡಿದೆ.

ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಲ್ಲಿ ಕನಿಷ್ಠ 180 ಸ್ಥಾನಗಳಿಂದ ಸ್ಪರ್ಧಿಸಲು ಡಿಎಂಕೆ ಬಯಸಿದೆ. ಉಳಿದ 54 ಸ್ಥಾನಗಳನ್ನು ತಮ್ಮ ಮೈತ್ರಿ ಪಾಲುದಾರರಿಗೆ ಬಿಡಲು ಸಿದ್ಧವಿದೆ. AIADMK ಮೈತ್ರಿಕೂಟವು ಸೀಟು ಹಂಚಿಕೆ ಆರಂಭಿಸಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿಗೆ 20 ಸ್ಥಾನ ಮತ್ತು ಪ್ರಾದೇಶಿಕ ಪಕ್ಷ PMKಗೆ 23 ಸ್ಥಾನ ಹಂಚಿಕೆ ಮಾಡಿದೆ.


ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...