Homeಮುಖಪುಟತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ಉಳಿದ 80 ಸ್ಥಾನಗಳಲ್ಲಿ ತಲಾ 40 ಸ್ಥಾನಗಳಲ್ಲಿ ಎರಡು ಮೈತ್ರಿ ಪಕ್ಷಗಳು ಸ್ಪರ್ಧಿಸಲಿವೆ

- Advertisement -
- Advertisement -

ಪಂಚರಾಜ್ಯ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರಾಜ್ಯಗಳೆಂದರೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ. ರಾಜಕಾರಣಿಗಳ ಜೊತೆಗೆ ನಟ-ನಟಿಯರು ಸೇರಿ ಚುನಾವಣೆಯನ್ನು ರಂಗೇರಿಸಿದ್ದಾರೆ. ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 234 ವಿಧಾನಸಭಾ ಸ್ಥಾನಗಳ ಪೈಕಿ 154 ಸ್ಥಾನಗಳಲ್ಲಿ ಮಕ್ಕಳ್ ನೀಧಿ ಮಯ್ಯಂ ಸ್ಪರ್ಧಿಸುವುದಾಗಿ ಕಮಲ್ ಹಾಸನ್ ಘೋಷಿಸಿದ್ದಾರೆ.

ಮಕ್ಕಳ್ ನೀಧಿ ಮಯ್ಯಂ ತನ್ನ ಇಬ್ಬರು ಮೈತ್ರಿ ಪಾಲುದಾರರಾದ ಅಖಿಲ ಭಾರತ ಸಮತುವಾ ಮಕ್ಕಳ್ ಕಚ್ಚಿ ಮತ್ತು ಇಂಡಿಯಾ ಜನನಾಯಾಗ ಕಚ್ಚಿ ಪಕ್ಷಗಳು ಉಳಿದ 80 ಸ್ಥಾನಗಳಲ್ಲಿ ತಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಅವರು ತಿಳಿಸಿದ್ದಾರೆ.

ಸೀಟು ಹಂಚಿಕೆ ಒಪ್ಪಂದವನ್ನು ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಸೋಮವಾರ ತಡರಾತ್ರಿ ಘೋಷಿಸಿತು. 2019 ರ ಲೋಕಸಭಾ ಚುನಾವಣೆಯಲ್ಲಿ ಮಕ್ಕಳ್ ನೀಧಿ ಮಯ್ಯಂ ತಮಿಳುನಾಡಿನಲ್ಲಿ ಶೇಕಡಾ 4 ರಷ್ಟು ಮತಗಳನ್ನು ಗಳಿಸಿ ಗಮನ ಸೆಳೆದಿತ್ತು.

ಇದನ್ನೂ ಓದಿ: ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

“ಜನರ ಬಹುದಿನಗಳ ಆಕಾಂಕ್ಷೆಗಳನ್ನು ಈಡೇರಿಸುವ ಮೂಲಕ ತಮಿಳುನಾಡನ್ನು ಪರಿವರ್ತಿಸುವ ಸಾಮಾನ್ಯ ಗುರಿಗೆ ಪಕ್ಷಗಳು ಬದ್ಧವಾಗಿವೆ. ತಮಿಳುನಾಡಿನ ಹೆಮ್ಮೆ ಮತ್ತು ವೈಭವವನ್ನು ಪುನಃಸ್ಥಾಪಿಸುವ ಸಾಮಾನ್ಯ ಕಾರ್ಯಸೂಚಿಯೊಂದಿಗೆ, ಈ ಪಕ್ಷಗಳು ದೀರ್ಘಕಾಲ ಒಟ್ಟಾಗಿರಲು ನಿರ್ಧರಿಸಿದ್ದಾರೆ” ಎಂದು ಪಕ್ಷ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಕ್ಷವು ವಿಶಿಷ್ಟವಾದ ಟಿಕೆಟ್ ವಿತರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಅಭ್ಯರ್ಥಿಗಳಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ವ್ಯವಸ್ಥೆಯನ್ನು ಪ್ರಾರಂಭಿಸಿದ್ದಾರೆ. ಚುನಾವಣೆಯಲ್ಲಿ ಅಂತಿಮವಾಗಿ ಆಯ್ಕೆಯಾಗಲು ಶಾರ್ಟ್‌ಲಿಸ್ಟ್ ಮಾಡಿದ ಮೇಲೆ ಅಬ್ಯರ್ಥಿಗಳ ಸಂದರ್ಶನ ನಡೆಯುತ್ತವೆ.

ಎಂಎನ್‌ಎಂ ಭ್ರಷ್ಟಾಚಾರ, ಉದ್ಯೋಗಗಳು, ಅಭಿವೃದ್ಧಿ ಹೊಂದುತ್ತಿರುವ ಹಳ್ಳಿಗಳು ಮತ್ತು ಜನ ಸ್ನೇಹಿ ಇ-ಆಡಳಿತವನ್ನು ಪ್ರಮುಖ ವಿಷಯಗಳಾಗಿ ಪ್ರಚಾರದಲ್ಲಿ ಬಳಸುತ್ತಿದೆ. ಗೃಹಿಣಿಗಳಿಗೆ ಸಂಬಳ ನೀಡುವ ಭರವಸೆ ನೀಡಿದೆ ಮತ್ತು ಸರ್ಕಾರಿ ಯೋಜನೆಗಳನ್ನು ಸುಲಭವಾಗಿ ತಿಳಿಯಲು ಮತ್ತು ಪ್ರಯೋಜನ ಪಡೆಯಲು ಜನರಿಗೆ ಸಹಾಯ ಮಾಡಲು ಸಾರ್ವಜನಿಕ ಸಂಪನ್ಮೂಲವಾಗಿ ಎಲ್ಲಾ ಮನೆಗಳಲ್ಲಿ ಇಂಟರ್ನೆಟ್ ಹೊಂದಿರುವ ಉಚಿತ ಕಂಪ್ಯೂಟರ್‌ಗಳನ್ನು ನೀಡುವ ಭರವಸೆ ನೀಡಿದೆ.

ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಲ್ಲಿ ಕನಿಷ್ಠ 180 ಸ್ಥಾನಗಳಿಂದ ಸ್ಪರ್ಧಿಸಲು ಡಿಎಂಕೆ ಬಯಸಿದೆ. ಉಳಿದ 54 ಸ್ಥಾನಗಳನ್ನು ತಮ್ಮ ಮೈತ್ರಿ ಪಾಲುದಾರರಿಗೆ ಬಿಡಲು ಸಿದ್ಧವಿದೆ. AIADMK ಮೈತ್ರಿಕೂಟವು ಸೀಟು ಹಂಚಿಕೆ ಆರಂಭಿಸಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿಗೆ 20 ಸ್ಥಾನ ಮತ್ತು ಪ್ರಾದೇಶಿಕ ಪಕ್ಷ PMKಗೆ 23 ಸ್ಥಾನ ಹಂಚಿಕೆ ಮಾಡಿದೆ.


ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...