Homeಮುಖಪುಟತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ಉಳಿದ 80 ಸ್ಥಾನಗಳಲ್ಲಿ ತಲಾ 40 ಸ್ಥಾನಗಳಲ್ಲಿ ಎರಡು ಮೈತ್ರಿ ಪಕ್ಷಗಳು ಸ್ಪರ್ಧಿಸಲಿವೆ

- Advertisement -
- Advertisement -

ಪಂಚರಾಜ್ಯ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರಾಜ್ಯಗಳೆಂದರೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ. ರಾಜಕಾರಣಿಗಳ ಜೊತೆಗೆ ನಟ-ನಟಿಯರು ಸೇರಿ ಚುನಾವಣೆಯನ್ನು ರಂಗೇರಿಸಿದ್ದಾರೆ. ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 234 ವಿಧಾನಸಭಾ ಸ್ಥಾನಗಳ ಪೈಕಿ 154 ಸ್ಥಾನಗಳಲ್ಲಿ ಮಕ್ಕಳ್ ನೀಧಿ ಮಯ್ಯಂ ಸ್ಪರ್ಧಿಸುವುದಾಗಿ ಕಮಲ್ ಹಾಸನ್ ಘೋಷಿಸಿದ್ದಾರೆ.

ಮಕ್ಕಳ್ ನೀಧಿ ಮಯ್ಯಂ ತನ್ನ ಇಬ್ಬರು ಮೈತ್ರಿ ಪಾಲುದಾರರಾದ ಅಖಿಲ ಭಾರತ ಸಮತುವಾ ಮಕ್ಕಳ್ ಕಚ್ಚಿ ಮತ್ತು ಇಂಡಿಯಾ ಜನನಾಯಾಗ ಕಚ್ಚಿ ಪಕ್ಷಗಳು ಉಳಿದ 80 ಸ್ಥಾನಗಳಲ್ಲಿ ತಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಅವರು ತಿಳಿಸಿದ್ದಾರೆ.

ಸೀಟು ಹಂಚಿಕೆ ಒಪ್ಪಂದವನ್ನು ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಸೋಮವಾರ ತಡರಾತ್ರಿ ಘೋಷಿಸಿತು. 2019 ರ ಲೋಕಸಭಾ ಚುನಾವಣೆಯಲ್ಲಿ ಮಕ್ಕಳ್ ನೀಧಿ ಮಯ್ಯಂ ತಮಿಳುನಾಡಿನಲ್ಲಿ ಶೇಕಡಾ 4 ರಷ್ಟು ಮತಗಳನ್ನು ಗಳಿಸಿ ಗಮನ ಸೆಳೆದಿತ್ತು.

ಇದನ್ನೂ ಓದಿ: ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

“ಜನರ ಬಹುದಿನಗಳ ಆಕಾಂಕ್ಷೆಗಳನ್ನು ಈಡೇರಿಸುವ ಮೂಲಕ ತಮಿಳುನಾಡನ್ನು ಪರಿವರ್ತಿಸುವ ಸಾಮಾನ್ಯ ಗುರಿಗೆ ಪಕ್ಷಗಳು ಬದ್ಧವಾಗಿವೆ. ತಮಿಳುನಾಡಿನ ಹೆಮ್ಮೆ ಮತ್ತು ವೈಭವವನ್ನು ಪುನಃಸ್ಥಾಪಿಸುವ ಸಾಮಾನ್ಯ ಕಾರ್ಯಸೂಚಿಯೊಂದಿಗೆ, ಈ ಪಕ್ಷಗಳು ದೀರ್ಘಕಾಲ ಒಟ್ಟಾಗಿರಲು ನಿರ್ಧರಿಸಿದ್ದಾರೆ” ಎಂದು ಪಕ್ಷ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಕ್ಷವು ವಿಶಿಷ್ಟವಾದ ಟಿಕೆಟ್ ವಿತರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಅಭ್ಯರ್ಥಿಗಳಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ವ್ಯವಸ್ಥೆಯನ್ನು ಪ್ರಾರಂಭಿಸಿದ್ದಾರೆ. ಚುನಾವಣೆಯಲ್ಲಿ ಅಂತಿಮವಾಗಿ ಆಯ್ಕೆಯಾಗಲು ಶಾರ್ಟ್‌ಲಿಸ್ಟ್ ಮಾಡಿದ ಮೇಲೆ ಅಬ್ಯರ್ಥಿಗಳ ಸಂದರ್ಶನ ನಡೆಯುತ್ತವೆ.

ಎಂಎನ್‌ಎಂ ಭ್ರಷ್ಟಾಚಾರ, ಉದ್ಯೋಗಗಳು, ಅಭಿವೃದ್ಧಿ ಹೊಂದುತ್ತಿರುವ ಹಳ್ಳಿಗಳು ಮತ್ತು ಜನ ಸ್ನೇಹಿ ಇ-ಆಡಳಿತವನ್ನು ಪ್ರಮುಖ ವಿಷಯಗಳಾಗಿ ಪ್ರಚಾರದಲ್ಲಿ ಬಳಸುತ್ತಿದೆ. ಗೃಹಿಣಿಗಳಿಗೆ ಸಂಬಳ ನೀಡುವ ಭರವಸೆ ನೀಡಿದೆ ಮತ್ತು ಸರ್ಕಾರಿ ಯೋಜನೆಗಳನ್ನು ಸುಲಭವಾಗಿ ತಿಳಿಯಲು ಮತ್ತು ಪ್ರಯೋಜನ ಪಡೆಯಲು ಜನರಿಗೆ ಸಹಾಯ ಮಾಡಲು ಸಾರ್ವಜನಿಕ ಸಂಪನ್ಮೂಲವಾಗಿ ಎಲ್ಲಾ ಮನೆಗಳಲ್ಲಿ ಇಂಟರ್ನೆಟ್ ಹೊಂದಿರುವ ಉಚಿತ ಕಂಪ್ಯೂಟರ್‌ಗಳನ್ನು ನೀಡುವ ಭರವಸೆ ನೀಡಿದೆ.

ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಲ್ಲಿ ಕನಿಷ್ಠ 180 ಸ್ಥಾನಗಳಿಂದ ಸ್ಪರ್ಧಿಸಲು ಡಿಎಂಕೆ ಬಯಸಿದೆ. ಉಳಿದ 54 ಸ್ಥಾನಗಳನ್ನು ತಮ್ಮ ಮೈತ್ರಿ ಪಾಲುದಾರರಿಗೆ ಬಿಡಲು ಸಿದ್ಧವಿದೆ. AIADMK ಮೈತ್ರಿಕೂಟವು ಸೀಟು ಹಂಚಿಕೆ ಆರಂಭಿಸಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿಗೆ 20 ಸ್ಥಾನ ಮತ್ತು ಪ್ರಾದೇಶಿಕ ಪಕ್ಷ PMKಗೆ 23 ಸ್ಥಾನ ಹಂಚಿಕೆ ಮಾಡಿದೆ.


ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...