Homeಮುಖಪುಟತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ಉಳಿದ 80 ಸ್ಥಾನಗಳಲ್ಲಿ ತಲಾ 40 ಸ್ಥಾನಗಳಲ್ಲಿ ಎರಡು ಮೈತ್ರಿ ಪಕ್ಷಗಳು ಸ್ಪರ್ಧಿಸಲಿವೆ

- Advertisement -
- Advertisement -

ಪಂಚರಾಜ್ಯ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ರಾಜ್ಯಗಳೆಂದರೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ. ರಾಜಕಾರಣಿಗಳ ಜೊತೆಗೆ ನಟ-ನಟಿಯರು ಸೇರಿ ಚುನಾವಣೆಯನ್ನು ರಂಗೇರಿಸಿದ್ದಾರೆ. ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 234 ವಿಧಾನಸಭಾ ಸ್ಥಾನಗಳ ಪೈಕಿ 154 ಸ್ಥಾನಗಳಲ್ಲಿ ಮಕ್ಕಳ್ ನೀಧಿ ಮಯ್ಯಂ ಸ್ಪರ್ಧಿಸುವುದಾಗಿ ಕಮಲ್ ಹಾಸನ್ ಘೋಷಿಸಿದ್ದಾರೆ.

ಮಕ್ಕಳ್ ನೀಧಿ ಮಯ್ಯಂ ತನ್ನ ಇಬ್ಬರು ಮೈತ್ರಿ ಪಾಲುದಾರರಾದ ಅಖಿಲ ಭಾರತ ಸಮತುವಾ ಮಕ್ಕಳ್ ಕಚ್ಚಿ ಮತ್ತು ಇಂಡಿಯಾ ಜನನಾಯಾಗ ಕಚ್ಚಿ ಪಕ್ಷಗಳು ಉಳಿದ 80 ಸ್ಥಾನಗಳಲ್ಲಿ ತಲಾ 40 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಅವರು ತಿಳಿಸಿದ್ದಾರೆ.

ಸೀಟು ಹಂಚಿಕೆ ಒಪ್ಪಂದವನ್ನು ನಟ, ರಾಜಕಾರಣಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಸೋಮವಾರ ತಡರಾತ್ರಿ ಘೋಷಿಸಿತು. 2019 ರ ಲೋಕಸಭಾ ಚುನಾವಣೆಯಲ್ಲಿ ಮಕ್ಕಳ್ ನೀಧಿ ಮಯ್ಯಂ ತಮಿಳುನಾಡಿನಲ್ಲಿ ಶೇಕಡಾ 4 ರಷ್ಟು ಮತಗಳನ್ನು ಗಳಿಸಿ ಗಮನ ಸೆಳೆದಿತ್ತು.

ಇದನ್ನೂ ಓದಿ: ತಮಿಳುನಾಡು ಚುನಾವಣೆ: BJPಗೆ 20 ಮತ್ತು PMKಗೆ 23 ಸೀಟು ನೀಡಿದ AIADMK

“ಜನರ ಬಹುದಿನಗಳ ಆಕಾಂಕ್ಷೆಗಳನ್ನು ಈಡೇರಿಸುವ ಮೂಲಕ ತಮಿಳುನಾಡನ್ನು ಪರಿವರ್ತಿಸುವ ಸಾಮಾನ್ಯ ಗುರಿಗೆ ಪಕ್ಷಗಳು ಬದ್ಧವಾಗಿವೆ. ತಮಿಳುನಾಡಿನ ಹೆಮ್ಮೆ ಮತ್ತು ವೈಭವವನ್ನು ಪುನಃಸ್ಥಾಪಿಸುವ ಸಾಮಾನ್ಯ ಕಾರ್ಯಸೂಚಿಯೊಂದಿಗೆ, ಈ ಪಕ್ಷಗಳು ದೀರ್ಘಕಾಲ ಒಟ್ಟಾಗಿರಲು ನಿರ್ಧರಿಸಿದ್ದಾರೆ” ಎಂದು ಪಕ್ಷ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಕ್ಷವು ವಿಶಿಷ್ಟವಾದ ಟಿಕೆಟ್ ವಿತರಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಅಭ್ಯರ್ಥಿಗಳಾಗಿ ಅರ್ಜಿ ಸಲ್ಲಿಸಲು ಆನ್‌ಲೈನ್ ವ್ಯವಸ್ಥೆಯನ್ನು ಪ್ರಾರಂಭಿಸಿದ್ದಾರೆ. ಚುನಾವಣೆಯಲ್ಲಿ ಅಂತಿಮವಾಗಿ ಆಯ್ಕೆಯಾಗಲು ಶಾರ್ಟ್‌ಲಿಸ್ಟ್ ಮಾಡಿದ ಮೇಲೆ ಅಬ್ಯರ್ಥಿಗಳ ಸಂದರ್ಶನ ನಡೆಯುತ್ತವೆ.

ಎಂಎನ್‌ಎಂ ಭ್ರಷ್ಟಾಚಾರ, ಉದ್ಯೋಗಗಳು, ಅಭಿವೃದ್ಧಿ ಹೊಂದುತ್ತಿರುವ ಹಳ್ಳಿಗಳು ಮತ್ತು ಜನ ಸ್ನೇಹಿ ಇ-ಆಡಳಿತವನ್ನು ಪ್ರಮುಖ ವಿಷಯಗಳಾಗಿ ಪ್ರಚಾರದಲ್ಲಿ ಬಳಸುತ್ತಿದೆ. ಗೃಹಿಣಿಗಳಿಗೆ ಸಂಬಳ ನೀಡುವ ಭರವಸೆ ನೀಡಿದೆ ಮತ್ತು ಸರ್ಕಾರಿ ಯೋಜನೆಗಳನ್ನು ಸುಲಭವಾಗಿ ತಿಳಿಯಲು ಮತ್ತು ಪ್ರಯೋಜನ ಪಡೆಯಲು ಜನರಿಗೆ ಸಹಾಯ ಮಾಡಲು ಸಾರ್ವಜನಿಕ ಸಂಪನ್ಮೂಲವಾಗಿ ಎಲ್ಲಾ ಮನೆಗಳಲ್ಲಿ ಇಂಟರ್ನೆಟ್ ಹೊಂದಿರುವ ಉಚಿತ ಕಂಪ್ಯೂಟರ್‌ಗಳನ್ನು ನೀಡುವ ಭರವಸೆ ನೀಡಿದೆ.

ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಲ್ಲಿ ಕನಿಷ್ಠ 180 ಸ್ಥಾನಗಳಿಂದ ಸ್ಪರ್ಧಿಸಲು ಡಿಎಂಕೆ ಬಯಸಿದೆ. ಉಳಿದ 54 ಸ್ಥಾನಗಳನ್ನು ತಮ್ಮ ಮೈತ್ರಿ ಪಾಲುದಾರರಿಗೆ ಬಿಡಲು ಸಿದ್ಧವಿದೆ. AIADMK ಮೈತ್ರಿಕೂಟವು ಸೀಟು ಹಂಚಿಕೆ ಆರಂಭಿಸಿದ್ದು, ರಾಷ್ಟ್ರೀಯ ಪಕ್ಷ ಬಿಜೆಪಿಗೆ 20 ಸ್ಥಾನ ಮತ್ತು ಪ್ರಾದೇಶಿಕ ಪಕ್ಷ PMKಗೆ 23 ಸ್ಥಾನ ಹಂಚಿಕೆ ಮಾಡಿದೆ.


ಇದನ್ನೂ ಓದಿ: ತಮಿಳುನಾಡು: DMK 180 ಸ್ಥಾನಗಳಲ್ಲಿ ಸ್ಪರ್ಧಿಸಲು ಹಠ ಹಿಡಿದಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...