Homeಕರ್ನಾಟಕತಮಿಳುನಾಡಿನಂತೆ ಕಾನೂನು ಹೋರಾಟ ಮಾಡುತ್ತೇವೆ: ರಾಜ್ಯಪಾಲರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ತಮಿಳುನಾಡಿನಂತೆ ಕಾನೂನು ಹೋರಾಟ ಮಾಡುತ್ತೇವೆ: ರಾಜ್ಯಪಾಲರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

- Advertisement -
- Advertisement -

ರಾಜ್ಯಪಾಲ ಗೆಹ್ಲೋಟ್ ಅವರು ಶಾಸಕಾಂಗವು ಅಂಗೀಕರಿಸಿದ ಮಸೂದೆಗಳನ್ನು ವಾಪಾಸು ಕಳುಹಿಸಿದರೆ, ರಾಜ್ಯ ಸರ್ಕಾರ ಅವರ ವಿರುದ್ಧ ‘ತಮಿಳುನಾಡಿನಂತೆಯೇ’ ಕಾನೂನು ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡುವೆ ಸಂಘರ್ಷ ಹೆಚ್ಚುತ್ತಿರುವ ಸೂಚನೆಯನ್ನು ಅವರು ನೀಡಿದ್ದಾರೆ. ತಮಿಳುನಾಡಿನಂತೆ ಕಾನೂನು

“ಮಸೂದೆ (ಹಿಂತಿರುಗಿ) ಬರಲಿ. ಅದನ್ನು ನಾವು ಮೌಲ್ಯಮಾಪನ ಮಾಡುತ್ತೇವೆ. ಆದರೆ ಅದರಲ್ಲಿ ಹೊಸದೇನಿಲ್ಲ? ತಮಿಳುನಾಡು ಮತ್ತು ಕೇರಳದಲ್ಲಿ, ಅವರು ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಮತ್ತು ಕೇಶವ ಕೃಪ (ರಾಜ್ಯ ಆರ್‌ಎಸ್‌ಎಸ್ ಪ್ರಧಾನ ಕಚೇರಿ) ದ ಶಾಖೆಗಳಾಗಿ ಬಳಸಿಕೊಂಡಿದ್ದಾರೆ.” ಎಂದು ಬಿಜೆಪಿ ಪರ ರಾಜ್ಯಪಾಲರ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೀಗಾದರೆ, ಸರ್ಕಾರಗಳು ಏನು ಮಾಡುತ್ತದೆ? ನಾವು ನಮ್ಮ ಸ್ಪಷ್ಟೀಕರಣಗಳನ್ನು ಕಳುಹಿಸುತ್ತೇವೆ. ರಾಜ್ಯಪಾಲರಿಗೆ ಮನವರಿಕೆಯಾಗದಿದ್ದರೆ, ನಾವು ತಮಿಳುನಾಡಿನಂತೆ ಸುಪ್ರೀಂಕೋರ್ಟ್ ಅನ್ನು ಸಂಪರ್ಕಿಸಬೇಕಾಗುತ್ತದೆ, ”ಎಂದು ಪ್ರಿಯಾಂಕ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜ್ಯಪಾಲರು ಸ್ಪಷ್ಟೀಕರಣಕ್ಕಾಗಿ ವಾಪಸ್ ಕಳುಹಿಸಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಮಸೂದೆಯು, ರಾಜ್ಯಪಾಲರನ್ನು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಬದಲಾಯಿಸುವ ಉದ್ದೇಶವನ್ನು ಹೊಂದಿದೆ.

ರಾಜಭವನ ಮತ್ತು ಸರ್ಕಾರದ ನಡುವಿನ ಸಂಘರ್ಷ ಯಾವಾಗ ಕೊನೆಗೊಳ್ಳುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,”ಅದನ್ನು ಕೊನೆಗೊಳಿಸುವುದು ಯಾರ ಹೊಣೆ? ಅದಕ್ಕಾಗಿ ನಾವು ಮಸೂದೆಯನ್ನು ತರಬೇಕೆ? ಇದನ್ನು ಶಾಸಕಾಂಗದಲ್ಲಿ ಚರ್ಚಿಸಲಾಗುತ್ತದೆ ಮತ್ತು ಮತದಾನ ನಡೆಯಲಿದೆ. ರಾಜ್ಯಪಾಲರು ಶಾಸಕಾಂಗದ ನಿರ್ಧಾರಗಳನ್ನು ಉಲ್ಲಂಘಿಸುವ ಮೂಲಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರೆ, ಅದು ಸರಿಯೇ?” ಎಂದು ಕೇಳಿದ್ದಾರೆ.

ಸರ್ಕಾರದ ವಕ್ತಾರರೂ ಆಗಿರುವ ಪ್ರಿಯಾಂಕ್, ರಾಜ್ಯಪಾಲರು ಕೇಂದ್ರ ಸರ್ಕಾರದ ಮಾತನ್ನು ಕೇಳುವ ಮೂಲಕ ಶಾಸಕಾಂಗದ ನಿರ್ಧಾರಗಳನ್ನು ತಳ್ಳಿಹಾಕುತ್ತಿದ್ದಾರೆ. ಈ ಮೂಲಕ ಅವರು ಪ್ರಜಾಪ್ರಭುತ್ವವನ್ನು “ಕೊಲೆ” ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ತಮಿಳುನಾಡಿನಂತೆ ಕಾನೂನು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ಮಹಾರಾಷ್ಟ್ರ ಸರಕಾರದ ಸಾಲ ಮನ್ನಾ ಭರವಸೆ ಉಲ್ಲಂಘನೆ: 90,000ಕ್ಕೆ ಯಕೃತ್ತು, 75,000ಕ್ಕೆ ಕಿಡ್ನಿ ಮಾರಾಟಕ್ಕಿಟ್ಟು ರೈತನ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...