Homeಮುಖಪುಟತಮಿಳುನಾಡು ವಿಧಾನಸಭೆ: ವಾಡಿಕೆ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಆರ್‌.ಎನ್. ರವಿ

ತಮಿಳುನಾಡು ವಿಧಾನಸಭೆ: ವಾಡಿಕೆ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಆರ್‌.ಎನ್. ರವಿ

- Advertisement -
- Advertisement -

ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಮತ್ತು ರಾಜಭವನದ ನಡುವಿನ ತಿಕ್ಕಾಟ ಮುಂದುವರಿದಿದ್ದು, ರಾಜ್ಯಪಾಲ ಆರ್‌ಎನ್ ರವಿ ಇಂದು ವರ್ಷದ ಮೊದಲ ಅಧಿವೇಶನದ ಆರಂಭದಲ್ಲಿ ವಿಧಾನಸಭೆಯನ್ನು ಉದ್ದೇಶಿಸಿ ವಾಡಿಕೆ ಭಾಷಣ ಮಾಡಲು ನಿರಾಕರಿಸಿದ್ದಾರೆ.

ರಾಜ್ಯ ಸರ್ಕಾರವು ತನ್ನ ಕಾರ್ಯವನ್ನು ಪರಿಶೀಲಿಸಿದ ಮತ್ತು ಅಧಿವೇಶನದ ಕಾರ್ಯಸೂಚಿಯನ್ನು ರೂಪಿಸಿದ ಭಾಷಣದ ತಮಿಳು-ಇಂಗ್ಲಿಷ್ ಅನುವಾದವನ್ನು ಸ್ಪೀಕರ್ ಎಂ. ಅಪ್ಪಾವು ಅವರು ಓದಿದರು. ರಾಜ್ಯಪಾಲರು ಭಾಷಣದ ಕೊನೆಯಲ್ಲಿ ರಾಷ್ಟ್ರಗೀತೆಗೂ ಕಾಯದೆ ಅವಸರದಿಂದಲೆ ಹೊರ ನಡೆದರು.

ಡಿಎಂಕೆಯ ಹಿರಿಯ ಸಚಿವ ದುರೈ ಮುರುಗನ್ ಅವರು ರಾಜ್ಯಪಾಲರ ಟೀಕೆಗಳನ್ನು ದಾಖಲಿಸಬಾರದು ಎಂಬ ನಿರ್ಣಯವನ್ನು ಮಂಡಿಸಿದಾಗ ಅವರು ನಿರ್ಗಮಿಸಿದರು; ಅವರು ಹೊರನಡೆದ ನಂತರ ನಿರ್ಣಯ ಅಂಗೀಕರಿಸಲಾಯಿತು. ರಾಜ್ಯಪಾಲರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅಪ್ಪಾವು, ‘ತಮಿಳುನಾಡು ವಿಧಾನಸಭೆಯು ರಾಜ್ಯಪಾಲರ ಭಾಷಣದ ಮೊದಲು ರಾಜ್ಯಗೀತೆ ‘ತಮಿಳ್ ಥಾಯ್ ವಾಜ್ತು’ ಮತ್ತು ಅದರ ನಂತರ ರಾಷ್ಟ್ರಗೀತೆ ನುಡಿಸುವ ಸಂಪ್ರದಾಯವನ್ನು ಅನುಸರಿಸುತ್ತದೆ’ ಎಂದು ಹೇಳಿದರು.

‘ಸದನದಲ್ಲಿ ವೈಯಕ್ತಿಕ ಅಭಿಪ್ರಾಯಗಳನ್ನು ಹಂಚಿಕೊಳ್ಳಬಾರದು’ ಎಂದು ಹೇಳಿದ ಸ್ಪೀಕರ್, ‘ಬದಲಿಗೆ ಪಿಎಂ ಕೇರ್ಸ್ ನಿಧಿಯಿಂದ ₹50,000 ಕೋಟಿ ಪ್ರವಾಹ ಪರಿಹಾರವನ್ನು ಬಿಡುಗಡೆ ಮಾಡಲು ರಾಜ್ಯಪಾಲರು ಕೇಂದ್ರ ನೆರವನ್ನು ಪಡೆಯಬಹುದು’ ಎಂದು ಹೇಳಿದರು.

ಕಳೆದ ವರ್ಷವೂ ಸಹ, ರಾಜ್ಯಪಾಲರು ಆಡಳಿತಾರೂಢ ಡಿಎಂಕೆ ಸಿದ್ಧಪಡಿಸಿದ ಅಧಿಕೃತ ಭಾಷಣದ ಭಾಗಗಳನ್ನು ಬಿಟ್ಟುಬಿಟ್ಟಾಗ ರಾಜ್ಯಪಾಲರ ಸದನದಲ್ಲಿ ಕೆಲ ನಾಟಕೀಯ ದೃಶ್ಯಗಳು ನಡೆದವು. ಪೆರಿಯಾರ್, ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಮತ್ತು ಕೆ ಕರುಣಾನಿಧಿ ಅವರಂತಹ ನಾಯಕರನ್ನು ಉಲ್ಲೇಖಿಸಿದ ಭಾಷಣದ ಭಾಗಗಳನ್ನು ಅವರು ಓದಲಿಲ್ಲ. ಮುಖ್ಯಮಂತ್ರಿ ಸ್ಟಾಲಿನ್ ಅವರು ಅಧಿಕೃತ ಭಾಷಣವನ್ನು ಮಾತ್ರ ದಾಖಲಿಸಲು ನಿರ್ಣಯವನ್ನು ಮಂಡಿಸಿದರು; ಆಗ ರಾಜ್ಯಪಾಲರು ಸಿಟ್ಟಿನಿಂದಲೆ ಹೊರ ನಡೆದಿದ್ದರು.

ಸಾಂಪ್ರದಾಯಿಕ ಭಾಷಣವನ್ನು ನೀಡಲು ರಾಜ್ಯಪಾಲರ ನಿರಾಕರಣೆಯು ರಾಜಭವನ ಮತ್ತು ಡಿಎಂಕೆ ಸರ್ಕಾರದ ನಡುವಿನ ಇತ್ತೀಚಿನ ಮುಖಾಮುಖಿಯಾಗಿದೆ. ‘ನನ್ನ ಕೆಲಸಕ್ಕೆ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದು ರಾಜ್ಯಪಾಲರು ಪದೇ ಪದೇ ಆರೋಪಿಸಿದ್ದಾರೆ.

ಈ ಹಿಂದೆ, ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರವು ಹಗ್ಗ ಜಗ್ಗಾಟದಲ್ಲಿ ಸಿಲುಕಿತ್ತು. ನಂತರ, ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ ಮತ್ತು ಮಸೂದೆಗಳು ಮತ್ತು ನೇಮಕಾತಿಗಳನ್ನು ತೆರವುಗೊಳಿಸುತ್ತಿಲ್ಲ ಎಂದು ಡಿಎಂಕೆ ಆರೋಪಿಸಿದೆ. ಮಸೂದೆಗಳನ್ನು ಅನಿರ್ದಿಷ್ಟಾವಧಿಗೆ ತಡೆಹಿಡಿಯಲು ಸಂವಿಧಾನವು ತನಗೆ ಅಧಿಕಾರ ನೀಡುತ್ತದೆ ಎಂದು ರಾಜ್ಯಪಾಲರು ಆಗ ಹೇಳಿದ್ದರು. ಈ ವಿಷಯವು ಸುಪ್ರೀಂ ಕೋರ್ಟ್‌ಗೆ ತಲುಪಿತ್ತು, ಅದು ರಾಜ್ಯಪಾಲರು ಮಂತ್ರಿ ಮಂಡಲದ ನೆರವು ಮತ್ತು ಸಲಹೆಯ ಮೇರೆಗೆ ಕಾರ್ಯನಿರ್ವಹಿಸಬೇಕು ಎಂದು ತೀರ್ಪು ನೀಡಿತು. ನಂತರ ರಾಜ್ಯಪಾಲರು ಕೆಲವು ವಿಧೇಯಕಗಳನ್ನು ಅಂಗೀಕರಿಸಿದ್ದರು.

ಕಳೆದ ವರ್ಷ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮುಖ್ಯಮಂತ್ರಿ ಸ್ಟಾಲಿನ್ ಪತ್ರ ಬರೆದಾಗ ರವಿ ಅವರನ್ನು ಉನ್ನತ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿದ್ದರು. ಈ ಜಗಳ ರಾಷ್ಟ್ರಪತಿ ಭವನಕ್ಕೂ ತಲುಪಿತ್ತು. ರಾಜ್ಯದ ಜನತೆ ಮತ್ತು ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುವ ಮೂಲಕ ರಾಜ್ಯಪಾಲರು ತಮ್ಮ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

ಪ್ರತಿಪಕ್ಷದ ಆಡಳಿತವಿರುವ ರಾಜ್ಯ ಸರ್ಕಾರವನ್ನು ಬೀಳಿಸಲು ಅವಕಾಶಕ್ಕಾಗಿ ಹುಡುಕುತ್ತಿರುವ ರಾಜ್ಯಪಾಲರನ್ನು ಕೇವಲ ಕೇಂದ್ರದ ಏಜೆಂಟ್ ಎಂದು ನೋಡಲಾಗುತ್ತದೆ ಎಂದು ಅವರು ಹೇಳಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ರಾಜ್ಯಪಾಲರ ಕ್ರಮವನ್ನು ಸ್ಟಾಲಿನ್ ಪ್ರಶ್ನಿಸಿದ್ದರು. ಸೆಂಥಿಲ್ ಬಾಲಾಜಿ ಪ್ರಕರಣದಲ್ಲಿ ಸ್ಟಾಲಿನ್ ಅವರು ಅನಾರೋಗ್ಯಕರ ಪಕ್ಷಪಾತ ಹೊಂದಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ.

ಇದನ್ನೂ ಓದಿ; ಮಹಾರಾಷ್ಟ್ರ ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ; ಪಕ್ಷ ತೊರೆದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...