Homeಮುಖಪುಟತಮಿಳುನಾಡು ವಿಧಾನಸಭೆ: ವಾಡಿಕೆ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಆರ್‌.ಎನ್. ರವಿ

ತಮಿಳುನಾಡು ವಿಧಾನಸಭೆ: ವಾಡಿಕೆ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಆರ್‌.ಎನ್. ರವಿ

- Advertisement -
- Advertisement -

ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಮತ್ತು ರಾಜಭವನದ ನಡುವಿನ ತಿಕ್ಕಾಟ ಮುಂದುವರಿದಿದ್ದು, ರಾಜ್ಯಪಾಲ ಆರ್‌ಎನ್ ರವಿ ಇಂದು ವರ್ಷದ ಮೊದಲ ಅಧಿವೇಶನದ ಆರಂಭದಲ್ಲಿ ವಿಧಾನಸಭೆಯನ್ನು ಉದ್ದೇಶಿಸಿ ವಾಡಿಕೆ ಭಾಷಣ ಮಾಡಲು ನಿರಾಕರಿಸಿದ್ದಾರೆ.

ರಾಜ್ಯ ಸರ್ಕಾರವು ತನ್ನ ಕಾರ್ಯವನ್ನು ಪರಿಶೀಲಿಸಿದ ಮತ್ತು ಅಧಿವೇಶನದ ಕಾರ್ಯಸೂಚಿಯನ್ನು ರೂಪಿಸಿದ ಭಾಷಣದ ತಮಿಳು-ಇಂಗ್ಲಿಷ್ ಅನುವಾದವನ್ನು ಸ್ಪೀಕರ್ ಎಂ. ಅಪ್ಪಾವು ಅವರು ಓದಿದರು. ರಾಜ್ಯಪಾಲರು ಭಾಷಣದ ಕೊನೆಯಲ್ಲಿ ರಾಷ್ಟ್ರಗೀತೆಗೂ ಕಾಯದೆ ಅವಸರದಿಂದಲೆ ಹೊರ ನಡೆದರು.

ಡಿಎಂಕೆಯ ಹಿರಿಯ ಸಚಿವ ದುರೈ ಮುರುಗನ್ ಅವರು ರಾಜ್ಯಪಾಲರ ಟೀಕೆಗಳನ್ನು ದಾಖಲಿಸಬಾರದು ಎಂಬ ನಿರ್ಣಯವನ್ನು ಮಂಡಿಸಿದಾಗ ಅವರು ನಿರ್ಗಮಿಸಿದರು; ಅವರು ಹೊರನಡೆದ ನಂತರ ನಿರ್ಣಯ ಅಂಗೀಕರಿಸಲಾಯಿತು. ರಾಜ್ಯಪಾಲರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅಪ್ಪಾವು, ‘ತಮಿಳುನಾಡು ವಿಧಾನಸಭೆಯು ರಾಜ್ಯಪಾಲರ ಭಾಷಣದ ಮೊದಲು ರಾಜ್ಯಗೀತೆ ‘ತಮಿಳ್ ಥಾಯ್ ವಾಜ್ತು’ ಮತ್ತು ಅದರ ನಂತರ ರಾಷ್ಟ್ರಗೀತೆ ನುಡಿಸುವ ಸಂಪ್ರದಾಯವನ್ನು ಅನುಸರಿಸುತ್ತದೆ’ ಎಂದು ಹೇಳಿದರು.

‘ಸದನದಲ್ಲಿ ವೈಯಕ್ತಿಕ ಅಭಿಪ್ರಾಯಗಳನ್ನು ಹಂಚಿಕೊಳ್ಳಬಾರದು’ ಎಂದು ಹೇಳಿದ ಸ್ಪೀಕರ್, ‘ಬದಲಿಗೆ ಪಿಎಂ ಕೇರ್ಸ್ ನಿಧಿಯಿಂದ ₹50,000 ಕೋಟಿ ಪ್ರವಾಹ ಪರಿಹಾರವನ್ನು ಬಿಡುಗಡೆ ಮಾಡಲು ರಾಜ್ಯಪಾಲರು ಕೇಂದ್ರ ನೆರವನ್ನು ಪಡೆಯಬಹುದು’ ಎಂದು ಹೇಳಿದರು.

ಕಳೆದ ವರ್ಷವೂ ಸಹ, ರಾಜ್ಯಪಾಲರು ಆಡಳಿತಾರೂಢ ಡಿಎಂಕೆ ಸಿದ್ಧಪಡಿಸಿದ ಅಧಿಕೃತ ಭಾಷಣದ ಭಾಗಗಳನ್ನು ಬಿಟ್ಟುಬಿಟ್ಟಾಗ ರಾಜ್ಯಪಾಲರ ಸದನದಲ್ಲಿ ಕೆಲ ನಾಟಕೀಯ ದೃಶ್ಯಗಳು ನಡೆದವು. ಪೆರಿಯಾರ್, ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಮತ್ತು ಕೆ ಕರುಣಾನಿಧಿ ಅವರಂತಹ ನಾಯಕರನ್ನು ಉಲ್ಲೇಖಿಸಿದ ಭಾಷಣದ ಭಾಗಗಳನ್ನು ಅವರು ಓದಲಿಲ್ಲ. ಮುಖ್ಯಮಂತ್ರಿ ಸ್ಟಾಲಿನ್ ಅವರು ಅಧಿಕೃತ ಭಾಷಣವನ್ನು ಮಾತ್ರ ದಾಖಲಿಸಲು ನಿರ್ಣಯವನ್ನು ಮಂಡಿಸಿದರು; ಆಗ ರಾಜ್ಯಪಾಲರು ಸಿಟ್ಟಿನಿಂದಲೆ ಹೊರ ನಡೆದಿದ್ದರು.

ಸಾಂಪ್ರದಾಯಿಕ ಭಾಷಣವನ್ನು ನೀಡಲು ರಾಜ್ಯಪಾಲರ ನಿರಾಕರಣೆಯು ರಾಜಭವನ ಮತ್ತು ಡಿಎಂಕೆ ಸರ್ಕಾರದ ನಡುವಿನ ಇತ್ತೀಚಿನ ಮುಖಾಮುಖಿಯಾಗಿದೆ. ‘ನನ್ನ ಕೆಲಸಕ್ಕೆ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದು ರಾಜ್ಯಪಾಲರು ಪದೇ ಪದೇ ಆರೋಪಿಸಿದ್ದಾರೆ.

ಈ ಹಿಂದೆ, ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರವು ಹಗ್ಗ ಜಗ್ಗಾಟದಲ್ಲಿ ಸಿಲುಕಿತ್ತು. ನಂತರ, ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ ಮತ್ತು ಮಸೂದೆಗಳು ಮತ್ತು ನೇಮಕಾತಿಗಳನ್ನು ತೆರವುಗೊಳಿಸುತ್ತಿಲ್ಲ ಎಂದು ಡಿಎಂಕೆ ಆರೋಪಿಸಿದೆ. ಮಸೂದೆಗಳನ್ನು ಅನಿರ್ದಿಷ್ಟಾವಧಿಗೆ ತಡೆಹಿಡಿಯಲು ಸಂವಿಧಾನವು ತನಗೆ ಅಧಿಕಾರ ನೀಡುತ್ತದೆ ಎಂದು ರಾಜ್ಯಪಾಲರು ಆಗ ಹೇಳಿದ್ದರು. ಈ ವಿಷಯವು ಸುಪ್ರೀಂ ಕೋರ್ಟ್‌ಗೆ ತಲುಪಿತ್ತು, ಅದು ರಾಜ್ಯಪಾಲರು ಮಂತ್ರಿ ಮಂಡಲದ ನೆರವು ಮತ್ತು ಸಲಹೆಯ ಮೇರೆಗೆ ಕಾರ್ಯನಿರ್ವಹಿಸಬೇಕು ಎಂದು ತೀರ್ಪು ನೀಡಿತು. ನಂತರ ರಾಜ್ಯಪಾಲರು ಕೆಲವು ವಿಧೇಯಕಗಳನ್ನು ಅಂಗೀಕರಿಸಿದ್ದರು.

ಕಳೆದ ವರ್ಷ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮುಖ್ಯಮಂತ್ರಿ ಸ್ಟಾಲಿನ್ ಪತ್ರ ಬರೆದಾಗ ರವಿ ಅವರನ್ನು ಉನ್ನತ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿದ್ದರು. ಈ ಜಗಳ ರಾಷ್ಟ್ರಪತಿ ಭವನಕ್ಕೂ ತಲುಪಿತ್ತು. ರಾಜ್ಯದ ಜನತೆ ಮತ್ತು ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುವ ಮೂಲಕ ರಾಜ್ಯಪಾಲರು ತಮ್ಮ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

ಪ್ರತಿಪಕ್ಷದ ಆಡಳಿತವಿರುವ ರಾಜ್ಯ ಸರ್ಕಾರವನ್ನು ಬೀಳಿಸಲು ಅವಕಾಶಕ್ಕಾಗಿ ಹುಡುಕುತ್ತಿರುವ ರಾಜ್ಯಪಾಲರನ್ನು ಕೇವಲ ಕೇಂದ್ರದ ಏಜೆಂಟ್ ಎಂದು ನೋಡಲಾಗುತ್ತದೆ ಎಂದು ಅವರು ಹೇಳಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ರಾಜ್ಯಪಾಲರ ಕ್ರಮವನ್ನು ಸ್ಟಾಲಿನ್ ಪ್ರಶ್ನಿಸಿದ್ದರು. ಸೆಂಥಿಲ್ ಬಾಲಾಜಿ ಪ್ರಕರಣದಲ್ಲಿ ಸ್ಟಾಲಿನ್ ಅವರು ಅನಾರೋಗ್ಯಕರ ಪಕ್ಷಪಾತ ಹೊಂದಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ.

ಇದನ್ನೂ ಓದಿ; ಮಹಾರಾಷ್ಟ್ರ ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ; ಪಕ್ಷ ತೊರೆದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...