Homeಮುಖಪುಟತಮಿಳುನಾಡು ವಿಧಾನಸಭೆ: ವಾಡಿಕೆ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಆರ್‌.ಎನ್. ರವಿ

ತಮಿಳುನಾಡು ವಿಧಾನಸಭೆ: ವಾಡಿಕೆ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲ ಆರ್‌.ಎನ್. ರವಿ

- Advertisement -
- Advertisement -

ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಮತ್ತು ರಾಜಭವನದ ನಡುವಿನ ತಿಕ್ಕಾಟ ಮುಂದುವರಿದಿದ್ದು, ರಾಜ್ಯಪಾಲ ಆರ್‌ಎನ್ ರವಿ ಇಂದು ವರ್ಷದ ಮೊದಲ ಅಧಿವೇಶನದ ಆರಂಭದಲ್ಲಿ ವಿಧಾನಸಭೆಯನ್ನು ಉದ್ದೇಶಿಸಿ ವಾಡಿಕೆ ಭಾಷಣ ಮಾಡಲು ನಿರಾಕರಿಸಿದ್ದಾರೆ.

ರಾಜ್ಯ ಸರ್ಕಾರವು ತನ್ನ ಕಾರ್ಯವನ್ನು ಪರಿಶೀಲಿಸಿದ ಮತ್ತು ಅಧಿವೇಶನದ ಕಾರ್ಯಸೂಚಿಯನ್ನು ರೂಪಿಸಿದ ಭಾಷಣದ ತಮಿಳು-ಇಂಗ್ಲಿಷ್ ಅನುವಾದವನ್ನು ಸ್ಪೀಕರ್ ಎಂ. ಅಪ್ಪಾವು ಅವರು ಓದಿದರು. ರಾಜ್ಯಪಾಲರು ಭಾಷಣದ ಕೊನೆಯಲ್ಲಿ ರಾಷ್ಟ್ರಗೀತೆಗೂ ಕಾಯದೆ ಅವಸರದಿಂದಲೆ ಹೊರ ನಡೆದರು.

ಡಿಎಂಕೆಯ ಹಿರಿಯ ಸಚಿವ ದುರೈ ಮುರುಗನ್ ಅವರು ರಾಜ್ಯಪಾಲರ ಟೀಕೆಗಳನ್ನು ದಾಖಲಿಸಬಾರದು ಎಂಬ ನಿರ್ಣಯವನ್ನು ಮಂಡಿಸಿದಾಗ ಅವರು ನಿರ್ಗಮಿಸಿದರು; ಅವರು ಹೊರನಡೆದ ನಂತರ ನಿರ್ಣಯ ಅಂಗೀಕರಿಸಲಾಯಿತು. ರಾಜ್ಯಪಾಲರ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅಪ್ಪಾವು, ‘ತಮಿಳುನಾಡು ವಿಧಾನಸಭೆಯು ರಾಜ್ಯಪಾಲರ ಭಾಷಣದ ಮೊದಲು ರಾಜ್ಯಗೀತೆ ‘ತಮಿಳ್ ಥಾಯ್ ವಾಜ್ತು’ ಮತ್ತು ಅದರ ನಂತರ ರಾಷ್ಟ್ರಗೀತೆ ನುಡಿಸುವ ಸಂಪ್ರದಾಯವನ್ನು ಅನುಸರಿಸುತ್ತದೆ’ ಎಂದು ಹೇಳಿದರು.

‘ಸದನದಲ್ಲಿ ವೈಯಕ್ತಿಕ ಅಭಿಪ್ರಾಯಗಳನ್ನು ಹಂಚಿಕೊಳ್ಳಬಾರದು’ ಎಂದು ಹೇಳಿದ ಸ್ಪೀಕರ್, ‘ಬದಲಿಗೆ ಪಿಎಂ ಕೇರ್ಸ್ ನಿಧಿಯಿಂದ ₹50,000 ಕೋಟಿ ಪ್ರವಾಹ ಪರಿಹಾರವನ್ನು ಬಿಡುಗಡೆ ಮಾಡಲು ರಾಜ್ಯಪಾಲರು ಕೇಂದ್ರ ನೆರವನ್ನು ಪಡೆಯಬಹುದು’ ಎಂದು ಹೇಳಿದರು.

ಕಳೆದ ವರ್ಷವೂ ಸಹ, ರಾಜ್ಯಪಾಲರು ಆಡಳಿತಾರೂಢ ಡಿಎಂಕೆ ಸಿದ್ಧಪಡಿಸಿದ ಅಧಿಕೃತ ಭಾಷಣದ ಭಾಗಗಳನ್ನು ಬಿಟ್ಟುಬಿಟ್ಟಾಗ ರಾಜ್ಯಪಾಲರ ಸದನದಲ್ಲಿ ಕೆಲ ನಾಟಕೀಯ ದೃಶ್ಯಗಳು ನಡೆದವು. ಪೆರಿಯಾರ್, ಬಿಆರ್ ಅಂಬೇಡ್ಕರ್, ಕೆ ಕಾಮರಾಜ್, ಸಿಎನ್ ಅಣ್ಣಾದೊರೈ ಮತ್ತು ಕೆ ಕರುಣಾನಿಧಿ ಅವರಂತಹ ನಾಯಕರನ್ನು ಉಲ್ಲೇಖಿಸಿದ ಭಾಷಣದ ಭಾಗಗಳನ್ನು ಅವರು ಓದಲಿಲ್ಲ. ಮುಖ್ಯಮಂತ್ರಿ ಸ್ಟಾಲಿನ್ ಅವರು ಅಧಿಕೃತ ಭಾಷಣವನ್ನು ಮಾತ್ರ ದಾಖಲಿಸಲು ನಿರ್ಣಯವನ್ನು ಮಂಡಿಸಿದರು; ಆಗ ರಾಜ್ಯಪಾಲರು ಸಿಟ್ಟಿನಿಂದಲೆ ಹೊರ ನಡೆದಿದ್ದರು.

ಸಾಂಪ್ರದಾಯಿಕ ಭಾಷಣವನ್ನು ನೀಡಲು ರಾಜ್ಯಪಾಲರ ನಿರಾಕರಣೆಯು ರಾಜಭವನ ಮತ್ತು ಡಿಎಂಕೆ ಸರ್ಕಾರದ ನಡುವಿನ ಇತ್ತೀಚಿನ ಮುಖಾಮುಖಿಯಾಗಿದೆ. ‘ನನ್ನ ಕೆಲಸಕ್ಕೆ ಅಡೆತಡೆಗಳನ್ನು ಸೃಷ್ಟಿಸುತ್ತಿದ್ದಾರೆ’ ಎಂದು ರಾಜ್ಯಪಾಲರು ಪದೇ ಪದೇ ಆರೋಪಿಸಿದ್ದಾರೆ.

ಈ ಹಿಂದೆ, ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರವು ಹಗ್ಗ ಜಗ್ಗಾಟದಲ್ಲಿ ಸಿಲುಕಿತ್ತು. ನಂತರ, ಅವರು ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ ಮತ್ತು ಮಸೂದೆಗಳು ಮತ್ತು ನೇಮಕಾತಿಗಳನ್ನು ತೆರವುಗೊಳಿಸುತ್ತಿಲ್ಲ ಎಂದು ಡಿಎಂಕೆ ಆರೋಪಿಸಿದೆ. ಮಸೂದೆಗಳನ್ನು ಅನಿರ್ದಿಷ್ಟಾವಧಿಗೆ ತಡೆಹಿಡಿಯಲು ಸಂವಿಧಾನವು ತನಗೆ ಅಧಿಕಾರ ನೀಡುತ್ತದೆ ಎಂದು ರಾಜ್ಯಪಾಲರು ಆಗ ಹೇಳಿದ್ದರು. ಈ ವಿಷಯವು ಸುಪ್ರೀಂ ಕೋರ್ಟ್‌ಗೆ ತಲುಪಿತ್ತು, ಅದು ರಾಜ್ಯಪಾಲರು ಮಂತ್ರಿ ಮಂಡಲದ ನೆರವು ಮತ್ತು ಸಲಹೆಯ ಮೇರೆಗೆ ಕಾರ್ಯನಿರ್ವಹಿಸಬೇಕು ಎಂದು ತೀರ್ಪು ನೀಡಿತು. ನಂತರ ರಾಜ್ಯಪಾಲರು ಕೆಲವು ವಿಧೇಯಕಗಳನ್ನು ಅಂಗೀಕರಿಸಿದ್ದರು.

ಕಳೆದ ವರ್ಷ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮುಖ್ಯಮಂತ್ರಿ ಸ್ಟಾಲಿನ್ ಪತ್ರ ಬರೆದಾಗ ರವಿ ಅವರನ್ನು ಉನ್ನತ ಹುದ್ದೆಯಿಂದ ತೆಗೆದುಹಾಕುವಂತೆ ಕೋರಿದ್ದರು. ಈ ಜಗಳ ರಾಷ್ಟ್ರಪತಿ ಭವನಕ್ಕೂ ತಲುಪಿತ್ತು. ರಾಜ್ಯದ ಜನತೆ ಮತ್ತು ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುವ ಮೂಲಕ ರಾಜ್ಯಪಾಲರು ತಮ್ಮ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

ಪ್ರತಿಪಕ್ಷದ ಆಡಳಿತವಿರುವ ರಾಜ್ಯ ಸರ್ಕಾರವನ್ನು ಬೀಳಿಸಲು ಅವಕಾಶಕ್ಕಾಗಿ ಹುಡುಕುತ್ತಿರುವ ರಾಜ್ಯಪಾಲರನ್ನು ಕೇವಲ ಕೇಂದ್ರದ ಏಜೆಂಟ್ ಎಂದು ನೋಡಲಾಗುತ್ತದೆ ಎಂದು ಅವರು ಹೇಳಿದರು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ರಾಜ್ಯಪಾಲರ ಕ್ರಮವನ್ನು ಸ್ಟಾಲಿನ್ ಪ್ರಶ್ನಿಸಿದ್ದರು. ಸೆಂಥಿಲ್ ಬಾಲಾಜಿ ಪ್ರಕರಣದಲ್ಲಿ ಸ್ಟಾಲಿನ್ ಅವರು ಅನಾರೋಗ್ಯಕರ ಪಕ್ಷಪಾತ ಹೊಂದಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದ್ದಾರೆ.

ಇದನ್ನೂ ಓದಿ; ಮಹಾರಾಷ್ಟ್ರ ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ; ಪಕ್ಷ ತೊರೆದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...