Homeಮುಖಪುಟತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

ತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

- Advertisement -
- Advertisement -

ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ನಗರ ಸ್ಥಳೀಯ ಚುನಾವಣೆಯಲ್ಲಿ, ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ 200 ಕೌನ್ಸಿಲರ್ ಸ್ಥಾನಗಳಲ್ಲಿ ಬಿಜೆಪಿಯಿಂದ ಗೆದ್ದ ಏಕೈಕ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಉಮಾ ಆನಂದನ್. ಇವರು ತನ್ನ ಚುನಾವಣಾ ಪ್ರಚಾರದ ವೇಳೆ ಮಹಾತ್ಮ ಗಾಂಧಿಯ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿ ವಿವಾದ ಸೃಷ್ಟಿಸಿದ್ದರು.

ಉಮಾ ಅವರು ಚೆನ್ನೈನ ವೆಸ್ಟ್ ಮಾಂಬಲಂನ ವಾರ್ಡ್ 134 ಅನ್ನು ಗೆದ್ದಿದ್ದಾರೆ. ಈ ಪ್ರದೇಶವು ಕಳೆದ ವರ್ಷ ಸಂಭವಿಸಿದ ನೆರೆಯಿಂದಾಗಿ ಸಂಕಷ್ಟ ಅನುಭವಿಸಿತ್ತು. ಇದು ಮಹಾನಗರ ಪಾಲಿಕೆಯ ವಿರುದ್ದ ಜನರು ತಿರುಗಿ ಬೀಳಲು ಕಾರಣ ಎನ್ನಲಾಗಿದೆ.

ದಿ ನ್ಯೂಸ್ ಮಿನಿಟ್‌ ವರದಿ ಮಾಡಿದಂತೆ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ವೀಡಿಯೊ ಕ್ಲಿಪ್‌ನಲ್ಲಿ ಸಂದರ್ಶಕರೊಬ್ಬರು ಉಮಾ ಅವರನ್ನು ಪ್ರಶ್ನಿಸುತ್ತಾ, “ಚಾಕು ಮತ್ತು ಬಂದೂಕುಗಳನ್ನು ಎತ್ತುವವರಲ್ಲಿ ಹೆಚ್ಚಿನವರು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಎಂದು ನೀವು ಹೇಳುತ್ತೀರಾ?” ಎಂದು ಕೇಳುತ್ತಾರೆ. ಅದಕ್ಕೆ ಉಮಾ ಅವರು, “ಹೌದು” ಎಂದು ಉತ್ತರಿಸುತ್ತಾರೆ.

ಇದೇ ವೇಳೆ ಸಂದರ್ಶಕ, ಗೋಡ್ಸೆ ಗಾಂಧಿಯನ್ನು ಗುಂಡಿಕ್ಕಿದ ಬಗ್ಗೆ ಪ್ರಶ್ನಿಸುತ್ತಾರೆ. ಇದಕ್ಕೆ ಉತ್ತರಿಸಿದ ಉಮಾ, “ಆದರೆ ಗೋಡ್ಸೆ ಗಾಂಧಿಯನ್ನು ಯಾಕೆ ಕೊಂದಿದ್ದು ಗೊತ್ತೆ?” ಎಂದು ಹೇಳುತ್ತಾರೆ. ಅದೇ ಕ್ಲಿಪ್‌ನಲ್ಲಿ ಅವರು, “ಗೋಡ್ಸೆ ಗಾಂಧಿಯನ್ನು ಕೊಂದಿದ್ದಕ್ಕೆ, ಗೋಡ್ಸೆಯದ್ದೇ ಆದ ಸಮರ್ಥನೆಯನ್ನು ಹೊಂದಿದ್ದ. ಗೂಡ್ಸೆ ಹಿಂದೂ ಆಗಿದ್ದ, ಅದಕ್ಕಾಗಿ ತುಂಬಾ ಹೆಮ್ಮೆಯಿದೆ. ಇದರ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ, ನಾನು ಗೋಡ್ಸೆಯ ಬೆಂಬಲಿಗ” ಎಂದು ಹೇಳುತ್ತಾರೆ.

ಉಮಾ ಚುವಾವಣೆಯಲ್ಲಿ ಗೆದ್ದ ನಂತರ ಅವರ ಇತರ ಹಳೆಯ ಸಂದರ್ಶನಗಳ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೊಗಳಲ್ಲಿ ಅವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡು, ದಲಿತ ನಾಯಕರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ.

ಒಂದು ವೀಡಿಯೊದಲ್ಲಿ ಅವರು, “ನಾನು ಬ್ರಾಹ್ಮಣನಾಗಿರುವುದರಲ್ಲಿ ಹೆಮ್ಮೆಯಿದೆ. ನನಗೆ ಜಾತಿಯ ವ್ಯಾಮೋಹವಿಲ್ಲ, ಆದರೆ ನನ್ನ ಪರಂಪರೆಯ ಬಗ್ಗೆ ನನಗೆ ಹೆಮ್ಮೆ ಇದೆ. ಜಾತಿಗಳಿವೆ. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಜಾತಿ ಹೋದರೆ ನಮ್ಮಲ್ಲಿ ಸಂಸ್ಕೃತಿ ಇರುವುದಿಲ್ಲ” ಎಂದು ಹೇಳುತ್ತಾರೆ.

ಬ್ರಾಹ್ಮಣರು ವಾಪಾಸು ಹೊಡೆಯಬೇಕು ಎಂದು ಪ್ರತಿಪಾದಿಸುತ್ತಾ, ದ್ರಾವಿಡ ಕಳಗಂನ ಪ್ರಧಾನ ಕಾರ್ಯದರ್ಶಿ ಕೆ. ವೀರಮಣಿ ಅವರ ಬಗ್ಗೆ ನಿಂದನೀಯ ಭಾಷೆಯನ್ನು ಉಮಾ ಬಳಸಿದ್ದರು.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...