Homeಮುಖಪುಟತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

ತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

- Advertisement -
- Advertisement -

ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ನಗರ ಸ್ಥಳೀಯ ಚುನಾವಣೆಯಲ್ಲಿ, ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ 200 ಕೌನ್ಸಿಲರ್ ಸ್ಥಾನಗಳಲ್ಲಿ ಬಿಜೆಪಿಯಿಂದ ಗೆದ್ದ ಏಕೈಕ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಉಮಾ ಆನಂದನ್. ಇವರು ತನ್ನ ಚುನಾವಣಾ ಪ್ರಚಾರದ ವೇಳೆ ಮಹಾತ್ಮ ಗಾಂಧಿಯ ಹಂತಕ ನಾಥೂರಾಂ ಗೋಡ್ಸೆಯನ್ನು ಹೊಗಳಿ ವಿವಾದ ಸೃಷ್ಟಿಸಿದ್ದರು.

ಉಮಾ ಅವರು ಚೆನ್ನೈನ ವೆಸ್ಟ್ ಮಾಂಬಲಂನ ವಾರ್ಡ್ 134 ಅನ್ನು ಗೆದ್ದಿದ್ದಾರೆ. ಈ ಪ್ರದೇಶವು ಕಳೆದ ವರ್ಷ ಸಂಭವಿಸಿದ ನೆರೆಯಿಂದಾಗಿ ಸಂಕಷ್ಟ ಅನುಭವಿಸಿತ್ತು. ಇದು ಮಹಾನಗರ ಪಾಲಿಕೆಯ ವಿರುದ್ದ ಜನರು ತಿರುಗಿ ಬೀಳಲು ಕಾರಣ ಎನ್ನಲಾಗಿದೆ.

ದಿ ನ್ಯೂಸ್ ಮಿನಿಟ್‌ ವರದಿ ಮಾಡಿದಂತೆ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ವೀಡಿಯೊ ಕ್ಲಿಪ್‌ನಲ್ಲಿ ಸಂದರ್ಶಕರೊಬ್ಬರು ಉಮಾ ಅವರನ್ನು ಪ್ರಶ್ನಿಸುತ್ತಾ, “ಚಾಕು ಮತ್ತು ಬಂದೂಕುಗಳನ್ನು ಎತ್ತುವವರಲ್ಲಿ ಹೆಚ್ಚಿನವರು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಎಂದು ನೀವು ಹೇಳುತ್ತೀರಾ?” ಎಂದು ಕೇಳುತ್ತಾರೆ. ಅದಕ್ಕೆ ಉಮಾ ಅವರು, “ಹೌದು” ಎಂದು ಉತ್ತರಿಸುತ್ತಾರೆ.

ಇದೇ ವೇಳೆ ಸಂದರ್ಶಕ, ಗೋಡ್ಸೆ ಗಾಂಧಿಯನ್ನು ಗುಂಡಿಕ್ಕಿದ ಬಗ್ಗೆ ಪ್ರಶ್ನಿಸುತ್ತಾರೆ. ಇದಕ್ಕೆ ಉತ್ತರಿಸಿದ ಉಮಾ, “ಆದರೆ ಗೋಡ್ಸೆ ಗಾಂಧಿಯನ್ನು ಯಾಕೆ ಕೊಂದಿದ್ದು ಗೊತ್ತೆ?” ಎಂದು ಹೇಳುತ್ತಾರೆ. ಅದೇ ಕ್ಲಿಪ್‌ನಲ್ಲಿ ಅವರು, “ಗೋಡ್ಸೆ ಗಾಂಧಿಯನ್ನು ಕೊಂದಿದ್ದಕ್ಕೆ, ಗೋಡ್ಸೆಯದ್ದೇ ಆದ ಸಮರ್ಥನೆಯನ್ನು ಹೊಂದಿದ್ದ. ಗೂಡ್ಸೆ ಹಿಂದೂ ಆಗಿದ್ದ, ಅದಕ್ಕಾಗಿ ತುಂಬಾ ಹೆಮ್ಮೆಯಿದೆ. ಇದರ ಬಗ್ಗೆ ನನಗೆ ಯಾವುದೇ ವಿಷಾದವಿಲ್ಲ, ನಾನು ಗೋಡ್ಸೆಯ ಬೆಂಬಲಿಗ” ಎಂದು ಹೇಳುತ್ತಾರೆ.

ಉಮಾ ಚುವಾವಣೆಯಲ್ಲಿ ಗೆದ್ದ ನಂತರ ಅವರ ಇತರ ಹಳೆಯ ಸಂದರ್ಶನಗಳ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೊಗಳಲ್ಲಿ ಅವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡು, ದಲಿತ ನಾಯಕರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ.

ಒಂದು ವೀಡಿಯೊದಲ್ಲಿ ಅವರು, “ನಾನು ಬ್ರಾಹ್ಮಣನಾಗಿರುವುದರಲ್ಲಿ ಹೆಮ್ಮೆಯಿದೆ. ನನಗೆ ಜಾತಿಯ ವ್ಯಾಮೋಹವಿಲ್ಲ, ಆದರೆ ನನ್ನ ಪರಂಪರೆಯ ಬಗ್ಗೆ ನನಗೆ ಹೆಮ್ಮೆ ಇದೆ. ಜಾತಿಗಳಿವೆ. ಇದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಜಾತಿ ಹೋದರೆ ನಮ್ಮಲ್ಲಿ ಸಂಸ್ಕೃತಿ ಇರುವುದಿಲ್ಲ” ಎಂದು ಹೇಳುತ್ತಾರೆ.

ಬ್ರಾಹ್ಮಣರು ವಾಪಾಸು ಹೊಡೆಯಬೇಕು ಎಂದು ಪ್ರತಿಪಾದಿಸುತ್ತಾ, ದ್ರಾವಿಡ ಕಳಗಂನ ಪ್ರಧಾನ ಕಾರ್ಯದರ್ಶಿ ಕೆ. ವೀರಮಣಿ ಅವರ ಬಗ್ಗೆ ನಿಂದನೀಯ ಭಾಷೆಯನ್ನು ಉಮಾ ಬಳಸಿದ್ದರು.

ಇದನ್ನೂ ಓದಿ: ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...