Homeಕರೋನಾ ತಲ್ಲಣತಮಿಳುನಾಡು: ಕೆಲವು ವಿನಾಯಿತಿಯೊಂದಿಗೆ ಜೂನ್‌ 14 ರ ವರೆಗೆ ಲಾಕ್‌ಡೌನ್‌ ವಿಸ್ತರಣೆ

ತಮಿಳುನಾಡು: ಕೆಲವು ವಿನಾಯಿತಿಯೊಂದಿಗೆ ಜೂನ್‌ 14 ರ ವರೆಗೆ ಲಾಕ್‌ಡೌನ್‌ ವಿಸ್ತರಣೆ

ರಾಜ್ಯದಲ್ಲಿ ಕೂಡಾ ಲಾಕ್‌ಡೌನ್‌ ಅನ್ನು ಜೂನ್‌ 14 ರ ವರೆಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದು, ಆದರೆ ಯಾವುದೆ ವಿನಾಯಿತಿಯನ್ನು ನೀಡಿಲ್ಲ

- Advertisement -
- Advertisement -

ತಮಿಳುನಾಡಿನಲ್ಲಿ ಕೊರೊನಾ ಲಾಕ್‌ಡೌನ್ ಅವಧಿಯನ್ನು ಕೆಲವು ವಿನಾಯಿತಿಯೊಂದಿಗೆ ಜೂನ್ 14 ರವರೆಗೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶನಿವಾರ ವಿಸ್ತರಿಸಿದ್ದಾರೆ. ರಾಜ್ಯದ ಕೋವಾಯಿ, ನೀಲಗಿರಿ, ತಿರುಪ್ಪೂರು, ಈರೋಡ್, ಸೇಲಂ, ಕರೂರ್‌, ನಾಮಕ್ಕಲ್, ತಂಜಾವೂರು, ತಿರುವರೂರು, ನಾಗಪಟ್ಟಣಂ ಮತ್ತು ಮಯಿಲಾಡುತುರೈ ಎಂಬ 11 ಜಿಲ್ಲೆಗಳಲ್ಲಿ ಸೋಂಕು ಅಧಿಕವಾಗಿದೆ ಎಂದು ಮುಖ್ಯಮಂತ್ರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೇಲಿನ ಜಿಲ್ಲೆಗಳಲ್ಲಿ, ಜೂನ್ 7 ರಿಂದ ಕೆಲವು ನಿರ್ಬಂಧಗಳೊಂದಿಗೆ, ಕಿರಾಣಿ, ತರಕಾರಿ, ಮಾಂಸ ಮತ್ತು ಮೀನುಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 6.00 ರಿಂದ ಸಂಜೆ 5.00 ರವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ತರಕಾರಿಗಳು, ಹಣ್ಣುಗಳು ಮತ್ತು ಹೂವುಗಳನ್ನು ಮಾರಾಟ ಮಾಡುವ ಬೀದಿಬದಿ ಅಂಗಡಿಗಳಿಗೆ ಕೂಡಾ ಬೆಳಿಗ್ಗೆ 6.00 ರಿಂದ ಸಂಜೆ 5.00 ರವರೆಗೆ ಅನುಮತಿ ನೀಡಿಲಾಗಿದೆ.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

ಎಲೆಕ್ಟ್ರಿಷಿಯನ್, ಪ್ಲಂಬರ್‌ಗಳಿಗೆ, ಮೋಟಾರ್ ತಂತ್ರಜ್ಞರು ಮತ್ತು ಬಡಗಿಗಳಿಗೆ ಬೆಳಿಗ್ಗೆ 6.00 ರಿಂದ ಸಂಜೆ 5.00 ರ ನಡುವೆ ಕೆಲಸ ಮಾಡಲು ಅನುಮತಿ ನೀಡಲಾಗಿದೆ. ವಿದ್ಯುತ್ ವಸ್ತುಗಳು, ಬಲ್ಬ್‌ಗಳು, ಕೇಬಲ್‌ಗಳು, ಸ್ವಿಚ್‌ಗಳು ಮತ್ತು ತಂತಿಗಳನ್ನು ಮಾರಾಟ ಮಾಡುವ ಅಂಗಡಿಗಳು ಬೆಳಿಗ್ಗೆ 6.00 ರಿಂದ ಸಂಜೆ 5.00 ರವರೆಗೆ ಕಾರ್ಯನಿರ್ವಹಿಸಬಹುದಾಗಿದ್ದು, ಸೈಕಲ್‌ ಮತ್ತು ದ್ವಿಚಕ್ರ ವಾಹನಗಳನ್ನು ದುರಸ್ತಿ ಮಾಡುವ ಅಂಗಡಿಗಳು ಬೆಳಿಗ್ಗೆ 6.00 ರಿಂದ ಸಂಜೆ 5.00 ರವರೆಗೆ ಕಾರ್ಯನಿರ್ವಹಿಸಬಹುದಾಗಿದೆ. ಹಾರ್ಡ್‌ವೇರ್ ಅಂಗಡಿಗಳಿಗೂ ಬೆಳಿಗ್ಗೆ 6.00 ರಿಂದ ಸಂಜೆ 5.00 ರ ನಡುವೆ ಕಾರ್ಯನಿರ್ವಹಿಸಲು ಅನುಮತಿಯನ್ನು ನೀಡಲಾಗಿದೆ. ಕಾಲ್ ಟ್ಯಾಕ್ಸಿಗಳು, ಬಾಡಿಗೆ ವಾಹನಗಳು ಮತ್ತು ಆಟೋ ರಿಕ್ಷಾಗಳನ್ನು ಇ-ನೋಂದಣಿಯೊಂದಿಗೆ ನಿರ್ವಹಿಸಬಹುದು ಎಂದು ಸರ್ಕಾರ ಹೇಳಿದೆ.

ಗುರುವಾರಂದು ಜೂನ್ 7 ರ ವರೆಗೆ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಜೂನ್‌ 14 ರ ವರೆಗೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದರು. ಆದರೆ ಯಾವುದೆ ವಿನಾಯಿತಿಯನ್ನು ಅವರು ಘೋಷಿಸಿಲ್ಲ.

ದೇಶದಲ್ಲೆ ಅತೀ ಹೆಚ್ಚು ಕೊರೊನಾ ಪ್ರಕರಣಗಳಿದ್ದ ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಸೋಂಕು ತಹಬದಿಗೆ ಬಂದಿದ್ದು, ಇಂದಿನಿಂದ ಅಲ್ಲಿ ಅನ್‌ಲಾಕ್‌ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.

ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...