Homeಮುಖಪುಟತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ಆರೋಪಿಗಳನ್ನು ಹಿಂಸಿಸಲು ಲಾಠಿಗಳ ಬಳಕೆ ಮತ್ತು ರಕ್ತದ ಕಲೆಗಳನ್ನು ಹೊತ್ತ ಟೇಬಲ್ ಭೀಕರ ಅಪರಾಧಕ್ಕೆ ಸಾಕ್ಷಿಯಾಗಿದೆ. ಅಪರಾಧ ನಡೆದ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯ ಹೇಳಿಕೆಯನ್ನು ಆಧರಿಸಿ ಈ ತನಿಖೆ ನಡೆದಿವೆ.

- Advertisement -
- Advertisement -

ದೇಶಾದ್ಯಂತ ಭಾರಿ ಕೋಲಾಹಲಕ್ಕೆ ಕಾರಣವಾದ ತಮಿಳುನಾಡಿನ ಜಯರಾಜ್ ಮತ್ತು ಅವರ ಪುತ್ರ ಬೆನಿಕ್ಸ್ ಅವರ ಲಾಕಪ್ ಡೆತ್‌ ಪ್ರಕರಣದಲ್ಲಿ ಒಂಬತ್ತು ಪೊಲೀಸರ ಮೇಲೆ ಕೊಲೆ, ಪಿತೂರಿ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌‌ಶೀಟ್ ದಾಖಲಿಸಿದೆ.

ಕಳೆದ ಜೂನ್‌ನಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ ಅಂಗಡಿಯೊಂದನ್ನು ನಡೆಸುತ್ತಿದ್ದ ತಂದೆ-ಮಗ ಜೋಡಿಯನ್ನು ಲಾಕ್‌ಡೌನ್ ನಿಯಮ ಉಲ್ಲಂಘನೆ ಎಂಬ ಆರೋಪದ ಮೇಲೆ ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಇಬ್ಬರಿಗೂ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಲೈಂಗಿಕವಾಗಿ ಹಿಂಸಿಸಲಾಗಿತ್ತು. ಚಿತ್ರಹಿಂಸೆಯಿಂದ ಇಬ್ಬರ ಗುದನಾಳಗಳಿಂದ ರಕ್ತ ಹರಿಯುತ್ತಿತ್ತು. ನಂತರ ಅವರಿಬ್ಬರೂ ಕೋವಿಲ್ಪಟ್ಟಿ ಜೈಲಿನಲ್ಲಿ ಮೃತಪಟ್ಟಿದ್ದರು.

ಈ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿ, ಬೃಹತ್ ಪ್ರತಿಭಟನೆಗಳು ನಡೆದಿದ್ದವು. ನಂತರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. 9 ಪೊಲೀಸರ ಮೇಲೆ ಚಾರ್ಜ್‌‌ಶೀಟ್ ಸಲ್ಲಿಸಿದ ಸಿಬಿಐ ಪೊಲೀಸರು ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿರುವ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್‌ ಡೆತ್: ಪೊಲೀಸ್ ದೌರ್ಜನ್ಯಕ್ಕೆ ಕೊನೆಯೆಂದು? ಮಾತು ಸೋತ ಭಾರತ

ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಅಂದಿನ ಇನ್ಸ್‌ಪೆಕ್ಟರ್ ಮತ್ತು ಎಸ್‌ಎಚ್‌ಒ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಕೆ.ಬಾಲಕೃಷ್ಣನ್, ಪಿ.ರಘುಗಣೇಶ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಎಸ್.ಮುರುಗನ್, ಎ.ಸಮದುರೈ, ಮತ್ತು ಕಾನ್‌ಸ್ಟೆಬಲ್‌ಗಳಾದ ಎಂ.ಮುತ್ತುರಾಜ, ಎಸ್.ಚೆಲ್ಲದುರೈ, ಎಕ್ಸ್.ಫ್ರಾನ್ಸಿಸ್ ಮತ್ತು ಎಸ್.ವಿಲುಮುತ್ತು ಎಂಬ 9 ಮಂದಿ ಪೊಲೀಸರ ಹೆಸರುಗಳಿವೆ.

ಸೆಪ್ಟೆಂಬರ್ 30 ರಂದು ಆರೋಪಿಗಳ ಮೂರು ತಿಂಗಳ ಕಸ್ಟಡಿ ಮುಗಿಯುತ್ತಿರುವುದರಿಂದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ. ಪೊಲೀಸರ ಚಿತ್ರಹಿಂಸೆ ನಂತರ, ಪೊಲೀಸ್ ಅಧಿಕಾರಿಗಳು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಮತ್ತು ಮೃತರ ಮೇಲೆ “ನಕಲಿ” ಆರೋಪಗಳನ್ನು ದಾಖಲಿಸಿದ್ದಾರೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.

ತನಿಖೆಯ ಸಮಯದಲ್ಲಿ, ಈ ಆರೋಪಿಗಳಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ ಒಬ್ಬ ಆರೋಪಿ ಸಬ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಆಗಿ, ಮೃತಪಟ್ಟರು. ಉಳಿದ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ಕೊರೊನಾ ಸಾಂಕ್ರಾಮಿಕ ನಡುವೆಯೂ ಸಿಬಿಐ ತಂಡವು ಮಧುರೈನಲ್ಲಿ ನಿರಂತರವಾಗಿ ಬೀಡುಬಿಟ್ಟು  ಪ್ರಕರಣದ ಕುರಿತು ಅವಿರತವಾಗಿ ಕೆಲಸ ಮಾಡಿದೆ ಎಂದು ಸಿಬಿಐ ವಕ್ತಾರ ಆರ್.ಕೆ.ಗೌರ್ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: ಆರೋಪಿ ಎಸ್‌ಐ ಪಾಲ್‌ದೊರೈ ಕೊರೊನಾದಿಂದ ನಿಧನ

ತಂದೆ-ಮಗನನ್ನು 19.06.2020 ರ ಸಂಜೆ ಬಂಧಿಸಲಾಗಿದೆ ಮತ್ತು ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಸಂಜೆ ಮತ್ತು ಮಧ್ಯರಾತ್ರಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಸಿಬಿಐ ತನಿಖೆಯಲ್ಲಿ ತಿಳಿದುಬಂದಿದೆ. ಹಿಂಸೆಯ ಪರಿಣಾಮವಾಗಿ ಜೂನ್ 22 ಮತ್ತು ಜೂನ್ 23ರ ಮಧ್ಯರಾತ್ರಿಯಲ್ಲಿ ಇಬ್ಬರೂ ಸಾವನ್ನಪ್ಪಿದರು.

ತನಿಖೆಯ ನಂತರ, ಎರಡೂ ಪ್ರಕರಣಗಳಲ್ಲಿ ಸಂಯೋಜಿತ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ಗೌರ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ಇತರ ವ್ಯಕ್ತಿಗಳ ಪಾತ್ರದ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.

ಆರೋಪಿಗಳನ್ನು ಹಿಂಸಿಸಲು ಲಾಠಿಗಳ ಬಳಕೆ ಮತ್ತು ರಕ್ತದ ಕಲೆಗಳನ್ನು ಹೊತ್ತ ಟೇಬಲ್ ಭೀಕರ ಅಪರಾಧಕ್ಕೆ ಸಾಕ್ಷಿಯಾಗಿದೆ. ಅಪರಾಧ ನಡೆದ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯ ಹೇಳಿಕೆಯನ್ನು ಆಧರಿಸಿ ಈ ತನಿಖೆ ನಡೆದಿವೆ.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...