Homeಮುಖಪುಟತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: 9 ಪೊಲೀಸರ ವಿರುದ್ಧ ಚಾರ್ಜ್‌ಶೀಟ್

ಆರೋಪಿಗಳನ್ನು ಹಿಂಸಿಸಲು ಲಾಠಿಗಳ ಬಳಕೆ ಮತ್ತು ರಕ್ತದ ಕಲೆಗಳನ್ನು ಹೊತ್ತ ಟೇಬಲ್ ಭೀಕರ ಅಪರಾಧಕ್ಕೆ ಸಾಕ್ಷಿಯಾಗಿದೆ. ಅಪರಾಧ ನಡೆದ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯ ಹೇಳಿಕೆಯನ್ನು ಆಧರಿಸಿ ಈ ತನಿಖೆ ನಡೆದಿವೆ.

- Advertisement -
- Advertisement -

ದೇಶಾದ್ಯಂತ ಭಾರಿ ಕೋಲಾಹಲಕ್ಕೆ ಕಾರಣವಾದ ತಮಿಳುನಾಡಿನ ಜಯರಾಜ್ ಮತ್ತು ಅವರ ಪುತ್ರ ಬೆನಿಕ್ಸ್ ಅವರ ಲಾಕಪ್ ಡೆತ್‌ ಪ್ರಕರಣದಲ್ಲಿ ಒಂಬತ್ತು ಪೊಲೀಸರ ಮೇಲೆ ಕೊಲೆ, ಪಿತೂರಿ ಮತ್ತು ಇತರ ಅಪರಾಧಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌‌ಶೀಟ್ ದಾಖಲಿಸಿದೆ.

ಕಳೆದ ಜೂನ್‌ನಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಮೊಬೈಲ್ ಫೋನ್ ಅಂಗಡಿಯೊಂದನ್ನು ನಡೆಸುತ್ತಿದ್ದ ತಂದೆ-ಮಗ ಜೋಡಿಯನ್ನು ಲಾಕ್‌ಡೌನ್ ನಿಯಮ ಉಲ್ಲಂಘನೆ ಎಂಬ ಆರೋಪದ ಮೇಲೆ ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಇಬ್ಬರಿಗೂ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಲೈಂಗಿಕವಾಗಿ ಹಿಂಸಿಸಲಾಗಿತ್ತು. ಚಿತ್ರಹಿಂಸೆಯಿಂದ ಇಬ್ಬರ ಗುದನಾಳಗಳಿಂದ ರಕ್ತ ಹರಿಯುತ್ತಿತ್ತು. ನಂತರ ಅವರಿಬ್ಬರೂ ಕೋವಿಲ್ಪಟ್ಟಿ ಜೈಲಿನಲ್ಲಿ ಮೃತಪಟ್ಟಿದ್ದರು.

ಈ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿ, ಬೃಹತ್ ಪ್ರತಿಭಟನೆಗಳು ನಡೆದಿದ್ದವು. ನಂತರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. 9 ಪೊಲೀಸರ ಮೇಲೆ ಚಾರ್ಜ್‌‌ಶೀಟ್ ಸಲ್ಲಿಸಿದ ಸಿಬಿಐ ಪೊಲೀಸರು ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿರುವ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್‌ ಡೆತ್: ಪೊಲೀಸ್ ದೌರ್ಜನ್ಯಕ್ಕೆ ಕೊನೆಯೆಂದು? ಮಾತು ಸೋತ ಭಾರತ

ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಅಂದಿನ ಇನ್ಸ್‌ಪೆಕ್ಟರ್ ಮತ್ತು ಎಸ್‌ಎಚ್‌ಒ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಕೆ.ಬಾಲಕೃಷ್ಣನ್, ಪಿ.ರಘುಗಣೇಶ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಎಸ್.ಮುರುಗನ್, ಎ.ಸಮದುರೈ, ಮತ್ತು ಕಾನ್‌ಸ್ಟೆಬಲ್‌ಗಳಾದ ಎಂ.ಮುತ್ತುರಾಜ, ಎಸ್.ಚೆಲ್ಲದುರೈ, ಎಕ್ಸ್.ಫ್ರಾನ್ಸಿಸ್ ಮತ್ತು ಎಸ್.ವಿಲುಮುತ್ತು ಎಂಬ 9 ಮಂದಿ ಪೊಲೀಸರ ಹೆಸರುಗಳಿವೆ.

ಸೆಪ್ಟೆಂಬರ್ 30 ರಂದು ಆರೋಪಿಗಳ ಮೂರು ತಿಂಗಳ ಕಸ್ಟಡಿ ಮುಗಿಯುತ್ತಿರುವುದರಿಂದ ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದೆ. ಪೊಲೀಸರ ಚಿತ್ರಹಿಂಸೆ ನಂತರ, ಪೊಲೀಸ್ ಅಧಿಕಾರಿಗಳು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಮತ್ತು ಮೃತರ ಮೇಲೆ “ನಕಲಿ” ಆರೋಪಗಳನ್ನು ದಾಖಲಿಸಿದ್ದಾರೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ.

ತನಿಖೆಯ ಸಮಯದಲ್ಲಿ, ಈ ಆರೋಪಿಗಳಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ ಒಬ್ಬ ಆರೋಪಿ ಸಬ್ ಇನ್ಸ್‌ಪೆಕ್ಟರ್‌ಗೆ ಕೊರೊನಾ ಪಾಸಿಟಿವ್ ಆಗಿ, ಮೃತಪಟ್ಟರು. ಉಳಿದ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ಕೊರೊನಾ ಸಾಂಕ್ರಾಮಿಕ ನಡುವೆಯೂ ಸಿಬಿಐ ತಂಡವು ಮಧುರೈನಲ್ಲಿ ನಿರಂತರವಾಗಿ ಬೀಡುಬಿಟ್ಟು  ಪ್ರಕರಣದ ಕುರಿತು ಅವಿರತವಾಗಿ ಕೆಲಸ ಮಾಡಿದೆ ಎಂದು ಸಿಬಿಐ ವಕ್ತಾರ ಆರ್.ಕೆ.ಗೌರ್ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌ ಪ್ರಕರಣ: ಆರೋಪಿ ಎಸ್‌ಐ ಪಾಲ್‌ದೊರೈ ಕೊರೊನಾದಿಂದ ನಿಧನ

ತಂದೆ-ಮಗನನ್ನು 19.06.2020 ರ ಸಂಜೆ ಬಂಧಿಸಲಾಗಿದೆ ಮತ್ತು ಸಾಥನ್‌ಕುಲಂ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಸಂಜೆ ಮತ್ತು ಮಧ್ಯರಾತ್ರಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಸಿಬಿಐ ತನಿಖೆಯಲ್ಲಿ ತಿಳಿದುಬಂದಿದೆ. ಹಿಂಸೆಯ ಪರಿಣಾಮವಾಗಿ ಜೂನ್ 22 ಮತ್ತು ಜೂನ್ 23ರ ಮಧ್ಯರಾತ್ರಿಯಲ್ಲಿ ಇಬ್ಬರೂ ಸಾವನ್ನಪ್ಪಿದರು.

ತನಿಖೆಯ ನಂತರ, ಎರಡೂ ಪ್ರಕರಣಗಳಲ್ಲಿ ಸಂಯೋಜಿತ ಚಾರ್ಜ್‌ಶೀಟ್ ದಾಖಲಿಸಲಾಗಿದೆ ಎಂದು ಗೌರ್ ಹೇಳಿದ್ದಾರೆ. ಈ ಪ್ರಕರಣದಲ್ಲಿ ಇತರ ವ್ಯಕ್ತಿಗಳ ಪಾತ್ರದ ಬಗ್ಗೆ ಹೆಚ್ಚಿನ ತನಿಖೆ ಮುಂದುವರೆದಿದೆ.

ಆರೋಪಿಗಳನ್ನು ಹಿಂಸಿಸಲು ಲಾಠಿಗಳ ಬಳಕೆ ಮತ್ತು ರಕ್ತದ ಕಲೆಗಳನ್ನು ಹೊತ್ತ ಟೇಬಲ್ ಭೀಕರ ಅಪರಾಧಕ್ಕೆ ಸಾಕ್ಷಿಯಾಗಿದೆ. ಅಪರಾಧ ನಡೆದ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯ ಹೇಳಿಕೆಯನ್ನು ಆಧರಿಸಿ ಈ ತನಿಖೆ ನಡೆದಿವೆ.


ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್‌: ಎರಡು ಪ್ರಕರಣಗಳನ್ನು ದಾಖಲಿಸಿದ ಸಿಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...