Homeಮುಖಪುಟತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ಪೊಲೀಸರು ಈವರೆಗೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಮಾತ್ರ ದಾಖಲಿಸಿದ್ದರು. ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ.

- Advertisement -
- Advertisement -

ಕರೋನವೈರಸ್ ಲಾಕ್ ಡೌನ್ ಸಮಯದಲ್ಲಿ ಕರ್ಫ್ಯೂ ಮೀರಿ ತಮ್ಮ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ಜಯರಾಜ್‌ ಮತ್ತು ಅವರ ಮಗ ಬೆನ್ನಿಕ್ಸ್ ಲಾಕಪ್‌ ಡೆತ್ ಪ್ರಕರಣದಲ್ಲಿ, ಟುಟಿಕೋರಿನ್ ಪೊಲೀಸ್ ಮುಖ್ಯಸ್ಥರನ್ನು ಬದಲಾಯಿಸಲಾಗಿದೆ ಮತ್ತು ಮೂವರು ಪೊಲೀಸರ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಮರಣೋತ್ತರ ವರದಿಯ ಆಧಾರದ ಮೇಲೆ ತಿಳಿಸಿದೆ.

ಈ ಪ್ರಕರಣದ ಕುರಿತು ರಾಜ್ಯದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಸ್ವಯಂಪ್ರೇರಿತ ವಿಚಾರನೆ ನಡೆಸುತ್ತಿದೆ.

ಟುಟಿಕೋರಿನ್ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಬಾಲಗೋಪಾಲನ್ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಎಸ್ ಜಯಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮರಣೋತ್ತರ ವರದಿಗಳ ಆಧಾರದ ಮೇಲೆ ತಂದೆ-ಮಗನ ಸಾವಿನಲ್ಲಿ ಭಾಗಿಯಾಗಿರುವ ಮೂವರು ಪೊಲೀಸರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ವಿಚಾರಣೆಗೆ ಅಡ್ಡಿಯುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ನಂತರ ಹೈಕೋರ್ಟ್ ಉಪ ಪೊಲೀಸ್ ವರಿಷ್ಠಾಧಿಕಾರಿ ಸಿ.ಪ್ರಥಾಪನ್, ಹೆಚ್ಚುವರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಡಿ ಕುಮಾರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಮಹಾರಾಜನ್ ವಿರುದ್ಧ ತಿರಸ್ಕಾರ ಕ್ರಮ ಕೈಗೊಂಡಿದೆ.

“ನೀವು ನಮಗೆ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಕಾನ್ಸ್ಟೇಬಲ್ ಮಹಾರಾಜನ್ ಹೇಳಿದ್ದರು ಎಂದು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ನೀಡಿದ ವರದಿಯಲ್ಲಿ ತಿಳಿಸಿದ್ದಾರೆ.

ಪೊಲೀಸರು ಈವರೆಗೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಮಾತ್ರ ದಾಖಲಿಸಿದ್ದರು. ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ.

ಕೋವಿಲ್ಪಟ್ಟಿ ಉಪ ಕಾರಾಗೃಹದಲ್ಲಿ ವೈದ್ಯರು ನಿರ್ವಹಿಸಿದ ದಾಖಲೆಯ ಒಂದು ಭಾಗವು ಸೋರಿಕೆಯಾಗಿದೆ. ಅದರಲ್ಲಿ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರಂದು ಪೊಲೀಸ್ ಕಸ್ಟಡಿಯಿಂದ ಕರೆತಂದಾಗ ಅವರ ದೇಹಲ ಮೇಲೆ ಗಾಯಗಳಾಗಿದ್ದವು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

58 ವರ್ಷದ ಜಯರಾಜ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿದ್ದರು ಎಂದು ಆಸ್ಪತ್ರೆಯ ದಾಖಲೆ ತಿಳಿಸಿದೆ. ಅವನ ಗ್ಲುಟಿಯಲ್ (ಪೃಷ್ಠದ) ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು ಎಂದು ದಾಖಲೆಯಲ್ಲಿ ತಿಳಿಸಲಾಗಿದೆ. ಅದೇ ರೀತಿ 31 ವರ್ಷದ ಬೆನಿಕ್ಸ್ ತನ್ನ ಗ್ಲುಟಿಯಲ್ ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು.

ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ರಿಮಾಂಡ್ ಪ್ರಕ್ರಿಯೆಗಾಗಿ ಸಾಥಂಕುಲಂನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ ಸರವಣನ್ ಅವರ ಬಳಿ ಕರೆದೊಯ್ಯಲಾಯಿತು.

ಗ್ಲುಟಿಯಲ್ ಪ್ರದೇಶದ ಗಾಯಗಳು ಮತ್ತು ಇತರ ಗಾಯಗಳನ್ನು ಕೋವಿಲ್ಪಟ್ಟಿ ಉಪ-ಜೈಲು ವೈದ್ಯರು ನಿರ್ವಹಿಸಿದ ಪ್ರವೇಶ ದಾಖಲೆಗಳಲ್ಲಿ ದಾಖಲಿಸಲಾಗಿದೆ. ಟೈಮ್ಸ್ ನೌ ಜೈಲಿನ ರಿಜಿಸ್ಟರ್ ಅನ್ನು ಪರಿಶೀಲಿಸಿದಾಗ ಅವರ ಪೃಷ್ಠದ ಗಾಯಗಳು ಮತ್ತು ರಕ್ತಸ್ರಾವವನ್ನು ದಾಖಲಿಸಿರುವುದು ಸ್ಪಷ್ಟವಾಗಿದೆ. ಜೈಲಿಗೆ ಪ್ರವೇಶಿಸುವ ಸಮಯದಲ್ಲಿ ಬೆನಿಕ್ಸ್ ಕಾಲುಗಳು ಮತ್ತು ಮಣಿಕಟ್ಟುಗಳು ಊದಿಕೊಂಡಿದ್ದವು ಎಂದು ಜೈಲಿನ ಪ್ರವೇಶ ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರವೇಶ ದಾಖಲೆಗೆ ಜಯರಾಜ್, ಬೆನಿಕ್ಸ್ ಮತ್ತು ಸಾಥನ್‌ಕುಲಂ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು, ಚೆಲ್ಲದುರೈ ಮತ್ತು ಮುತ್ತುರಾಜ್ ಸಹಿ ಮಾಡಿದ್ದಾರೆ.

ಈ ದಾಖಲೆಗಳು ಇವರಿಬ್ಬರನ್ನು ಸಾಥಂಕುಲಂ ಪೊಲೀಸ್ ಠಾಣೆಯಲ್ಲಿ ಪೊಲೀಸರು ಹಿಂಸಿಸಿದ್ದಾರೆ ಎಂದು ಜೂನ್ 23 ರಿಂದ ಹಲವಾರು ಪ್ರತ್ಯಕ್ಷದರ್ಶಿಗಳು ಹೇಳುತ್ತಿರುವುದನ್ನು ಖಚಿತಪಡಿಸುತ್ತವೆ. ವರದಿಯ ಪ್ರಕಾರ, ಇನ್ಸ್‌ಪೆಕ್ಟರ್ ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಬಾಲಕೃಷ್ಣನ್ ಮತ್ತು ರಘುಗಾನೇಶ್ ಮತ್ತು ಐವರು ‘ಪೊಲೀಸ್ ಸ್ವಯಂಸೇವಕರು’ ಸಿಬ್ಬಂದಿ ಸೇರಿದಂತೆ ಎಂಟು ಪೊಲೀಸರು ಜೂನ್ 19 ರ ರಾತ್ರಿ ಠಾಣೆಯಲ್ಲಿದ್ದ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ.

ಜಯರಾಜ್ ಮತ್ತು ಬೆನಿಕ್ಸ್ ಅವರ ಕುಟುಂಬ ಮತ್ತು ಸ್ನೇಹಿತರು ಜೂನ್ 20 ರಂದು ಆಸ್ಪತ್ರೆಯ ಒಳಗೆ ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕಚೇರಿಗೆ ಹೋಗುವ ಮೊದಲು ಅವರ ಬಟ್ಟೆಗಳು ರಕ್ತದಿಂದ ಒದ್ದೆಯಾದ ಕಾರಣಕ್ಕೆ ಅನೇಕ ಬಾರಿ ತಮ್ಮ ಶರ್ಟ್ ಮತ್ತು ಲುಂಗಿಯನ್ನು ಬದಲಾಯಿಸಬೇಕಾಗಿತ್ತು ಎಂದು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪನ್ನೂನ್‌ ಹತ್ಯೆ ಸಂಚು: ವಾಷಿಂಗ್ಟನ್ ಪೋಸ್ಟ್ ವರದಿಗೆ ಅಮೆರಿಕ ಪ್ರತಿಕ್ರಿಯೆ

0
ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್‌ ಹತ್ಯೆಯ ಸಂಚಿಗೆ ಸಂಬಂಧಿಸಿದ 'ದಿ ವಾಷಿಂಗ್ಟನ್ ಪೋಸ್ಟ್ ವರದಿ' ಬೆನ್ನಲ್ಲಿ ಆರೋಪಗಳ ಬಗ್ಗೆ ತನಿಖೆಗೆ ಭಾರತ ಸರ್ಕಾರದೊಂದಿಗೆ ನಿಯಮಿತವಾಗಿ ಕೆಲಸ ಮಾಡುತ್ತಿದೆ ಎಂದು ಅಮೆರಿಕ...