Homeಮುಖಪುಟತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ಪೊಲೀಸರು ಈವರೆಗೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಮಾತ್ರ ದಾಖಲಿಸಿದ್ದರು. ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ.

- Advertisement -
- Advertisement -

ಕರೋನವೈರಸ್ ಲಾಕ್ ಡೌನ್ ಸಮಯದಲ್ಲಿ ಕರ್ಫ್ಯೂ ಮೀರಿ ತಮ್ಮ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ಜಯರಾಜ್‌ ಮತ್ತು ಅವರ ಮಗ ಬೆನ್ನಿಕ್ಸ್ ಲಾಕಪ್‌ ಡೆತ್ ಪ್ರಕರಣದಲ್ಲಿ, ಟುಟಿಕೋರಿನ್ ಪೊಲೀಸ್ ಮುಖ್ಯಸ್ಥರನ್ನು ಬದಲಾಯಿಸಲಾಗಿದೆ ಮತ್ತು ಮೂವರು ಪೊಲೀಸರ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಮರಣೋತ್ತರ ವರದಿಯ ಆಧಾರದ ಮೇಲೆ ತಿಳಿಸಿದೆ.

ಈ ಪ್ರಕರಣದ ಕುರಿತು ರಾಜ್ಯದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಸ್ವಯಂಪ್ರೇರಿತ ವಿಚಾರನೆ ನಡೆಸುತ್ತಿದೆ.

ಟುಟಿಕೋರಿನ್ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಬಾಲಗೋಪಾಲನ್ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಎಸ್ ಜಯಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮರಣೋತ್ತರ ವರದಿಗಳ ಆಧಾರದ ಮೇಲೆ ತಂದೆ-ಮಗನ ಸಾವಿನಲ್ಲಿ ಭಾಗಿಯಾಗಿರುವ ಮೂವರು ಪೊಲೀಸರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ವಿಚಾರಣೆಗೆ ಅಡ್ಡಿಯುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ನಂತರ ಹೈಕೋರ್ಟ್ ಉಪ ಪೊಲೀಸ್ ವರಿಷ್ಠಾಧಿಕಾರಿ ಸಿ.ಪ್ರಥಾಪನ್, ಹೆಚ್ಚುವರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಡಿ ಕುಮಾರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಮಹಾರಾಜನ್ ವಿರುದ್ಧ ತಿರಸ್ಕಾರ ಕ್ರಮ ಕೈಗೊಂಡಿದೆ.

“ನೀವು ನಮಗೆ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಕಾನ್ಸ್ಟೇಬಲ್ ಮಹಾರಾಜನ್ ಹೇಳಿದ್ದರು ಎಂದು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ನೀಡಿದ ವರದಿಯಲ್ಲಿ ತಿಳಿಸಿದ್ದಾರೆ.

ಪೊಲೀಸರು ಈವರೆಗೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಮಾತ್ರ ದಾಖಲಿಸಿದ್ದರು. ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ.

ಕೋವಿಲ್ಪಟ್ಟಿ ಉಪ ಕಾರಾಗೃಹದಲ್ಲಿ ವೈದ್ಯರು ನಿರ್ವಹಿಸಿದ ದಾಖಲೆಯ ಒಂದು ಭಾಗವು ಸೋರಿಕೆಯಾಗಿದೆ. ಅದರಲ್ಲಿ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರಂದು ಪೊಲೀಸ್ ಕಸ್ಟಡಿಯಿಂದ ಕರೆತಂದಾಗ ಅವರ ದೇಹಲ ಮೇಲೆ ಗಾಯಗಳಾಗಿದ್ದವು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

58 ವರ್ಷದ ಜಯರಾಜ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿದ್ದರು ಎಂದು ಆಸ್ಪತ್ರೆಯ ದಾಖಲೆ ತಿಳಿಸಿದೆ. ಅವನ ಗ್ಲುಟಿಯಲ್ (ಪೃಷ್ಠದ) ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು ಎಂದು ದಾಖಲೆಯಲ್ಲಿ ತಿಳಿಸಲಾಗಿದೆ. ಅದೇ ರೀತಿ 31 ವರ್ಷದ ಬೆನಿಕ್ಸ್ ತನ್ನ ಗ್ಲುಟಿಯಲ್ ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು.

ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ರಿಮಾಂಡ್ ಪ್ರಕ್ರಿಯೆಗಾಗಿ ಸಾಥಂಕುಲಂನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ ಸರವಣನ್ ಅವರ ಬಳಿ ಕರೆದೊಯ್ಯಲಾಯಿತು.

ಗ್ಲುಟಿಯಲ್ ಪ್ರದೇಶದ ಗಾಯಗಳು ಮತ್ತು ಇತರ ಗಾಯಗಳನ್ನು ಕೋವಿಲ್ಪಟ್ಟಿ ಉಪ-ಜೈಲು ವೈದ್ಯರು ನಿರ್ವಹಿಸಿದ ಪ್ರವೇಶ ದಾಖಲೆಗಳಲ್ಲಿ ದಾಖಲಿಸಲಾಗಿದೆ. ಟೈಮ್ಸ್ ನೌ ಜೈಲಿನ ರಿಜಿಸ್ಟರ್ ಅನ್ನು ಪರಿಶೀಲಿಸಿದಾಗ ಅವರ ಪೃಷ್ಠದ ಗಾಯಗಳು ಮತ್ತು ರಕ್ತಸ್ರಾವವನ್ನು ದಾಖಲಿಸಿರುವುದು ಸ್ಪಷ್ಟವಾಗಿದೆ. ಜೈಲಿಗೆ ಪ್ರವೇಶಿಸುವ ಸಮಯದಲ್ಲಿ ಬೆನಿಕ್ಸ್ ಕಾಲುಗಳು ಮತ್ತು ಮಣಿಕಟ್ಟುಗಳು ಊದಿಕೊಂಡಿದ್ದವು ಎಂದು ಜೈಲಿನ ಪ್ರವೇಶ ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರವೇಶ ದಾಖಲೆಗೆ ಜಯರಾಜ್, ಬೆನಿಕ್ಸ್ ಮತ್ತು ಸಾಥನ್‌ಕುಲಂ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು, ಚೆಲ್ಲದುರೈ ಮತ್ತು ಮುತ್ತುರಾಜ್ ಸಹಿ ಮಾಡಿದ್ದಾರೆ.

ಈ ದಾಖಲೆಗಳು ಇವರಿಬ್ಬರನ್ನು ಸಾಥಂಕುಲಂ ಪೊಲೀಸ್ ಠಾಣೆಯಲ್ಲಿ ಪೊಲೀಸರು ಹಿಂಸಿಸಿದ್ದಾರೆ ಎಂದು ಜೂನ್ 23 ರಿಂದ ಹಲವಾರು ಪ್ರತ್ಯಕ್ಷದರ್ಶಿಗಳು ಹೇಳುತ್ತಿರುವುದನ್ನು ಖಚಿತಪಡಿಸುತ್ತವೆ. ವರದಿಯ ಪ್ರಕಾರ, ಇನ್ಸ್‌ಪೆಕ್ಟರ್ ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಬಾಲಕೃಷ್ಣನ್ ಮತ್ತು ರಘುಗಾನೇಶ್ ಮತ್ತು ಐವರು ‘ಪೊಲೀಸ್ ಸ್ವಯಂಸೇವಕರು’ ಸಿಬ್ಬಂದಿ ಸೇರಿದಂತೆ ಎಂಟು ಪೊಲೀಸರು ಜೂನ್ 19 ರ ರಾತ್ರಿ ಠಾಣೆಯಲ್ಲಿದ್ದ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ.

ಜಯರಾಜ್ ಮತ್ತು ಬೆನಿಕ್ಸ್ ಅವರ ಕುಟುಂಬ ಮತ್ತು ಸ್ನೇಹಿತರು ಜೂನ್ 20 ರಂದು ಆಸ್ಪತ್ರೆಯ ಒಳಗೆ ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕಚೇರಿಗೆ ಹೋಗುವ ಮೊದಲು ಅವರ ಬಟ್ಟೆಗಳು ರಕ್ತದಿಂದ ಒದ್ದೆಯಾದ ಕಾರಣಕ್ಕೆ ಅನೇಕ ಬಾರಿ ತಮ್ಮ ಶರ್ಟ್ ಮತ್ತು ಲುಂಗಿಯನ್ನು ಬದಲಾಯಿಸಬೇಕಾಗಿತ್ತು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....