Homeಮುಖಪುಟತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ತಮಿಳುನಾಡು ಲಾಕಪ್ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣಕ್ಕೆ ಹೈಕೋರ್ಟ್ ಶಿಫಾರಸ್ಸು

ಪೊಲೀಸರು ಈವರೆಗೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಮಾತ್ರ ದಾಖಲಿಸಿದ್ದರು. ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ.

- Advertisement -
- Advertisement -

ಕರೋನವೈರಸ್ ಲಾಕ್ ಡೌನ್ ಸಮಯದಲ್ಲಿ ಕರ್ಫ್ಯೂ ಮೀರಿ ತಮ್ಮ ಅಂಗಡಿಯನ್ನು ತೆರೆದಿಟ್ಟಿದ್ದಕ್ಕಾಗಿ ಜಯರಾಜ್‌ ಮತ್ತು ಅವರ ಮಗ ಬೆನ್ನಿಕ್ಸ್ ಲಾಕಪ್‌ ಡೆತ್ ಪ್ರಕರಣದಲ್ಲಿ, ಟುಟಿಕೋರಿನ್ ಪೊಲೀಸ್ ಮುಖ್ಯಸ್ಥರನ್ನು ಬದಲಾಯಿಸಲಾಗಿದೆ ಮತ್ತು ಮೂವರು ಪೊಲೀಸರ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಮರಣೋತ್ತರ ವರದಿಯ ಆಧಾರದ ಮೇಲೆ ತಿಳಿಸಿದೆ.

ಈ ಪ್ರಕರಣದ ಕುರಿತು ರಾಜ್ಯದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಸ್ವಯಂಪ್ರೇರಿತ ವಿಚಾರನೆ ನಡೆಸುತ್ತಿದೆ.

ಟುಟಿಕೋರಿನ್ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಬಾಲಗೋಪಾಲನ್ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಎಸ್ ಜಯಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಮರಣೋತ್ತರ ವರದಿಗಳ ಆಧಾರದ ಮೇಲೆ ತಂದೆ-ಮಗನ ಸಾವಿನಲ್ಲಿ ಭಾಗಿಯಾಗಿರುವ ಮೂವರು ಪೊಲೀಸರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ವಿಚಾರಣೆಗೆ ಅಡ್ಡಿಯುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ನಂತರ ಹೈಕೋರ್ಟ್ ಉಪ ಪೊಲೀಸ್ ವರಿಷ್ಠಾಧಿಕಾರಿ ಸಿ.ಪ್ರಥಾಪನ್, ಹೆಚ್ಚುವರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಡಿ ಕುಮಾರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಮಹಾರಾಜನ್ ವಿರುದ್ಧ ತಿರಸ್ಕಾರ ಕ್ರಮ ಕೈಗೊಂಡಿದೆ.

“ನೀವು ನಮಗೆ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಕಾನ್ಸ್ಟೇಬಲ್ ಮಹಾರಾಜನ್ ಹೇಳಿದ್ದರು ಎಂದು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ನೀಡಿದ ವರದಿಯಲ್ಲಿ ತಿಳಿಸಿದ್ದಾರೆ.

ಪೊಲೀಸರು ಈವರೆಗೆ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಮಾತ್ರ ದಾಖಲಿಸಿದ್ದರು. ರಾಜ್ಯ ಸರ್ಕಾರ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ.

ಕೋವಿಲ್ಪಟ್ಟಿ ಉಪ ಕಾರಾಗೃಹದಲ್ಲಿ ವೈದ್ಯರು ನಿರ್ವಹಿಸಿದ ದಾಖಲೆಯ ಒಂದು ಭಾಗವು ಸೋರಿಕೆಯಾಗಿದೆ. ಅದರಲ್ಲಿ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರಂದು ಪೊಲೀಸ್ ಕಸ್ಟಡಿಯಿಂದ ಕರೆತಂದಾಗ ಅವರ ದೇಹಲ ಮೇಲೆ ಗಾಯಗಳಾಗಿದ್ದವು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

58 ವರ್ಷದ ಜಯರಾಜ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿದ್ದರು ಎಂದು ಆಸ್ಪತ್ರೆಯ ದಾಖಲೆ ತಿಳಿಸಿದೆ. ಅವನ ಗ್ಲುಟಿಯಲ್ (ಪೃಷ್ಠದ) ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು ಎಂದು ದಾಖಲೆಯಲ್ಲಿ ತಿಳಿಸಲಾಗಿದೆ. ಅದೇ ರೀತಿ 31 ವರ್ಷದ ಬೆನಿಕ್ಸ್ ತನ್ನ ಗ್ಲುಟಿಯಲ್ ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು.

ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ರಿಮಾಂಡ್ ಪ್ರಕ್ರಿಯೆಗಾಗಿ ಸಾಥಂಕುಲಂನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ ಸರವಣನ್ ಅವರ ಬಳಿ ಕರೆದೊಯ್ಯಲಾಯಿತು.

ಗ್ಲುಟಿಯಲ್ ಪ್ರದೇಶದ ಗಾಯಗಳು ಮತ್ತು ಇತರ ಗಾಯಗಳನ್ನು ಕೋವಿಲ್ಪಟ್ಟಿ ಉಪ-ಜೈಲು ವೈದ್ಯರು ನಿರ್ವಹಿಸಿದ ಪ್ರವೇಶ ದಾಖಲೆಗಳಲ್ಲಿ ದಾಖಲಿಸಲಾಗಿದೆ. ಟೈಮ್ಸ್ ನೌ ಜೈಲಿನ ರಿಜಿಸ್ಟರ್ ಅನ್ನು ಪರಿಶೀಲಿಸಿದಾಗ ಅವರ ಪೃಷ್ಠದ ಗಾಯಗಳು ಮತ್ತು ರಕ್ತಸ್ರಾವವನ್ನು ದಾಖಲಿಸಿರುವುದು ಸ್ಪಷ್ಟವಾಗಿದೆ. ಜೈಲಿಗೆ ಪ್ರವೇಶಿಸುವ ಸಮಯದಲ್ಲಿ ಬೆನಿಕ್ಸ್ ಕಾಲುಗಳು ಮತ್ತು ಮಣಿಕಟ್ಟುಗಳು ಊದಿಕೊಂಡಿದ್ದವು ಎಂದು ಜೈಲಿನ ಪ್ರವೇಶ ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರವೇಶ ದಾಖಲೆಗೆ ಜಯರಾಜ್, ಬೆನಿಕ್ಸ್ ಮತ್ತು ಸಾಥನ್‌ಕುಲಂ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು, ಚೆಲ್ಲದುರೈ ಮತ್ತು ಮುತ್ತುರಾಜ್ ಸಹಿ ಮಾಡಿದ್ದಾರೆ.

ಈ ದಾಖಲೆಗಳು ಇವರಿಬ್ಬರನ್ನು ಸಾಥಂಕುಲಂ ಪೊಲೀಸ್ ಠಾಣೆಯಲ್ಲಿ ಪೊಲೀಸರು ಹಿಂಸಿಸಿದ್ದಾರೆ ಎಂದು ಜೂನ್ 23 ರಿಂದ ಹಲವಾರು ಪ್ರತ್ಯಕ್ಷದರ್ಶಿಗಳು ಹೇಳುತ್ತಿರುವುದನ್ನು ಖಚಿತಪಡಿಸುತ್ತವೆ. ವರದಿಯ ಪ್ರಕಾರ, ಇನ್ಸ್‌ಪೆಕ್ಟರ್ ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಬಾಲಕೃಷ್ಣನ್ ಮತ್ತು ರಘುಗಾನೇಶ್ ಮತ್ತು ಐವರು ‘ಪೊಲೀಸ್ ಸ್ವಯಂಸೇವಕರು’ ಸಿಬ್ಬಂದಿ ಸೇರಿದಂತೆ ಎಂಟು ಪೊಲೀಸರು ಜೂನ್ 19 ರ ರಾತ್ರಿ ಠಾಣೆಯಲ್ಲಿದ್ದ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ.

ಜಯರಾಜ್ ಮತ್ತು ಬೆನಿಕ್ಸ್ ಅವರ ಕುಟುಂಬ ಮತ್ತು ಸ್ನೇಹಿತರು ಜೂನ್ 20 ರಂದು ಆಸ್ಪತ್ರೆಯ ಒಳಗೆ ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕಚೇರಿಗೆ ಹೋಗುವ ಮೊದಲು ಅವರ ಬಟ್ಟೆಗಳು ರಕ್ತದಿಂದ ಒದ್ದೆಯಾದ ಕಾರಣಕ್ಕೆ ಅನೇಕ ಬಾರಿ ತಮ್ಮ ಶರ್ಟ್ ಮತ್ತು ಲುಂಗಿಯನ್ನು ಬದಲಾಯಿಸಬೇಕಾಗಿತ್ತು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...