Homeಮುಖಪುಟತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನಂಕುಳಂನ ಪೊಲೀಸ್ ಲಾಕಪ್‌ನಲ್ಲಿ ಮೃತಪಟ್ಟ ಜಯರಾಜ್(58) ಹಾಗೂ ಅವರ ಮಗ ಬೆನಿಕ್ಸ್(31) ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯವನ್ನು ದೃಢೀಕರಿಸುವ ಹಲವು ಸಾಕ್ಷ್ಯಗಳು ಬೆಳಕಿಗೆ ಬಂದಿವೆ.

ತೂತುಕುಡಿ ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿ ಮೃತಪಟ್ಟ ತಂದೆ – ಮಗ ಜಯರಾಜ್ ಮತ್ತು ಬೆನಿಕ್ಸ್ ಸಾವಿಗೆ ನ್ಯಾಯಕ್ಕಾಗಿ ತಮಿಳುನಾಡು ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಅವರ ಸ್ನೇಹಿತರು ಮತ್ತು ಕುಟುಂಬದವರು ಆರೋಪಿಸುತ್ತಿರುವುದನ್ನು ದೃಢಪಡಿಸುತ್ತದೆ ಜಯರಾಜ್ ಮತ್ತು ಬೆನಿಕ್ಸ್ ಅವರ ಮೇಲೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಾಗ ತೀವ್ರಥರವಾಗಿ ಹಲ್ಲೆ ಮಾಡಿದ್ದು, ಆ ಸಮಯದಲ್ಲಿಯೇ ಗಾಯಗಳಾಗಿವೆ ಎನ್ನಲಾಗಿದೆ.


ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ


ಕೋವಿಲ್ಪಟ್ಟಿ ಉಪ ಕಾರಾಗೃಹದಲ್ಲಿ ವೈದ್ಯರು ನಿರ್ವಹಿಸಿದ ದಾಖಲೆಯ ಒಂದು ಭಾಗವು ಸೋರಿಕೆಯಾಗಿದೆ. ಅದರಲ್ಲಿ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರಂದು ಪೊಲೀಸ್ ಕಸ್ಟಡಿಯಿಂದ ಕರೆತಂದಾಗ ಅವರ ದೇಹಲ ಮೇಲೆ ಗಾಯಗಳಾಗಿದ್ದವು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

58 ವರ್ಷದ ಜಯರಾಜ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿದ್ದರು ಎಂದು ಆಸ್ಪತ್ರೆಯ ದಾಖಲೆ ತಿಳಿಸಿದೆ. ಅವನ ಗ್ಲುಟಿಯಲ್ (ಪೃಷ್ಠದ) ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು ಎಂದು ದಾಖಲೆಯಲ್ಲಿ ತಿಳಿಸಲಾಗಿದೆ. ಅದೇ ರೀತಿ 31 ವರ್ಷದ ಬೆನಿಕ್ಸ್ ತನ್ನ ಗ್ಲುಟಿಯಲ್ ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು.

ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ರಿಮಾಂಡ್ ಪ್ರಕ್ರಿಯೆಗಾಗಿ ಸಾಥಂಕುಲಂನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ ಸರವಣನ್ ಅವರ ಬಳಿ ಕರೆದೊಯ್ಯಲಾಯಿತು.

ಗ್ಲುಟಿಯಲ್ ಪ್ರದೇಶದ ಗಾಯಗಳು ಮತ್ತು ಇತರ ಗಾಯಗಳನ್ನು ಕೋವಿಲ್ಪಟ್ಟಿ ಉಪ-ಜೈಲು ವೈದ್ಯರು ನಿರ್ವಹಿಸಿದ ಪ್ರವೇಶ ದಾಖಲೆಗಳಲ್ಲಿ ದಾಖಲಿಸಲಾಗಿದೆ. ಟೈಮ್ಸ್ ನೌ ಜೈಲಿನ ರಿಜಿಸ್ಟರ್ ಅನ್ನು ಪರಿಶೀಲಿಸಿದಾಗ ಅವರ ಪೃಷ್ಠದ ಗಾಯಗಳು ಮತ್ತು ರಕ್ತಸ್ರಾವವನ್ನು ದಾಖಲಿಸಿರುವುದು ಸ್ಪಷ್ಟವಾಗಿದೆ. ಜೈಲಿಗೆ ಪ್ರವೇಶಿಸುವ ಸಮಯದಲ್ಲಿ ಬೆನಿಕ್ಸ್ ಕಾಲುಗಳು ಮತ್ತು ಮಣಿಕಟ್ಟುಗಳು ಊದಿಕೊಂಡಿದ್ದವು ಎಂದು ಜೈಲಿನ ಪ್ರವೇಶ ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರವೇಶ ದಾಖಲೆಗೆ ಜಯರಾಜ್, ಬೆನಿಕ್ಸ್ ಮತ್ತು ಸಾಥನ್‌ಕುಲಂ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು, ಚೆಲ್ಲದುರೈ ಮತ್ತು ಮುತ್ತುರಾಜ್ ಸಹಿ ಮಾಡಿದ್ದಾರೆ.

ಈ ದಾಖಲೆಗಳು ಇವರಿಬ್ಬರನ್ನು ಸಾಥಂಕುಲಂ ಪೊಲೀಸ್ ಠಾಣೆಯಲ್ಲಿ ಪೊಲೀಸರು ಹಿಂಸಿಸಿದ್ದಾರೆ ಎಂದು ಜೂನ್ 23 ರಿಂದ ಹಲವಾರು ಪ್ರತ್ಯಕ್ಷದರ್ಶಿಗಳು ಹೇಳುತ್ತಿರುವುದನ್ನು ಖಚಿತಪಡಿಸುತ್ತವೆ. ವರದಿಯ ಪ್ರಕಾರ, ಇನ್ಸ್‌ಪೆಕ್ಟರ್ ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಬಾಲಕೃಷ್ಣನ್ ಮತ್ತು ರಘುಗಾನೇಶ್ ಮತ್ತು ಐವರು ‘ಪೊಲೀಸ್ ಸ್ವಯಂಸೇವಕರು’ ಸಿಬ್ಬಂದಿ ಸೇರಿದಂತೆ ಎಂಟು ಪೊಲೀಸರು ಜೂನ್ 19 ರ ರಾತ್ರಿ ಠಾಣೆಯಲ್ಲಿದ್ದ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ.

ಜಯರಾಜ್ ಮತ್ತು ಬೆನಿಕ್ಸ್ ಅವರ ಕುಟುಂಬ ಮತ್ತು ಸ್ನೇಹಿತರು ಜೂನ್ 20 ರಂದು ಆಸ್ಪತ್ರೆಯ ಒಳಗೆ ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕಚೇರಿಗೆ ಹೋಗುವ ಮೊದಲು ಅವರ ಬಟ್ಟೆಗಳು ರಕ್ತದಿಂದ ಒದ್ದೆಯಾದ ಕಾರಣಕ್ಕೆ ಅನೇಕ ಬಾರಿ ತಮ್ಮ ಶರ್ಟ್ ಮತ್ತು ಲುಂಗಿಯನ್ನು ಬದಲಾಯಿಸಬೇಕಾಗಿತ್ತು ಎಂದು ತಿಳಿಸಿದ್ದಾರೆ.

ಆದರೆ ಆಸ್ಪತ್ರೆಯ ದಾಖಲೆಯಲ್ಲಿ ಸೋರಿಕೆಯಾದ ಭಾಗವು ಆಶ್ಚರ್ಯಕರವಾಗಿದೆ, ರಕ್ತಸ್ರಾವದ ಬಗ್ಗೆ ಇದರಲ್ಲಿ ಯಾವುದೇ ಉಲ್ಲೇಖ ಇಲ್ಲ. ಕಾನೂನಿನ ಪ್ರಕಾರ ಈ ವೈದ್ಯಕೀಯ ತಪಾಸಣೆ ಸಂಪೂರ್ಣ ವಂಚನೆ ಮತ್ತು ಆಸ್ಪತ್ರೆಯಲ್ಲಿ ಇವರಿಬ್ಬರನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿಯೂ ಸಹ ಅನೇಕ ಪೊಲೀಸ್ ಸಿಬ್ಬಂದಿ ಇದ್ದರು ಮತ್ತು ಜಯರಾಜ್ ಮತ್ತು ಬೆನಿಕ್ಸ್ ಅವರು ಮ್ಯಾಜಿಸ್ಟ್ರೇಟ್‌ಗೆ ತಮ್ಮ ಗಾಯಗಳ ಬಗ್ಗೆ ಮಾತನಾಡದಂತೆ ನೋಡಿಕೊಂಡರು. ದೈಹಿಕ ತಪಾಸಣೆ ಮತ್ತು ಸ್ಥಿತಿಗತಿಯ ಬಗ್ಗೆ ಕೇಳದ ಕಾರಣಕ್ಕಾಗಿ ಹಲವಾರು ನ್ಯಾಯಶಾಸ್ತ್ರಜ್ಞರು ಮ್ಯಾಜಿಸ್ಟ್ರೇಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮ್ಯಾಜಿಸ್ಟ್ರೇಟ್ ಕಛೇರಿ ತಲುಪುವ ಮೊದಲು ಪೊಲೀಸರು ಕುಟುಂಬಕ್ಕೆ ಗಾಢ ಬಣ್ಣದ ಲುಂಗಿಗಳನ್ನು ತರಲು ಹೇಳಿದ್ದರು ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಇದೆಲ್ಲವೂ ಪೊಲೀಸರು ತಮ್ಮ ಹಲ್ಲೆಯನ್ನು ಮುಚ್ಚಿಕೊಳ್ಳಲು ಮಾಡಿದ ಪ್ರಯತ್ನ ಎಂದು ಸಂಬಂಧಿಕರು ದೂರಿದ್ದಾರೆ.

ತೂತುಕುಡಿ ಜಿಲ್ಲಾಡಳಿತ ನಿರ್ದಿಷ್ಟಪಡಿಸಿದ ಲಾಕ್‌ಡೌನ್ ಸಮಯವನ್ನು ಮೀರಿ ತಮ್ಮ ಅಂಗಡಿಯನ್ನು ತೆರೆದಿರುವ ಆರೋಪದ ಮೇಲೆ ಬೆನಿಕ್ಸ್ ಮತ್ತು ಜಯರಾಜ್ ಅವರನ್ನು ಜೂನ್ 19 ರಂದು ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಅವರನ್ನು ಪೊಲೀಸ್ ಠಾಣೆಯಲ್ಲಿ ಪೊಲೀಸರು ಹಿಂಸಿಸಿ ನಂತರ ಜೂನ್ 20 ರಂದು ಕೋವಿಲ್ಪಟ್ಟಿ ಉಪ ಜೈಲಿನಲ್ಲಿ ರಿಮಾಂಡ್ ಮಾಡಲಾಯಿತು. ಬೆನಿಕ್ಸ್‌ಗೆ ಜೂನ್ 22 ರಂದು ಎದೆನೋವು ಕಾಣಿಸಿಕೊಂಡು ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದರು. ಜಯರಾಜ್ ಮರುದಿನ ಬೆಳಿಗ್ಗೆ ಕೋವಿಲ್ಪಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಪೊಲೀಸ್ ದೌರ್ಜನ್ಯದ ಘಟನೆಗಳನ್ನು ವಿರೋಧಿಸಿ ಜನರು ಮತ್ತು ರಾಜಕಾರಣಿಗಳು ತೀವ್ರ ರೀತಿಯಲ್ಲಿ ಖಂಡಿಸಿದ್ದಾರೆ. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ತೀವ್ರ ಪ್ರತಿಭಟನೆ ಕಂಡುಬಂದಿದೆ.


ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...