Homeಮುಖಪುಟತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

ತಮಿಳುನಾಡು ಲಾಕಪ್‌ ಸಾವು: ಪೊಲೀಸರ ಹಲ್ಲೆಗೆ ಸಿಕ್ಕಿವೆ ಹತ್ತಾರು ದಾಖಲೆಗಳು

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನಂಕುಳಂನ ಪೊಲೀಸ್ ಲಾಕಪ್‌ನಲ್ಲಿ ಮೃತಪಟ್ಟ ಜಯರಾಜ್(58) ಹಾಗೂ ಅವರ ಮಗ ಬೆನಿಕ್ಸ್(31) ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯವನ್ನು ದೃಢೀಕರಿಸುವ ಹಲವು ಸಾಕ್ಷ್ಯಗಳು ಬೆಳಕಿಗೆ ಬಂದಿವೆ.

ತೂತುಕುಡಿ ಪೊಲೀಸರಿಂದ ಚಿತ್ರಹಿಂಸೆಗೊಳಗಾಗಿ ಮೃತಪಟ್ಟ ತಂದೆ – ಮಗ ಜಯರಾಜ್ ಮತ್ತು ಬೆನಿಕ್ಸ್ ಸಾವಿಗೆ ನ್ಯಾಯಕ್ಕಾಗಿ ತಮಿಳುನಾಡು ಸೇರಿದಂತೆ ದೇಶಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿವೆ. ಅವರ ಸ್ನೇಹಿತರು ಮತ್ತು ಕುಟುಂಬದವರು ಆರೋಪಿಸುತ್ತಿರುವುದನ್ನು ದೃಢಪಡಿಸುತ್ತದೆ ಜಯರಾಜ್ ಮತ್ತು ಬೆನಿಕ್ಸ್ ಅವರ ಮೇಲೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಾಗ ತೀವ್ರಥರವಾಗಿ ಹಲ್ಲೆ ಮಾಡಿದ್ದು, ಆ ಸಮಯದಲ್ಲಿಯೇ ಗಾಯಗಳಾಗಿವೆ ಎನ್ನಲಾಗಿದೆ.


ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ


ಕೋವಿಲ್ಪಟ್ಟಿ ಉಪ ಕಾರಾಗೃಹದಲ್ಲಿ ವೈದ್ಯರು ನಿರ್ವಹಿಸಿದ ದಾಖಲೆಯ ಒಂದು ಭಾಗವು ಸೋರಿಕೆಯಾಗಿದೆ. ಅದರಲ್ಲಿ ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರಂದು ಪೊಲೀಸ್ ಕಸ್ಟಡಿಯಿಂದ ಕರೆತಂದಾಗ ಅವರ ದೇಹಲ ಮೇಲೆ ಗಾಯಗಳಾಗಿದ್ದವು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

58 ವರ್ಷದ ಜಯರಾಜ್ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿದ್ದರು ಎಂದು ಆಸ್ಪತ್ರೆಯ ದಾಖಲೆ ತಿಳಿಸಿದೆ. ಅವನ ಗ್ಲುಟಿಯಲ್ (ಪೃಷ್ಠದ) ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು ಎಂದು ದಾಖಲೆಯಲ್ಲಿ ತಿಳಿಸಲಾಗಿದೆ. ಅದೇ ರೀತಿ 31 ವರ್ಷದ ಬೆನಿಕ್ಸ್ ತನ್ನ ಗ್ಲುಟಿಯಲ್ ಮೇಲೆ ಅನೇಕ ಹಲ್ಲೆಯ ಗುರುತುಗಳಿದ್ದವು.

ಜಯರಾಜ್ ಮತ್ತು ಬೆನಿಕ್ಸ್ ಅವರನ್ನು ಜೂನ್ 20 ರ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಕರೆತರಲಾಯಿತು. ಅವರನ್ನು ರಿಮಾಂಡ್ ಪ್ರಕ್ರಿಯೆಗಾಗಿ ಸಾಥಂಕುಲಂನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ ಸರವಣನ್ ಅವರ ಬಳಿ ಕರೆದೊಯ್ಯಲಾಯಿತು.

ಗ್ಲುಟಿಯಲ್ ಪ್ರದೇಶದ ಗಾಯಗಳು ಮತ್ತು ಇತರ ಗಾಯಗಳನ್ನು ಕೋವಿಲ್ಪಟ್ಟಿ ಉಪ-ಜೈಲು ವೈದ್ಯರು ನಿರ್ವಹಿಸಿದ ಪ್ರವೇಶ ದಾಖಲೆಗಳಲ್ಲಿ ದಾಖಲಿಸಲಾಗಿದೆ. ಟೈಮ್ಸ್ ನೌ ಜೈಲಿನ ರಿಜಿಸ್ಟರ್ ಅನ್ನು ಪರಿಶೀಲಿಸಿದಾಗ ಅವರ ಪೃಷ್ಠದ ಗಾಯಗಳು ಮತ್ತು ರಕ್ತಸ್ರಾವವನ್ನು ದಾಖಲಿಸಿರುವುದು ಸ್ಪಷ್ಟವಾಗಿದೆ. ಜೈಲಿಗೆ ಪ್ರವೇಶಿಸುವ ಸಮಯದಲ್ಲಿ ಬೆನಿಕ್ಸ್ ಕಾಲುಗಳು ಮತ್ತು ಮಣಿಕಟ್ಟುಗಳು ಊದಿಕೊಂಡಿದ್ದವು ಎಂದು ಜೈಲಿನ ಪ್ರವೇಶ ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರವೇಶ ದಾಖಲೆಗೆ ಜಯರಾಜ್, ಬೆನಿಕ್ಸ್ ಮತ್ತು ಸಾಥನ್‌ಕುಲಂ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು, ಚೆಲ್ಲದುರೈ ಮತ್ತು ಮುತ್ತುರಾಜ್ ಸಹಿ ಮಾಡಿದ್ದಾರೆ.

ಈ ದಾಖಲೆಗಳು ಇವರಿಬ್ಬರನ್ನು ಸಾಥಂಕುಲಂ ಪೊಲೀಸ್ ಠಾಣೆಯಲ್ಲಿ ಪೊಲೀಸರು ಹಿಂಸಿಸಿದ್ದಾರೆ ಎಂದು ಜೂನ್ 23 ರಿಂದ ಹಲವಾರು ಪ್ರತ್ಯಕ್ಷದರ್ಶಿಗಳು ಹೇಳುತ್ತಿರುವುದನ್ನು ಖಚಿತಪಡಿಸುತ್ತವೆ. ವರದಿಯ ಪ್ರಕಾರ, ಇನ್ಸ್‌ಪೆಕ್ಟರ್ ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಬಾಲಕೃಷ್ಣನ್ ಮತ್ತು ರಘುಗಾನೇಶ್ ಮತ್ತು ಐವರು ‘ಪೊಲೀಸ್ ಸ್ವಯಂಸೇವಕರು’ ಸಿಬ್ಬಂದಿ ಸೇರಿದಂತೆ ಎಂಟು ಪೊಲೀಸರು ಜೂನ್ 19 ರ ರಾತ್ರಿ ಠಾಣೆಯಲ್ಲಿದ್ದ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ.

ಜಯರಾಜ್ ಮತ್ತು ಬೆನಿಕ್ಸ್ ಅವರ ಕುಟುಂಬ ಮತ್ತು ಸ್ನೇಹಿತರು ಜೂನ್ 20 ರಂದು ಆಸ್ಪತ್ರೆಯ ಒಳಗೆ ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕಚೇರಿಗೆ ಹೋಗುವ ಮೊದಲು ಅವರ ಬಟ್ಟೆಗಳು ರಕ್ತದಿಂದ ಒದ್ದೆಯಾದ ಕಾರಣಕ್ಕೆ ಅನೇಕ ಬಾರಿ ತಮ್ಮ ಶರ್ಟ್ ಮತ್ತು ಲುಂಗಿಯನ್ನು ಬದಲಾಯಿಸಬೇಕಾಗಿತ್ತು ಎಂದು ತಿಳಿಸಿದ್ದಾರೆ.

ಆದರೆ ಆಸ್ಪತ್ರೆಯ ದಾಖಲೆಯಲ್ಲಿ ಸೋರಿಕೆಯಾದ ಭಾಗವು ಆಶ್ಚರ್ಯಕರವಾಗಿದೆ, ರಕ್ತಸ್ರಾವದ ಬಗ್ಗೆ ಇದರಲ್ಲಿ ಯಾವುದೇ ಉಲ್ಲೇಖ ಇಲ್ಲ. ಕಾನೂನಿನ ಪ್ರಕಾರ ಈ ವೈದ್ಯಕೀಯ ತಪಾಸಣೆ ಸಂಪೂರ್ಣ ವಂಚನೆ ಮತ್ತು ಆಸ್ಪತ್ರೆಯಲ್ಲಿ ಇವರಿಬ್ಬರನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿಯೂ ಸಹ ಅನೇಕ ಪೊಲೀಸ್ ಸಿಬ್ಬಂದಿ ಇದ್ದರು ಮತ್ತು ಜಯರಾಜ್ ಮತ್ತು ಬೆನಿಕ್ಸ್ ಅವರು ಮ್ಯಾಜಿಸ್ಟ್ರೇಟ್‌ಗೆ ತಮ್ಮ ಗಾಯಗಳ ಬಗ್ಗೆ ಮಾತನಾಡದಂತೆ ನೋಡಿಕೊಂಡರು. ದೈಹಿಕ ತಪಾಸಣೆ ಮತ್ತು ಸ್ಥಿತಿಗತಿಯ ಬಗ್ಗೆ ಕೇಳದ ಕಾರಣಕ್ಕಾಗಿ ಹಲವಾರು ನ್ಯಾಯಶಾಸ್ತ್ರಜ್ಞರು ಮ್ಯಾಜಿಸ್ಟ್ರೇಟ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮ್ಯಾಜಿಸ್ಟ್ರೇಟ್ ಕಛೇರಿ ತಲುಪುವ ಮೊದಲು ಪೊಲೀಸರು ಕುಟುಂಬಕ್ಕೆ ಗಾಢ ಬಣ್ಣದ ಲುಂಗಿಗಳನ್ನು ತರಲು ಹೇಳಿದ್ದರು ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಇದೆಲ್ಲವೂ ಪೊಲೀಸರು ತಮ್ಮ ಹಲ್ಲೆಯನ್ನು ಮುಚ್ಚಿಕೊಳ್ಳಲು ಮಾಡಿದ ಪ್ರಯತ್ನ ಎಂದು ಸಂಬಂಧಿಕರು ದೂರಿದ್ದಾರೆ.

ತೂತುಕುಡಿ ಜಿಲ್ಲಾಡಳಿತ ನಿರ್ದಿಷ್ಟಪಡಿಸಿದ ಲಾಕ್‌ಡೌನ್ ಸಮಯವನ್ನು ಮೀರಿ ತಮ್ಮ ಅಂಗಡಿಯನ್ನು ತೆರೆದಿರುವ ಆರೋಪದ ಮೇಲೆ ಬೆನಿಕ್ಸ್ ಮತ್ತು ಜಯರಾಜ್ ಅವರನ್ನು ಜೂನ್ 19 ರಂದು ಸಾಥನ್‌ಕುಲಂ ಪೊಲೀಸರು ಬಂಧಿಸಿದ್ದರು. ಅವರನ್ನು ಪೊಲೀಸ್ ಠಾಣೆಯಲ್ಲಿ ಪೊಲೀಸರು ಹಿಂಸಿಸಿ ನಂತರ ಜೂನ್ 20 ರಂದು ಕೋವಿಲ್ಪಟ್ಟಿ ಉಪ ಜೈಲಿನಲ್ಲಿ ರಿಮಾಂಡ್ ಮಾಡಲಾಯಿತು. ಬೆನಿಕ್ಸ್‌ಗೆ ಜೂನ್ 22 ರಂದು ಎದೆನೋವು ಕಾಣಿಸಿಕೊಂಡು ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದರು. ಜಯರಾಜ್ ಮರುದಿನ ಬೆಳಿಗ್ಗೆ ಕೋವಿಲ್ಪಟ್ಟಿ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಪೊಲೀಸ್ ದೌರ್ಜನ್ಯದ ಘಟನೆಗಳನ್ನು ವಿರೋಧಿಸಿ ಜನರು ಮತ್ತು ರಾಜಕಾರಣಿಗಳು ತೀವ್ರ ರೀತಿಯಲ್ಲಿ ಖಂಡಿಸಿದ್ದಾರೆ. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ತೀವ್ರ ಪ್ರತಿಭಟನೆ ಕಂಡುಬಂದಿದೆ.


ಬಾಲಿವುಡ್ ಸೆಲೆಬ್ರಿಟಿಗಳೇ, ತಮಿಳುನಾಡಿನಲ್ಲಿ ಏನಾಯಿತು ಎಂದು ನೀವು ಕೇಳಿದ್ದೀರಾ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...