Homeಮುಖಪುಟತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನಂಕುಳಂನ ಪೊಲೀಸ್ ಲಾಕಪ್‌ನಲ್ಲಿ ಮೃತಪಟ್ಟ ಜಯರಾಜ್(50) ಹಾಗೂ ಅವರ ಮಗ ಬೆನಿಕ್ಸ್(31) ಪ್ರಕರಣದಲ್ಲಿ ಪೊಲೀಸರ ವಿರುದ್ದ ಹಲವಾರು ಆರೋಪಗಳನ್ನು ಮಾಡಲಾಗಿದೆ. ಅಷ್ಟೇ ಅಲ್ಲದೆ ಮ್ಯಾಜಿಸ್ಟ್ರೇಟ್ ಕೂಡಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾತುಗಳೂ ಕೇಳಿ ಬಂದಿವೆ.

ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಜೂನ್ 19 ಶುಕ್ರವಾರ ರಾತ್ರಿ ಜಯರಾಜ್ ಹಾಗೂ ಬೆನಿಕ್ಸ್ ಅವರು ತಮ್ಮ ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದಕ್ಕೆ ಸಾಥನಂಕುಳಂ ಪೊಲೀಸ್ ಠಾಣೆಯ ಪೊಲೀಸರೊಂದಿಗೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.

ಇದನ್ನೇ ಕಾರಣವಾಗಿಟ್ಟುಕೊಂಡ ಪೊಲೀಸರು ಜಯರಾಜ್ ಅವರನ್ನು ಠಾಣೆ ಕರೆದುಕೊಂಡು ಹೋಗಿದ್ದಾರೆ. ತನ್ನ ತಂದೆಯನ್ನು ಬಂಧಿಸಿದ್ದನ್ನು ಕೇಳಲು ಹೋದ ಬೆನಿಕ್ಸ್ ಅವರನ್ನೂ ವಿಚಾರಣೆಗಾಗಿ ಬಂದಿಸಿದ ಪೊಲೀಸರು, ಮೂರು ದಿನಗಳ ನಂತರ ಪೊಲೀಸ್ ಠಾಣೆಗಿಂತ 100 ಕಿ.ಮೀ. ದೂರದ ನಗರವಾದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಿಕರಿಗೆ ತಿಳಿಸಿದ್ದಾರೆ.

ಪೊಲೀಸರು ತಮ್ಮ ವರದಿಯಲ್ಲಿ ಶನಿವಾರದಂದು ಇಬ್ಬರನ್ನೂ ವೈದ್ಯಕೀಯ ತಪಾಸಣೆ ಬಳಿಕ ಕೋವಿಲ್‌ಪಟ್ಟಿ ಸಬ್‌ಜೈಲ್‌ಗೆ ಕಳುಹಿಸಲಾಗಿದ್ದು, ಅಂದು ಸಂಜೆ ಬೆನಿಕ್ಸ್‌ಗೆ ಎದೆನೋವು ಕಾಣಿಸಿಕೊಂಡಿದ್ದು, ಜಯರಾಜ್ ಗೆ ತೀವ್ರ ಜ್ವರ ಬಂದಿತ್ತು. ಇದಕ್ಕಾಗಿ ಇಬ್ಬರನ್ನೂ ಕೋವಿಲ್‌ಪಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಸೋಮವಾರ ಸಂಜೆ ಬೆನಿಕ್ಸ್ ಮೃತಪಟ್ಟರೆ, ಜಯರಾಜ್ ಮಂಗಳವಾರ ಬೆಳಗ್ಗೆ ಉಸಿರಾಟದ ತೊಂದರೆಯಿಂದ ಅಸುನೀಗಿದರು ಎಂದು ಉಲ್ಲೇಖಿಸಿದ್ದಾರೆ.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತೆ ಆಕ್ರೋಶ ವ್ಯಕ್ತವಾಗಿದ್ದು ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ಕತೆಗಳು ಒಂದೊಂದಾಗಿ ಹೊರಬರುತ್ತಿದೆ. ಜಯರಾಜ್ ಅವರ ಮಗಳು ಪರ್ಸಿ ಜೂನ್ 24 ರಂದು ಮಾಧ್ಯಮಗಳ ಜೊತೆ ಮಾತನಾಡಿತ್ತಾ, “ಪೊಲೀಸರು ನನ್ನ ತಂದೆ ಹಾಗೂ ಸಹೋದರನಿಗೆ ಸುಮಾರು ಎರಡು ಗಂಟೆಯ ಕಾಲ ಬಾಗಿಲು ಹಾಕಿ ಥಳಿಸಿದ್ದಾರೆ. ನನ್ನ ಸಹೋದರನ ಸ್ನೇಹಿತರು ಜಾಮೀನಿಗಾಗಿ ವಕೀಲರೊಂದಿಗೆ ಹೋಗಿ ಠಾಣೆಯ ಮುಂದೆ ನಿಂತರು ಆದರೆ ಪೊಲೀಸರು ಅವರನ್ನು ಒಳಗೆ ಬಿಡಲಿಲ್ಲ. ಅವರು ನನ್ನ ಸಹೋದರ ಮತ್ತು ತಂದೆಯ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇವರಿಬ್ಬಬರಿಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ ವಕೀಲ ಮಣಿಮಾರನ್ “ತಂದೆ ಮತ್ತು ಮಗ ತುಂಬಾ ರಕ್ತ ಸಿಕ್ತವಾಗಿದ್ದರು, ಇಬ್ಬರೂ ರಕ್ತದಲ್ಲಿ ತೊಯ್ದಿದ್ದರಿಂದ ಅವರು ಆರು ಲುಂಗಿಗಳನ್ನು ಬದಲಾಯಿಸಬೇಕಾಗಿತ್ತು” ಎಂದು ಹೇಳಿದ್ದಾರೆ.

ಜೂನ್ 20 ರಂದು ಅವರು ಮೊದಲು ಬೆನಿಕ್ಸ್ ಮತ್ತು ಜಯರಾಜ್ ಅವರನ್ನು ವೈದ್ಯಕೀಯ ಫಿಟ್ನೆಸ್ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಇಬ್ಬರನ್ನೂ ಸಾಥಂಕುಲಂ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ. ಸರವಣನ್ ಅವರ ಬಳಿಗೆ ಕರೆದೊಯ್ದರು ಎಂದು ಪೊಲೀಸರು ಹೇಳುತ್ತಾರೆ.

ಆದರೆ ಅವರಿಬ್ಬರ ಪರಿಸ್ಥಿತಿಯನ್ನು ನೋಡಿಯೂ ಯಾಂತ್ರಿಕವಾಗಿ ರಿಮಾಂಡ್ ಆದೇಶಗಳನ್ನು ಜಾರಿಗೊಳಿಸಿದ ಮ್ಯಾಜಿಸ್ಟ್ರೇಟ್ ವಿರುದ್ದ ಕೂಡಾ ಹಲವರು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಪಾತ್ರವನ್ನೂ ತನಿಖೆ ಮಾಡಬೇಕು ಎಂದು ಆಗ್ರಹಗಳು ಕೇಳಿ ಬಂದಿದೆ.

ಘಟನೆಯನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೇಳುತ್ತಿದ್ದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.


ಓದಿ: ಚೀನಾ ಪಡೆಗಳನ್ನು ಹೇಗೆ ಮತ್ತು ಯಾವಾಗ ಹೊರಹಾಕಲಾಯಿತು ಬಹಿರಂಗಪಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...