Homeಮುಖಪುಟತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನಂಕುಳಂನ ಪೊಲೀಸ್ ಲಾಕಪ್‌ನಲ್ಲಿ ಮೃತಪಟ್ಟ ಜಯರಾಜ್(50) ಹಾಗೂ ಅವರ ಮಗ ಬೆನಿಕ್ಸ್(31) ಪ್ರಕರಣದಲ್ಲಿ ಪೊಲೀಸರ ವಿರುದ್ದ ಹಲವಾರು ಆರೋಪಗಳನ್ನು ಮಾಡಲಾಗಿದೆ. ಅಷ್ಟೇ ಅಲ್ಲದೆ ಮ್ಯಾಜಿಸ್ಟ್ರೇಟ್ ಕೂಡಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾತುಗಳೂ ಕೇಳಿ ಬಂದಿವೆ.

ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಜೂನ್ 19 ಶುಕ್ರವಾರ ರಾತ್ರಿ ಜಯರಾಜ್ ಹಾಗೂ ಬೆನಿಕ್ಸ್ ಅವರು ತಮ್ಮ ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದಕ್ಕೆ ಸಾಥನಂಕುಳಂ ಪೊಲೀಸ್ ಠಾಣೆಯ ಪೊಲೀಸರೊಂದಿಗೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.

ಇದನ್ನೇ ಕಾರಣವಾಗಿಟ್ಟುಕೊಂಡ ಪೊಲೀಸರು ಜಯರಾಜ್ ಅವರನ್ನು ಠಾಣೆ ಕರೆದುಕೊಂಡು ಹೋಗಿದ್ದಾರೆ. ತನ್ನ ತಂದೆಯನ್ನು ಬಂಧಿಸಿದ್ದನ್ನು ಕೇಳಲು ಹೋದ ಬೆನಿಕ್ಸ್ ಅವರನ್ನೂ ವಿಚಾರಣೆಗಾಗಿ ಬಂದಿಸಿದ ಪೊಲೀಸರು, ಮೂರು ದಿನಗಳ ನಂತರ ಪೊಲೀಸ್ ಠಾಣೆಗಿಂತ 100 ಕಿ.ಮೀ. ದೂರದ ನಗರವಾದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಿಕರಿಗೆ ತಿಳಿಸಿದ್ದಾರೆ.

ಪೊಲೀಸರು ತಮ್ಮ ವರದಿಯಲ್ಲಿ ಶನಿವಾರದಂದು ಇಬ್ಬರನ್ನೂ ವೈದ್ಯಕೀಯ ತಪಾಸಣೆ ಬಳಿಕ ಕೋವಿಲ್‌ಪಟ್ಟಿ ಸಬ್‌ಜೈಲ್‌ಗೆ ಕಳುಹಿಸಲಾಗಿದ್ದು, ಅಂದು ಸಂಜೆ ಬೆನಿಕ್ಸ್‌ಗೆ ಎದೆನೋವು ಕಾಣಿಸಿಕೊಂಡಿದ್ದು, ಜಯರಾಜ್ ಗೆ ತೀವ್ರ ಜ್ವರ ಬಂದಿತ್ತು. ಇದಕ್ಕಾಗಿ ಇಬ್ಬರನ್ನೂ ಕೋವಿಲ್‌ಪಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಸೋಮವಾರ ಸಂಜೆ ಬೆನಿಕ್ಸ್ ಮೃತಪಟ್ಟರೆ, ಜಯರಾಜ್ ಮಂಗಳವಾರ ಬೆಳಗ್ಗೆ ಉಸಿರಾಟದ ತೊಂದರೆಯಿಂದ ಅಸುನೀಗಿದರು ಎಂದು ಉಲ್ಲೇಖಿಸಿದ್ದಾರೆ.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತೆ ಆಕ್ರೋಶ ವ್ಯಕ್ತವಾಗಿದ್ದು ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ಕತೆಗಳು ಒಂದೊಂದಾಗಿ ಹೊರಬರುತ್ತಿದೆ. ಜಯರಾಜ್ ಅವರ ಮಗಳು ಪರ್ಸಿ ಜೂನ್ 24 ರಂದು ಮಾಧ್ಯಮಗಳ ಜೊತೆ ಮಾತನಾಡಿತ್ತಾ, “ಪೊಲೀಸರು ನನ್ನ ತಂದೆ ಹಾಗೂ ಸಹೋದರನಿಗೆ ಸುಮಾರು ಎರಡು ಗಂಟೆಯ ಕಾಲ ಬಾಗಿಲು ಹಾಕಿ ಥಳಿಸಿದ್ದಾರೆ. ನನ್ನ ಸಹೋದರನ ಸ್ನೇಹಿತರು ಜಾಮೀನಿಗಾಗಿ ವಕೀಲರೊಂದಿಗೆ ಹೋಗಿ ಠಾಣೆಯ ಮುಂದೆ ನಿಂತರು ಆದರೆ ಪೊಲೀಸರು ಅವರನ್ನು ಒಳಗೆ ಬಿಡಲಿಲ್ಲ. ಅವರು ನನ್ನ ಸಹೋದರ ಮತ್ತು ತಂದೆಯ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇವರಿಬ್ಬಬರಿಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ ವಕೀಲ ಮಣಿಮಾರನ್ “ತಂದೆ ಮತ್ತು ಮಗ ತುಂಬಾ ರಕ್ತ ಸಿಕ್ತವಾಗಿದ್ದರು, ಇಬ್ಬರೂ ರಕ್ತದಲ್ಲಿ ತೊಯ್ದಿದ್ದರಿಂದ ಅವರು ಆರು ಲುಂಗಿಗಳನ್ನು ಬದಲಾಯಿಸಬೇಕಾಗಿತ್ತು” ಎಂದು ಹೇಳಿದ್ದಾರೆ.

ಜೂನ್ 20 ರಂದು ಅವರು ಮೊದಲು ಬೆನಿಕ್ಸ್ ಮತ್ತು ಜಯರಾಜ್ ಅವರನ್ನು ವೈದ್ಯಕೀಯ ಫಿಟ್ನೆಸ್ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಇಬ್ಬರನ್ನೂ ಸಾಥಂಕುಲಂ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ. ಸರವಣನ್ ಅವರ ಬಳಿಗೆ ಕರೆದೊಯ್ದರು ಎಂದು ಪೊಲೀಸರು ಹೇಳುತ್ತಾರೆ.

ಆದರೆ ಅವರಿಬ್ಬರ ಪರಿಸ್ಥಿತಿಯನ್ನು ನೋಡಿಯೂ ಯಾಂತ್ರಿಕವಾಗಿ ರಿಮಾಂಡ್ ಆದೇಶಗಳನ್ನು ಜಾರಿಗೊಳಿಸಿದ ಮ್ಯಾಜಿಸ್ಟ್ರೇಟ್ ವಿರುದ್ದ ಕೂಡಾ ಹಲವರು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಪಾತ್ರವನ್ನೂ ತನಿಖೆ ಮಾಡಬೇಕು ಎಂದು ಆಗ್ರಹಗಳು ಕೇಳಿ ಬಂದಿದೆ.

ಘಟನೆಯನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೇಳುತ್ತಿದ್ದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.


ಓದಿ: ಚೀನಾ ಪಡೆಗಳನ್ನು ಹೇಗೆ ಮತ್ತು ಯಾವಾಗ ಹೊರಹಾಕಲಾಯಿತು ಬಹಿರಂಗಪಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...