Homeಮುಖಪುಟತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನಂಕುಳಂನ ಪೊಲೀಸ್ ಲಾಕಪ್‌ನಲ್ಲಿ ಮೃತಪಟ್ಟ ಜಯರಾಜ್(50) ಹಾಗೂ ಅವರ ಮಗ ಬೆನಿಕ್ಸ್(31) ಪ್ರಕರಣದಲ್ಲಿ ಪೊಲೀಸರ ವಿರುದ್ದ ಹಲವಾರು ಆರೋಪಗಳನ್ನು ಮಾಡಲಾಗಿದೆ. ಅಷ್ಟೇ ಅಲ್ಲದೆ ಮ್ಯಾಜಿಸ್ಟ್ರೇಟ್ ಕೂಡಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾತುಗಳೂ ಕೇಳಿ ಬಂದಿವೆ.

ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಜೂನ್ 19 ಶುಕ್ರವಾರ ರಾತ್ರಿ ಜಯರಾಜ್ ಹಾಗೂ ಬೆನಿಕ್ಸ್ ಅವರು ತಮ್ಮ ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದಕ್ಕೆ ಸಾಥನಂಕುಳಂ ಪೊಲೀಸ್ ಠಾಣೆಯ ಪೊಲೀಸರೊಂದಿಗೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.

ಇದನ್ನೇ ಕಾರಣವಾಗಿಟ್ಟುಕೊಂಡ ಪೊಲೀಸರು ಜಯರಾಜ್ ಅವರನ್ನು ಠಾಣೆ ಕರೆದುಕೊಂಡು ಹೋಗಿದ್ದಾರೆ. ತನ್ನ ತಂದೆಯನ್ನು ಬಂಧಿಸಿದ್ದನ್ನು ಕೇಳಲು ಹೋದ ಬೆನಿಕ್ಸ್ ಅವರನ್ನೂ ವಿಚಾರಣೆಗಾಗಿ ಬಂದಿಸಿದ ಪೊಲೀಸರು, ಮೂರು ದಿನಗಳ ನಂತರ ಪೊಲೀಸ್ ಠಾಣೆಗಿಂತ 100 ಕಿ.ಮೀ. ದೂರದ ನಗರವಾದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಿಕರಿಗೆ ತಿಳಿಸಿದ್ದಾರೆ.

ಪೊಲೀಸರು ತಮ್ಮ ವರದಿಯಲ್ಲಿ ಶನಿವಾರದಂದು ಇಬ್ಬರನ್ನೂ ವೈದ್ಯಕೀಯ ತಪಾಸಣೆ ಬಳಿಕ ಕೋವಿಲ್‌ಪಟ್ಟಿ ಸಬ್‌ಜೈಲ್‌ಗೆ ಕಳುಹಿಸಲಾಗಿದ್ದು, ಅಂದು ಸಂಜೆ ಬೆನಿಕ್ಸ್‌ಗೆ ಎದೆನೋವು ಕಾಣಿಸಿಕೊಂಡಿದ್ದು, ಜಯರಾಜ್ ಗೆ ತೀವ್ರ ಜ್ವರ ಬಂದಿತ್ತು. ಇದಕ್ಕಾಗಿ ಇಬ್ಬರನ್ನೂ ಕೋವಿಲ್‌ಪಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಸೋಮವಾರ ಸಂಜೆ ಬೆನಿಕ್ಸ್ ಮೃತಪಟ್ಟರೆ, ಜಯರಾಜ್ ಮಂಗಳವಾರ ಬೆಳಗ್ಗೆ ಉಸಿರಾಟದ ತೊಂದರೆಯಿಂದ ಅಸುನೀಗಿದರು ಎಂದು ಉಲ್ಲೇಖಿಸಿದ್ದಾರೆ.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತೆ ಆಕ್ರೋಶ ವ್ಯಕ್ತವಾಗಿದ್ದು ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ಕತೆಗಳು ಒಂದೊಂದಾಗಿ ಹೊರಬರುತ್ತಿದೆ. ಜಯರಾಜ್ ಅವರ ಮಗಳು ಪರ್ಸಿ ಜೂನ್ 24 ರಂದು ಮಾಧ್ಯಮಗಳ ಜೊತೆ ಮಾತನಾಡಿತ್ತಾ, “ಪೊಲೀಸರು ನನ್ನ ತಂದೆ ಹಾಗೂ ಸಹೋದರನಿಗೆ ಸುಮಾರು ಎರಡು ಗಂಟೆಯ ಕಾಲ ಬಾಗಿಲು ಹಾಕಿ ಥಳಿಸಿದ್ದಾರೆ. ನನ್ನ ಸಹೋದರನ ಸ್ನೇಹಿತರು ಜಾಮೀನಿಗಾಗಿ ವಕೀಲರೊಂದಿಗೆ ಹೋಗಿ ಠಾಣೆಯ ಮುಂದೆ ನಿಂತರು ಆದರೆ ಪೊಲೀಸರು ಅವರನ್ನು ಒಳಗೆ ಬಿಡಲಿಲ್ಲ. ಅವರು ನನ್ನ ಸಹೋದರ ಮತ್ತು ತಂದೆಯ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇವರಿಬ್ಬಬರಿಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ ವಕೀಲ ಮಣಿಮಾರನ್ “ತಂದೆ ಮತ್ತು ಮಗ ತುಂಬಾ ರಕ್ತ ಸಿಕ್ತವಾಗಿದ್ದರು, ಇಬ್ಬರೂ ರಕ್ತದಲ್ಲಿ ತೊಯ್ದಿದ್ದರಿಂದ ಅವರು ಆರು ಲುಂಗಿಗಳನ್ನು ಬದಲಾಯಿಸಬೇಕಾಗಿತ್ತು” ಎಂದು ಹೇಳಿದ್ದಾರೆ.

ಜೂನ್ 20 ರಂದು ಅವರು ಮೊದಲು ಬೆನಿಕ್ಸ್ ಮತ್ತು ಜಯರಾಜ್ ಅವರನ್ನು ವೈದ್ಯಕೀಯ ಫಿಟ್ನೆಸ್ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಇಬ್ಬರನ್ನೂ ಸಾಥಂಕುಲಂ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ. ಸರವಣನ್ ಅವರ ಬಳಿಗೆ ಕರೆದೊಯ್ದರು ಎಂದು ಪೊಲೀಸರು ಹೇಳುತ್ತಾರೆ.

ಆದರೆ ಅವರಿಬ್ಬರ ಪರಿಸ್ಥಿತಿಯನ್ನು ನೋಡಿಯೂ ಯಾಂತ್ರಿಕವಾಗಿ ರಿಮಾಂಡ್ ಆದೇಶಗಳನ್ನು ಜಾರಿಗೊಳಿಸಿದ ಮ್ಯಾಜಿಸ್ಟ್ರೇಟ್ ವಿರುದ್ದ ಕೂಡಾ ಹಲವರು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಪಾತ್ರವನ್ನೂ ತನಿಖೆ ಮಾಡಬೇಕು ಎಂದು ಆಗ್ರಹಗಳು ಕೇಳಿ ಬಂದಿದೆ.

ಘಟನೆಯನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೇಳುತ್ತಿದ್ದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.


ಓದಿ: ಚೀನಾ ಪಡೆಗಳನ್ನು ಹೇಗೆ ಮತ್ತು ಯಾವಾಗ ಹೊರಹಾಕಲಾಯಿತು ಬಹಿರಂಗಪಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...