Homeಮುಖಪುಟತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

ತಮಿಳುನಾಡು ಲಾಕಪ್ ಡೆತ್: ಪೊಲೀಸ್ ಹಾಗೂ ಮ್ಯಾಜಿಸ್ಟ್ರೇಟ್ ವಿರುದ್ದ ಹಲವಾರು ಆರೋಪ

- Advertisement -
- Advertisement -

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥನಂಕುಳಂನ ಪೊಲೀಸ್ ಲಾಕಪ್‌ನಲ್ಲಿ ಮೃತಪಟ್ಟ ಜಯರಾಜ್(50) ಹಾಗೂ ಅವರ ಮಗ ಬೆನಿಕ್ಸ್(31) ಪ್ರಕರಣದಲ್ಲಿ ಪೊಲೀಸರ ವಿರುದ್ದ ಹಲವಾರು ಆರೋಪಗಳನ್ನು ಮಾಡಲಾಗಿದೆ. ಅಷ್ಟೇ ಅಲ್ಲದೆ ಮ್ಯಾಜಿಸ್ಟ್ರೇಟ್ ಕೂಡಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾತುಗಳೂ ಕೇಳಿ ಬಂದಿವೆ.

ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಜೂನ್ 19 ಶುಕ್ರವಾರ ರಾತ್ರಿ ಜಯರಾಜ್ ಹಾಗೂ ಬೆನಿಕ್ಸ್ ಅವರು ತಮ್ಮ ಮೊಬೈಲ್ ಅಂಗಡಿಯನ್ನು ಸಮಯಮೀರಿ ತೆರೆದಿದ್ದಕ್ಕೆ ಸಾಥನಂಕುಳಂ ಪೊಲೀಸ್ ಠಾಣೆಯ ಪೊಲೀಸರೊಂದಿಗೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ.

ಇದನ್ನೇ ಕಾರಣವಾಗಿಟ್ಟುಕೊಂಡ ಪೊಲೀಸರು ಜಯರಾಜ್ ಅವರನ್ನು ಠಾಣೆ ಕರೆದುಕೊಂಡು ಹೋಗಿದ್ದಾರೆ. ತನ್ನ ತಂದೆಯನ್ನು ಬಂಧಿಸಿದ್ದನ್ನು ಕೇಳಲು ಹೋದ ಬೆನಿಕ್ಸ್ ಅವರನ್ನೂ ವಿಚಾರಣೆಗಾಗಿ ಬಂದಿಸಿದ ಪೊಲೀಸರು, ಮೂರು ದಿನಗಳ ನಂತರ ಪೊಲೀಸ್ ಠಾಣೆಗಿಂತ 100 ಕಿ.ಮೀ. ದೂರದ ನಗರವಾದ ಕೋವಿಲ್ಪಟ್ಟಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಿಕರಿಗೆ ತಿಳಿಸಿದ್ದಾರೆ.

ಪೊಲೀಸರು ತಮ್ಮ ವರದಿಯಲ್ಲಿ ಶನಿವಾರದಂದು ಇಬ್ಬರನ್ನೂ ವೈದ್ಯಕೀಯ ತಪಾಸಣೆ ಬಳಿಕ ಕೋವಿಲ್‌ಪಟ್ಟಿ ಸಬ್‌ಜೈಲ್‌ಗೆ ಕಳುಹಿಸಲಾಗಿದ್ದು, ಅಂದು ಸಂಜೆ ಬೆನಿಕ್ಸ್‌ಗೆ ಎದೆನೋವು ಕಾಣಿಸಿಕೊಂಡಿದ್ದು, ಜಯರಾಜ್ ಗೆ ತೀವ್ರ ಜ್ವರ ಬಂದಿತ್ತು. ಇದಕ್ಕಾಗಿ ಇಬ್ಬರನ್ನೂ ಕೋವಿಲ್‌ಪಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದೇವೆ. ಸೋಮವಾರ ಸಂಜೆ ಬೆನಿಕ್ಸ್ ಮೃತಪಟ್ಟರೆ, ಜಯರಾಜ್ ಮಂಗಳವಾರ ಬೆಳಗ್ಗೆ ಉಸಿರಾಟದ ತೊಂದರೆಯಿಂದ ಅಸುನೀಗಿದರು ಎಂದು ಉಲ್ಲೇಖಿಸಿದ್ದಾರೆ.

ಆದರೆ ಜಯರಾಜ್ ಪತ್ನಿ ಸೆಲ್ವಮಣಿ ಪೊಲೀಸರ ದೌರ್ಜನ್ಯದಿಂದ ತನ್ನ ಪತಿ ಹಾಗೂ ಮಗ ಸಾವಿಗೀಡಾಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಸಾವಿನ ಬಗ್ಗೆ ತಮಿಳುನಾಡಿನಾದ್ಯಂತೆ ಆಕ್ರೋಶ ವ್ಯಕ್ತವಾಗಿದ್ದು ಮದ್ರಾಸ್ ಹೈಕೋರ್ಟಿನ ಮಧುರೈ ನ್ಯಾಯಪೀಠ ಬುಧವಾರ ಸ್ವಯಂಪ್ರೇರಿತವಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ಕತೆಗಳು ಒಂದೊಂದಾಗಿ ಹೊರಬರುತ್ತಿದೆ. ಜಯರಾಜ್ ಅವರ ಮಗಳು ಪರ್ಸಿ ಜೂನ್ 24 ರಂದು ಮಾಧ್ಯಮಗಳ ಜೊತೆ ಮಾತನಾಡಿತ್ತಾ, “ಪೊಲೀಸರು ನನ್ನ ತಂದೆ ಹಾಗೂ ಸಹೋದರನಿಗೆ ಸುಮಾರು ಎರಡು ಗಂಟೆಯ ಕಾಲ ಬಾಗಿಲು ಹಾಕಿ ಥಳಿಸಿದ್ದಾರೆ. ನನ್ನ ಸಹೋದರನ ಸ್ನೇಹಿತರು ಜಾಮೀನಿಗಾಗಿ ವಕೀಲರೊಂದಿಗೆ ಹೋಗಿ ಠಾಣೆಯ ಮುಂದೆ ನಿಂತರು ಆದರೆ ಪೊಲೀಸರು ಅವರನ್ನು ಒಳಗೆ ಬಿಡಲಿಲ್ಲ. ಅವರು ನನ್ನ ಸಹೋದರ ಮತ್ತು ತಂದೆಯ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇವರಿಬ್ಬಬರಿಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ ವಕೀಲ ಮಣಿಮಾರನ್ “ತಂದೆ ಮತ್ತು ಮಗ ತುಂಬಾ ರಕ್ತ ಸಿಕ್ತವಾಗಿದ್ದರು, ಇಬ್ಬರೂ ರಕ್ತದಲ್ಲಿ ತೊಯ್ದಿದ್ದರಿಂದ ಅವರು ಆರು ಲುಂಗಿಗಳನ್ನು ಬದಲಾಯಿಸಬೇಕಾಗಿತ್ತು” ಎಂದು ಹೇಳಿದ್ದಾರೆ.

ಜೂನ್ 20 ರಂದು ಅವರು ಮೊದಲು ಬೆನಿಕ್ಸ್ ಮತ್ತು ಜಯರಾಜ್ ಅವರನ್ನು ವೈದ್ಯಕೀಯ ಫಿಟ್ನೆಸ್ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಇಬ್ಬರನ್ನೂ ಸಾಥಂಕುಲಂ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಡಿ. ಸರವಣನ್ ಅವರ ಬಳಿಗೆ ಕರೆದೊಯ್ದರು ಎಂದು ಪೊಲೀಸರು ಹೇಳುತ್ತಾರೆ.

ಆದರೆ ಅವರಿಬ್ಬರ ಪರಿಸ್ಥಿತಿಯನ್ನು ನೋಡಿಯೂ ಯಾಂತ್ರಿಕವಾಗಿ ರಿಮಾಂಡ್ ಆದೇಶಗಳನ್ನು ಜಾರಿಗೊಳಿಸಿದ ಮ್ಯಾಜಿಸ್ಟ್ರೇಟ್ ವಿರುದ್ದ ಕೂಡಾ ಹಲವರು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಪಾತ್ರವನ್ನೂ ತನಿಖೆ ಮಾಡಬೇಕು ಎಂದು ಆಗ್ರಹಗಳು ಕೇಳಿ ಬಂದಿದೆ.

ಘಟನೆಯನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೇಳುತ್ತಿದ್ದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.


ಓದಿ: ಚೀನಾ ಪಡೆಗಳನ್ನು ಹೇಗೆ ಮತ್ತು ಯಾವಾಗ ಹೊರಹಾಕಲಾಯಿತು ಬಹಿರಂಗಪಡಿಸಿ: ಕೇಂದ್ರಕ್ಕೆ ಸೋನಿಯಾ ಗಾಂಧಿ ಒತ್ತಾಯ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...