Homeಮುಖಪುಟತಮಿಳುನಾಡು| ದೇವಸ್ಥಾನದಲ್ಲಿ ಸಾವರ್ಕರ್ ಪರ ಘೋಷಣೆ ಕೂಗಿದ ಗುಂಪಿನ ವಿರುದ್ಧ ಕೆರಳಿದ ಧಾರ್ಮಿಕ ದತ್ತಿ ಸಚಿವ

ತಮಿಳುನಾಡು| ದೇವಸ್ಥಾನದಲ್ಲಿ ಸಾವರ್ಕರ್ ಪರ ಘೋಷಣೆ ಕೂಗಿದ ಗುಂಪಿನ ವಿರುದ್ಧ ಕೆರಳಿದ ಧಾರ್ಮಿಕ ದತ್ತಿ ಸಚಿವ

- Advertisement -
- Advertisement -

ಕನ್ಯಾಕುಮಾರಿಯಲ್ಲಿ ನಡೆದ ದೇವಸ್ಥಾನದ ಉತ್ಸವದಲ್ಲಿ ಗುಂಪೊಂದು ವಿನಾಯಕ ದಾಮೋದರ್ ಸಾವರ್ಕರ್ ಅವರ ಪರ ಘೋಷಣೆ ಕೂಗಿದ್ದು, ಅವರ ಮೇಲೆ ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಸಚಿವ ಶೇಖರ್ ಬಾಬು ಅವರು ಕೆರಳಿದ್ದಾರೆ.

ಡಿಸೆಂಬರ್ 25 ರಂದು ಸುಚೀಂದ್ರಂನ ತಾನುಮಲಯ ಸ್ವಾಮಿ ದೇವಸ್ಥಾನದಲ್ಲಿ ಪ್ರಾರಂಭವಾದ ಮಾರ್ಗಜಿ ಪೆರುಂತಿರುವಿಳ ಉತ್ಸವದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ, ಅಲ್ಲಿ ದೇವಾಲಯದ ವಿಗ್ರಹಗಳನ್ನು ಸಾಂಪ್ರದಾಯಿಕವಾಗಿ ವಿವಿಧ ರಥಗಳಲ್ಲಿ ಹೊರಗೆ ಕರೆದೊಯ್ಯಲಾಗುತ್ತದೆ. ಶುಕ್ರವಾರ, ತಿರು ಥೇರೋಟ್ಟಂ (ರಥ ಮೆರವಣಿಗೆ) ಸಮಯದಲ್ಲಿ, ಶೇಖರ್ ಬಾಬು ಸಮಾರಂಭದಲ್ಲಿ ಭಾಗವಹಿಸಿ ರಥವನ್ನು ಎಳೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮೆರವಣಿಗೆ ಪ್ರಾರಂಭವಾಗುತ್ತಿದ್ದಂತೆ, ಜನರ ಗುಂಪೊಂದು ಭಾರತ್ ಮಾತಾ ಕಿ ಜೈ ಜೊತೆಗೆ ಸಾವರ್ಕರ್ ಅವರ ಪರ ಘೋಷಣೆ ಕೂಗಲು ಪ್ರಾರಂಭಿಸಿತು. ಇದರಿಂದ ಅಸಮಾಧಾನಗೊಂಡ ಸಚಿವರು, ಗುಂಪಿಗೆ ತಾಕೀತು ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿರೋಧ ಪಕ್ಷವಾದ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಸಚಿವರ ಈ ವರ್ತನೆಯನ್ನು ಖಂಡಿಸಿದೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪಕ್ಷವು, “ಧರ್ಮವನ್ನು ಉತ್ತೇಜಿಸಬೇಕಾದ ಇಲಾಖೆಯ ಸಚಿವರು ‘ಅಸಭ್ಯವಾಗಿ’ ವರ್ತಿಸುವುದು ಅಸಭ್ಯತೆಯ ಪರಮಾವಧಿ” ಎಂದು ಹೇಳಿದೆ.

ಭಾರತೀಯ ಜನತಾ ಪಕ್ಷದ ನಾಯಕ ವಿನೋಜ್ ಪಿ ಸೆಲ್ವಂ ಕೂಡ ಸಚಿವರನ್ನು ಟೀಕಿಸಿ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು. ಡಿಎಂಕೆ ಸರ್ಕಾರದ ಸಚಿವರು ಭಕ್ತರನ್ನು ಅವಮಾನಿಸುತ್ತಿದ್ದಾರೆ. ಸಾರ್ವಜನಿಕರನ್ನು ಬೆದರಿಸುವುದು ಪಕ್ಷದ ರಾಜಕೀಯವಾಗಿದೆ ಎಂದು ಅವರು ಹೇಳಿದ್ದಾರೆ.

ವಿವಾದಕ್ಕೆ ಪ್ರತಿಕ್ರಿಯಿಸಿದ ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವ ಮನೋ ತಂಗರಾಜ್, ಈ ವಿಷಯವನ್ನು ಭಾರತೀಯ ಜನತಾ ಪಕ್ಷ ಮತ್ತು ಕೆಲವು ಧಾರ್ಮಿಕ ಗುಂಪುಗಳು ಉದ್ದೇಶಪೂರ್ವಕವಾಗಿ ಸೃಷ್ಟಿಸಿವೆ ಎಂದು ಹೇಳಿದರು. ರಥಯಾತ್ರೆ ಪ್ರಾರಂಭವಾಗುವ ಸ್ವಲ್ಪ ಮೊದಲು, ಈ ಗುಂಪುಗಳ ಸದಸ್ಯರು ಸಾವರ್ಕರ್ ಅವರನ್ನು ಹೊಗಳುವ ಘೋಷಣೆಗಳನ್ನು ಕೂಗಿದರು, ಇದು ದೇವಾಲಯದಲ್ಲಿ ಭಕ್ತರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಅವರು ಹೇಳಿದರು.

ಮಹಾತ್ಮ ಗಾಂಧಿಯವರ ಹತ್ಯೆಯಲ್ಲಿ ಸಾವರ್ಕರ್ ಅವರನ್ನು ಆರೋಪಿ ಎಂದು ಮನೋ ತಂಗರಾಜ್ ಹೇಳಿದ್ದಾರೆ. ತಾನುಮಲಯ ಸ್ವಾಮಿ ದೇವಾಲಯದೊಳಗೆ ಅಂತಹ ಘೋಷಣೆಗಳನ್ನು ಕೂಗುವ ಪ್ರಸ್ತುತತೆಯನ್ನು ಪ್ರಶ್ನಿಸಿದ್ದಾರೆ. ಬಿಜೆಪಿ ಮತ್ತು ಅದರ ಅಂಗಸಂಸ್ಥೆ ಧಾರ್ಮಿಕ ಸಂಘಟನೆಗಳು ದೇವಾಲಯಗಳಿಗೆ ಪ್ರವೇಶಿಸಿ ತಪ್ಪು ಮಾಹಿತಿ ಹರಡಲು ಪ್ರಯತ್ನಿಸುತ್ತಿವೆ ಎಂದು ಅವರು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...