Homeಮುಖಪುಟಬಿಜೆಪಿ ನಾಯಕ ಅಣ್ಣಾಮಲೈಯಿಂದ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ಸಚಿವರ ಮಗ

ಬಿಜೆಪಿ ನಾಯಕ ಅಣ್ಣಾಮಲೈಯಿಂದ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ ತಮಿಳುನಾಡು ಸಚಿವರ ಮಗ

- Advertisement -
- Advertisement -

ತಮಿಳುನಾಡಿನ ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಮಗ ಸೂರ್ಯ ರಾಜ ಬಾಲು ಅವರು, 51ನೇ ರಾಜ್ಯ ಶೂಟಿಂಗ್ ಕ್ರೀಡಾಕೂಟದಲ್ಲಿ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ ಕುತ್ತಿಗೆಗೆ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ್ದು, ಪದಕವನ್ನು ಕೈಯಲ್ಲಿ ಸ್ವೀಕರಿಸಿದ್ದಾರೆ.

ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಣ್ಣಾಮಲೈ ವಿಜೇತರ ಕತ್ತಿಗೆ ಪದಕ ಹಾಕುತ್ತಿದ್ದರು. ಆದರೆ, ಸೂರ್ಯ ಅವರು ಕತ್ತಿಗೆ ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿದೆ.

ಎರಡು ವಾರಗಳ ಹಿಂದೆ ಇದೇ ರೀತಿಯ ಘಟನೆ ತಿರುನಲ್ವೇಲಿಯಲ್ಲಿ ನಡೆದಿತ್ತು. ಅಲ್ಲಿನ ಮನೋನ್ಮಣಿಯಂ ಸುಂದರನಾರ್ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವದಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿ ಜೀನ್ ಜೋಸೆಫ್ ಅವರು ರಾಜ್ಯಪಾಲ ಆರ್.ಎನ್. ರವಿ ಅವರಿಂದ ಪ್ರಮಾಣಪತ್ರ ಸ್ವೀಕರಿಸಲು ನಿರಾಕರಿಸಿದ್ದರು. ಬದಲಾಗಿ ವಿವಿಯ ಉಪಕುಲಪತಿಯಿಂದ ಪ್ರಮಾಣಪತ್ರ ಪಡೆದಿದ್ದರು.

ಈ ಘಟನೆ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಡಿಎಂಕೆ ನಡುವೆ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿತ್ತು.

ಜೀನ್ ಜೋಸೆಫ್ ಅವರು ಡಿಎಂಕೆಯ ನಾಗರಕೋಯಿಲ್‌ ವಿಭಾಗದ ಉಪ ಕಾರ್ಯದರ್ಶಿ ಎಂ. ರಾಜನ್ ಅವರ ಪತ್ನಿಯಾಗಿದ್ದು, ರಾಜ್ಯಪಾಲ ತಮಿಳು ವಿರೋಧಿಯಾದ ಕಾರಣ ಪದವಿ ಸ್ವೀಕರಿಸಲು ನಿರಾಕರಿಸಿದೆ ಎಂದಿದ್ದರು.

ಮಾಧ್ಯಮಗಳೊಂದಿಗೆ ಮಾತನಾಡಿದ್ದ ಜೀನ್ ಜೋಸೆಫ್, “ನನ್ನ ಪದವಿ ಯಾರಿಂದ ಪಡೆದುಕೊಳ್ಳಬೇಕು ಎನ್ನುವುದು ನನ್ನ ಆಯ್ಕೆ. ರಾಜ್ಯಪಾಲರು ತಮಿಳುನಾಡು ಮತ್ತು ತಮಿಳರ ವಿರೋಧಿಯಾಗಿರುವುದರಿಂದ ನಾನು ಅವರಿಂದ ಪದವಿ ಸ್ವೀಕರಿಸಲು ನಿರಾಕರಿಸಿದೆ. ನಾನು ದ್ರಾವಿಡ ಮಾದರಿ ಅನುಸರಿಸುತ್ತೇನೆ. ಇಲ್ಲಿ ಹಲವರಿಗೆ ನನ್ನಂತೆ ಅಭಿಪ್ರಾಯ ಇರಬಹುದು. ಇವರಿಂದ ಪದವಿ ಪಡೆಯುವುದು ಬೇಡ ಎಂದು ಹಲವರು ಅಂದುಕೊಂಡಿರಬಹುದು. ಆದರೆ, ಅವರಿಗೆ ಅವಕಾಶ ಸಿಕ್ಕಿರಲಿಕ್ಕಿಲ್ಲ” ಎಂದಿದ್ದರು.

ಮುಂದುವರಿದು, “ನಮ್ಮ ತಮಿಳುನಾಡಿನಲ್ಲಿ ಬೇರೆ ಯಾರಾದರು ಪದವಿ ಕೊಡಬಹುದಲ್ವಾ? ಅದಕ್ಕೆ ಅರ್ಹರಾದ ಅನೇಕ ಜನರಿದ್ದಾರೆ. ಮುಖ್ಯಮಂತ್ರಿ, ಶಿಕ್ಷಣ ಸಚಿವರು ಸೇರಿದಂತೆ ಹಲವರು ನಮ್ಮ ನಾಡಿನಲ್ಲಿ ಇದ್ದಾರೆ. ಅವರು ಕೊಡಬಹುದಲ್ವಾ? ಎಂದು ಪ್ರಶ್ನಿಸಿದ್ದರು.

ತಮಿಳರ ವಿರೋಧಿ ಆರೋಪ: ರಾಜ್ಯಪಾಲರ ಕೈಯಿಂದ ಪದವಿ ಸ್ವೀಕರಿಸಲು ನಿರಾಕರಿಸಿದ ಪಿಎಚ್‌ಡಿ ವಿದ್ಯಾರ್ಥಿನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...