Homeಮುಖಪುಟತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

’ಆಗಮ ಶಾಸ್ತ್ರ, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿರುವ 36,000 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸದಾಗಿ ರಚನೆಯಾಗಿರುವ ಡಿಎಂಕೆ ಸರ್ಕಾರ ನೂರು ದಿನಗಳನನ್ನು ಪೂರೈಸುವ ಮೊದಲೇ ಅರ್ಹರನ್ನು ಅರ್ಚಕರಾಗಿ ನೇಮಿಸುವುದಾಗಿ ತಿಳಿಸಿದೆ.

ತಮಿಳುನಾಡಿನ ಸ್ಟಾಲಿನ ನೇತೃತ್ವದ ಡಿಎಂಕೆ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ರಾಜ್ಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಪ್ರಸ್ತುತ ರಾಜ್ಯದಲ್ಲಿ ಇಷ್ಟೊಂದು ಮುನ್ನಲೆಗೆ ಬರಲು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರ ಬ್ರಾಹ್ಮಣ್ಯದ ವಿಚಾರ ವಿವಾದ ಮತ್ತು ದೂರಿಗೆ ಕಾರಣವಾಗಿರುವುದು.

ಆಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು ಘೋಷಿಸಿದ್ದರು. ಇದು ಪರ-ವಿರೋಧ ಚರ್ಚೆಗೆ ನಾಂದಿ ಹಾಡಿತ್ತು. ಈಗ ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವ ಕ್ರಮ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ನಟ ಚೇತನ್ ಅವರ ಬ್ರಾಹ್ಮಣ್ಯದ ಹೇಳಿಕೆ ಕುರಿತು ಸಂಘಟನೆಗಳು ದೂರು ನೀಡಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ನಟ ಚೇತನ್ ಪರ-ವಿರೋಧ ಪೋಸ್ಟ್‌ಗಳು ಹರಿದಾಡುತ್ತಿವೆ. ಇದರ ಜೊತೆಗೆ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ನಡುವಿನ ವ್ಯತ್ಯಾಸಗಳನ್ನು ಕುರಿತು ನೆಟ್ಟಿಗರು ಮಾತನಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಚಿಂತಕ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ರಾಜ್ಯದಲ್ಲಿಯೂ ಇಂತಹ ದಿಟ್ಟ ನಿರ್ಧಾರ ಜಾರಿಯಾಗಲಿ ಎಂದಿದ್ದಾರೆ.

“ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿ ನಾರಾಯಣ ಗುರುಗಳನ್ನು ತಮ್ಮ ಗುರುಗಳೆಂದು ಒಪ್ಪಿಕೊಳ್ಳುವ ಬಿಲ್ಲವ ಸಮುದಾಯದ ನಾಯಕರೊಬ್ಬರು ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿದ್ದಾರೆ. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರು ಈ ಅವಕಾಶವನ್ನು ಬಳಸಿಕೊಂಡು ನಾರಾಯಣ ಗುರುಗಳ ಆಶಯಕ್ಕೆ ಅನುಗುಣವಾಗಿ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಜಾತಿಭೇದವಿಲ್ಲದೆ ಅರ್ಚಕರನ್ನು ನೇಮಿಸುವ ದಿಟ್ಟ ನಿರ್ಧಾರವನ್ನು ಕೈಗೊಳ್ಳಬೇಕು” ಎಂದಿದ್ದಾರೆ.

“ಹಿಂದೂಗಳೆಲ್ಲ ಸೋದರರು ಎಂದು ಭಾವಿಸುವ ಆರ್‌ಎಸ್‌ಎಸ್‌ ಮತ್ತು ಅದರ ಪರಿವಾರ ಸಂಘಟನೆಗಳು ಹಾಗೂ ಬ್ರಾಹ್ಮಣರು ಬೇರೆ, ಜಾತಿಭೇದ, ಪುರೋಹಿತಷಾಹಿಯನ್ನು ಒಪ್ಪಿಕೊಳ್ಳುವ ಬ್ರಾಹ್ಮಣ್ಯ ಬೇರೆ ಎಂದು ವಾದಿಸುತ್ತಿರುವ ಬ್ರಾಹ್ಮಣರು ಮತ್ತು ಅವರ ಸಂಘಸಂಸ್ಥೆಗಳು ಕೂಡಾ ಇದನ್ನು ವಿರೋಧಿಸಲಿಕ್ಕಿಲ್ಲ ಎಂದು ನಂಬಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ಲೇಖಕ ನಾಗೇಗೌಡ ಕೀಲಾರ ಅವರು ತಮಿಳುನಾಡಿನ ಸರ್ಕಾರದ ನಿರ್ಧಾರವನ್ನು, ’ಈ ಆಗಮ ಶಾಸ್ತ್ರದ ಟ್ರೈನಿಂಗ್, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಅರ್ಚಕ ವೃತ್ತಿ ಎನ್ನುವುದೇ ಇರಬಾರದು ಎನ್ನುವ ನಾಗೇಗೌಡ ಕೀಲಾರ ಅವರು, ’ ಅರ್ಚಕ ವೃತ್ತಿ ಅನ್ನುವುದೇ ಇರಬಾರದು. ಮೊದಲು ನಾವುಗಳು ನಮ್ಮ ದೇವಸ್ಥಾನಗಳ ಗರ್ಭಗುಡಿಯನ್ನು ಮಾರ್ಪಾಟು ಮಾಡಬೇಕು. ವಿಶಾಲವಾದ ಕೋಣೆಯನ್ನಾಗಿ ಪರಿವರ್ತಿಸಿ ಅಲ್ಲಿ ಒಳ್ಳೆಯ ಗಾಳಿ ಬೆಳಕು ಇರಬೇಕು. ಜನರೇ ಸ್ವತಃ ಒಳಗೆ ಹೋಗಿ ಯಾರದೇ ನೆರವು ಇಲ್ಲದೆ ಒಂದೆರಡು ನಿಮಿಷ ಸ್ವತಃ ಪೂಜೆ ಮಾಡಿಕೊಂಡು ಬರುವ ವ್ಯವಸ್ಥೆ ಮಾಡಬೇಕು. ಪೂಜಾ ಕೋಣೆಯ ಸುವ್ಯವಸ್ಥೆಯನ್ನು ಕಾಪಾಡಲು ಯಾರನ್ನಾದರೂ ಒಬ್ಬರನ್ನು ನೇಮಕ ಮಾಡಿದರೆ ಸಾಕು. ಈ ವ್ಯಕ್ತಿಗೆ ಸೆಕ್ಯುರಿಟಿ ಗಾರ್ಡ್ ಗೆ ಇರುವ ಕೌಶಲ್ಯ ಇದ್ದರೆ ಸಾಕೇ ಹೊರತು ಯಾವುದೇ ಆಗಮ ಶಾಸ್ತ್ರದ ಟ್ರೈನಿಂಗ್ ಅವಶ್ಯಕತೆ ಇಲ್ಲ’ ಎಂದಿದ್ದಾರೆ.

’ಅಬ್ರಾಹ್ಮಣರು ಅರ್ಚಕರು ಆಗೋದು ನನ್ನ ಅಭಿಪ್ರಾಯದಲ್ಲಿ ಯಾವುದೇ ಸಾಮಾಜಿಕ ಮೇಲಿನ ಚಲನೆ ಅಲ್ಲವೇ ಅಲ್ಲ. ಇದು ಕೂಡ ಬ್ರಾಹ್ಮಣ್ಯದ ಮುಂದುವರಿಕೆಯೇ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಕೆಲವು ವರ್ಷಗಳ ಹಿಂದೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪರಿಶಿಷ್ಟಜಾತಿ-ಪಂಗಡದವರ ಜೊತೆಯಲ್ಲಿ ಮಹಿಳೆಯರನ್ನೂ ಅರ್ಚಕರನ್ನಾಗಿ ನೇಮಿಸುವ ದಿಟ್ಟ ನಿರ್ಧಾರ ಕೈಗೊಂಡಿದ್ದರು. ಈಗ ತಮಿಳುನಾಡು ಸರ್ಕಾರದ ಕ್ರಮದಿಂದ ಪ್ರೇರಿತರಾಗಿ ರಾಜ್ಯದಲ್ಲಿಯೂ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡಲಿ ಎಂಬುದು ಸಾಮಾಜಿಕ ಹೋರಾಟಗಾರರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...