Homeಮುಖಪುಟತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

’ಆಗಮ ಶಾಸ್ತ್ರ, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿರುವ 36,000 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸದಾಗಿ ರಚನೆಯಾಗಿರುವ ಡಿಎಂಕೆ ಸರ್ಕಾರ ನೂರು ದಿನಗಳನನ್ನು ಪೂರೈಸುವ ಮೊದಲೇ ಅರ್ಹರನ್ನು ಅರ್ಚಕರಾಗಿ ನೇಮಿಸುವುದಾಗಿ ತಿಳಿಸಿದೆ.

ತಮಿಳುನಾಡಿನ ಸ್ಟಾಲಿನ ನೇತೃತ್ವದ ಡಿಎಂಕೆ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ರಾಜ್ಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಪ್ರಸ್ತುತ ರಾಜ್ಯದಲ್ಲಿ ಇಷ್ಟೊಂದು ಮುನ್ನಲೆಗೆ ಬರಲು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರ ಬ್ರಾಹ್ಮಣ್ಯದ ವಿಚಾರ ವಿವಾದ ಮತ್ತು ದೂರಿಗೆ ಕಾರಣವಾಗಿರುವುದು.

ಆಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು ಘೋಷಿಸಿದ್ದರು. ಇದು ಪರ-ವಿರೋಧ ಚರ್ಚೆಗೆ ನಾಂದಿ ಹಾಡಿತ್ತು. ಈಗ ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವ ಕ್ರಮ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ನಟ ಚೇತನ್ ಅವರ ಬ್ರಾಹ್ಮಣ್ಯದ ಹೇಳಿಕೆ ಕುರಿತು ಸಂಘಟನೆಗಳು ದೂರು ನೀಡಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ನಟ ಚೇತನ್ ಪರ-ವಿರೋಧ ಪೋಸ್ಟ್‌ಗಳು ಹರಿದಾಡುತ್ತಿವೆ. ಇದರ ಜೊತೆಗೆ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ನಡುವಿನ ವ್ಯತ್ಯಾಸಗಳನ್ನು ಕುರಿತು ನೆಟ್ಟಿಗರು ಮಾತನಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಚಿಂತಕ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ರಾಜ್ಯದಲ್ಲಿಯೂ ಇಂತಹ ದಿಟ್ಟ ನಿರ್ಧಾರ ಜಾರಿಯಾಗಲಿ ಎಂದಿದ್ದಾರೆ.

“ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿ ನಾರಾಯಣ ಗುರುಗಳನ್ನು ತಮ್ಮ ಗುರುಗಳೆಂದು ಒಪ್ಪಿಕೊಳ್ಳುವ ಬಿಲ್ಲವ ಸಮುದಾಯದ ನಾಯಕರೊಬ್ಬರು ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿದ್ದಾರೆ. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರು ಈ ಅವಕಾಶವನ್ನು ಬಳಸಿಕೊಂಡು ನಾರಾಯಣ ಗುರುಗಳ ಆಶಯಕ್ಕೆ ಅನುಗುಣವಾಗಿ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಜಾತಿಭೇದವಿಲ್ಲದೆ ಅರ್ಚಕರನ್ನು ನೇಮಿಸುವ ದಿಟ್ಟ ನಿರ್ಧಾರವನ್ನು ಕೈಗೊಳ್ಳಬೇಕು” ಎಂದಿದ್ದಾರೆ.

“ಹಿಂದೂಗಳೆಲ್ಲ ಸೋದರರು ಎಂದು ಭಾವಿಸುವ ಆರ್‌ಎಸ್‌ಎಸ್‌ ಮತ್ತು ಅದರ ಪರಿವಾರ ಸಂಘಟನೆಗಳು ಹಾಗೂ ಬ್ರಾಹ್ಮಣರು ಬೇರೆ, ಜಾತಿಭೇದ, ಪುರೋಹಿತಷಾಹಿಯನ್ನು ಒಪ್ಪಿಕೊಳ್ಳುವ ಬ್ರಾಹ್ಮಣ್ಯ ಬೇರೆ ಎಂದು ವಾದಿಸುತ್ತಿರುವ ಬ್ರಾಹ್ಮಣರು ಮತ್ತು ಅವರ ಸಂಘಸಂಸ್ಥೆಗಳು ಕೂಡಾ ಇದನ್ನು ವಿರೋಧಿಸಲಿಕ್ಕಿಲ್ಲ ಎಂದು ನಂಬಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ಲೇಖಕ ನಾಗೇಗೌಡ ಕೀಲಾರ ಅವರು ತಮಿಳುನಾಡಿನ ಸರ್ಕಾರದ ನಿರ್ಧಾರವನ್ನು, ’ಈ ಆಗಮ ಶಾಸ್ತ್ರದ ಟ್ರೈನಿಂಗ್, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಅರ್ಚಕ ವೃತ್ತಿ ಎನ್ನುವುದೇ ಇರಬಾರದು ಎನ್ನುವ ನಾಗೇಗೌಡ ಕೀಲಾರ ಅವರು, ’ ಅರ್ಚಕ ವೃತ್ತಿ ಅನ್ನುವುದೇ ಇರಬಾರದು. ಮೊದಲು ನಾವುಗಳು ನಮ್ಮ ದೇವಸ್ಥಾನಗಳ ಗರ್ಭಗುಡಿಯನ್ನು ಮಾರ್ಪಾಟು ಮಾಡಬೇಕು. ವಿಶಾಲವಾದ ಕೋಣೆಯನ್ನಾಗಿ ಪರಿವರ್ತಿಸಿ ಅಲ್ಲಿ ಒಳ್ಳೆಯ ಗಾಳಿ ಬೆಳಕು ಇರಬೇಕು. ಜನರೇ ಸ್ವತಃ ಒಳಗೆ ಹೋಗಿ ಯಾರದೇ ನೆರವು ಇಲ್ಲದೆ ಒಂದೆರಡು ನಿಮಿಷ ಸ್ವತಃ ಪೂಜೆ ಮಾಡಿಕೊಂಡು ಬರುವ ವ್ಯವಸ್ಥೆ ಮಾಡಬೇಕು. ಪೂಜಾ ಕೋಣೆಯ ಸುವ್ಯವಸ್ಥೆಯನ್ನು ಕಾಪಾಡಲು ಯಾರನ್ನಾದರೂ ಒಬ್ಬರನ್ನು ನೇಮಕ ಮಾಡಿದರೆ ಸಾಕು. ಈ ವ್ಯಕ್ತಿಗೆ ಸೆಕ್ಯುರಿಟಿ ಗಾರ್ಡ್ ಗೆ ಇರುವ ಕೌಶಲ್ಯ ಇದ್ದರೆ ಸಾಕೇ ಹೊರತು ಯಾವುದೇ ಆಗಮ ಶಾಸ್ತ್ರದ ಟ್ರೈನಿಂಗ್ ಅವಶ್ಯಕತೆ ಇಲ್ಲ’ ಎಂದಿದ್ದಾರೆ.

’ಅಬ್ರಾಹ್ಮಣರು ಅರ್ಚಕರು ಆಗೋದು ನನ್ನ ಅಭಿಪ್ರಾಯದಲ್ಲಿ ಯಾವುದೇ ಸಾಮಾಜಿಕ ಮೇಲಿನ ಚಲನೆ ಅಲ್ಲವೇ ಅಲ್ಲ. ಇದು ಕೂಡ ಬ್ರಾಹ್ಮಣ್ಯದ ಮುಂದುವರಿಕೆಯೇ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಕೆಲವು ವರ್ಷಗಳ ಹಿಂದೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪರಿಶಿಷ್ಟಜಾತಿ-ಪಂಗಡದವರ ಜೊತೆಯಲ್ಲಿ ಮಹಿಳೆಯರನ್ನೂ ಅರ್ಚಕರನ್ನಾಗಿ ನೇಮಿಸುವ ದಿಟ್ಟ ನಿರ್ಧಾರ ಕೈಗೊಂಡಿದ್ದರು. ಈಗ ತಮಿಳುನಾಡು ಸರ್ಕಾರದ ಕ್ರಮದಿಂದ ಪ್ರೇರಿತರಾಗಿ ರಾಜ್ಯದಲ್ಲಿಯೂ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡಲಿ ಎಂಬುದು ಸಾಮಾಜಿಕ ಹೋರಾಟಗಾರರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...