Homeಮುಖಪುಟತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

ತಮಿಳುನಾಡಿನಲ್ಲಿ ಮಹಿಳೆಯರು, ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ, ರಾಜ್ಯದಲ್ಲಿಯೂ ಚರ್ಚೆ ಆರಂಭ

’ಆಗಮ ಶಾಸ್ತ್ರ, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’

- Advertisement -
- Advertisement -

ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿರುವ 36,000 ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ. ಹೊಸದಾಗಿ ರಚನೆಯಾಗಿರುವ ಡಿಎಂಕೆ ಸರ್ಕಾರ ನೂರು ದಿನಗಳನನ್ನು ಪೂರೈಸುವ ಮೊದಲೇ ಅರ್ಹರನ್ನು ಅರ್ಚಕರಾಗಿ ನೇಮಿಸುವುದಾಗಿ ತಿಳಿಸಿದೆ.

ತಮಿಳುನಾಡಿನ ಸ್ಟಾಲಿನ ನೇತೃತ್ವದ ಡಿಎಂಕೆ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ರಾಜ್ಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ. ಈ ವಿಷಯ ಪ್ರಸ್ತುತ ರಾಜ್ಯದಲ್ಲಿ ಇಷ್ಟೊಂದು ಮುನ್ನಲೆಗೆ ಬರಲು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರ ಬ್ರಾಹ್ಮಣ್ಯದ ವಿಚಾರ ವಿವಾದ ಮತ್ತು ದೂರಿಗೆ ಕಾರಣವಾಗಿರುವುದು.

ಆಗಮಾ ಶಾಸ್ತ್ರದಲ್ಲಿ ತರಬೇತಿ ಪಡೆದ ಮಹಿಳೆಯರು ದೇವಾಲಯದ ಅರ್ಚಕರ ಹುದ್ದೆಗಳನ್ನು ವಹಿಸಿಕೊಳ್ಳಲು ಬಯಸಿದರೆ ಅವರಿಗೆ  ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ’ ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಶೇಖರ್ ಬಾಬು ಘೋಷಿಸಿದ್ದರು. ಇದು ಪರ-ವಿರೋಧ ಚರ್ಚೆಗೆ ನಾಂದಿ ಹಾಡಿತ್ತು. ಈಗ ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡುವ ಕ್ರಮ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ರಾಜ್ಯದಲ್ಲಿ ನಟ ಚೇತನ್ ಅವರ ಬ್ರಾಹ್ಮಣ್ಯದ ಹೇಳಿಕೆ ಕುರಿತು ಸಂಘಟನೆಗಳು ದೂರು ನೀಡಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ನಟ ಚೇತನ್ ಪರ-ವಿರೋಧ ಪೋಸ್ಟ್‌ಗಳು ಹರಿದಾಡುತ್ತಿವೆ. ಇದರ ಜೊತೆಗೆ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ನಡುವಿನ ವ್ಯತ್ಯಾಸಗಳನ್ನು ಕುರಿತು ನೆಟ್ಟಿಗರು ಮಾತನಾಡುತ್ತಿದ್ದಾರೆ.

ಇದನ್ನೂ ಓದಿ: ತಮಿಳುನಾಡು : ತೂತುಕುಡಿ ಲಾಕಪ್‌ ಡೆತ್‌ಗೆ 1 ವರ್ಷ, ಕಮರುತ್ತಿದೆ ನ್ಯಾಯದ ನಿರೀಕ್ಷೆ

ತಮಿಳುನಾಡು ಸರ್ಕಾರದ ಕ್ರಮವನ್ನು ಸ್ವಾಗತಿಸಿರುವ ಚಿಂತಕ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ರಾಜ್ಯದಲ್ಲಿಯೂ ಇಂತಹ ದಿಟ್ಟ ನಿರ್ಧಾರ ಜಾರಿಯಾಗಲಿ ಎಂದಿದ್ದಾರೆ.

“ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿ ನಾರಾಯಣ ಗುರುಗಳನ್ನು ತಮ್ಮ ಗುರುಗಳೆಂದು ಒಪ್ಪಿಕೊಳ್ಳುವ ಬಿಲ್ಲವ ಸಮುದಾಯದ ನಾಯಕರೊಬ್ಬರು ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿದ್ದಾರೆ. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರು ಈ ಅವಕಾಶವನ್ನು ಬಳಸಿಕೊಂಡು ನಾರಾಯಣ ಗುರುಗಳ ಆಶಯಕ್ಕೆ ಅನುಗುಣವಾಗಿ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಜಾತಿಭೇದವಿಲ್ಲದೆ ಅರ್ಚಕರನ್ನು ನೇಮಿಸುವ ದಿಟ್ಟ ನಿರ್ಧಾರವನ್ನು ಕೈಗೊಳ್ಳಬೇಕು” ಎಂದಿದ್ದಾರೆ.

“ಹಿಂದೂಗಳೆಲ್ಲ ಸೋದರರು ಎಂದು ಭಾವಿಸುವ ಆರ್‌ಎಸ್‌ಎಸ್‌ ಮತ್ತು ಅದರ ಪರಿವಾರ ಸಂಘಟನೆಗಳು ಹಾಗೂ ಬ್ರಾಹ್ಮಣರು ಬೇರೆ, ಜಾತಿಭೇದ, ಪುರೋಹಿತಷಾಹಿಯನ್ನು ಒಪ್ಪಿಕೊಳ್ಳುವ ಬ್ರಾಹ್ಮಣ್ಯ ಬೇರೆ ಎಂದು ವಾದಿಸುತ್ತಿರುವ ಬ್ರಾಹ್ಮಣರು ಮತ್ತು ಅವರ ಸಂಘಸಂಸ್ಥೆಗಳು ಕೂಡಾ ಇದನ್ನು ವಿರೋಧಿಸಲಿಕ್ಕಿಲ್ಲ ಎಂದು ನಂಬಿದ್ದೇನೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ಲೇಖಕ ನಾಗೇಗೌಡ ಕೀಲಾರ ಅವರು ತಮಿಳುನಾಡಿನ ಸರ್ಕಾರದ ನಿರ್ಧಾರವನ್ನು, ’ಈ ಆಗಮ ಶಾಸ್ತ್ರದ ಟ್ರೈನಿಂಗ್, ಶ್ಲೋಕಗಳ ಟ್ರೈನಿಂಗ್ ಮುಖಾಂತರ ನಾವುಗಳು ಅಬ್ರಾಹ್ಮಣರ ಮೆದುಳಿಗೆ ಬ್ರಾಹ್ಮಣ್ಯವನ್ನೆ ತುಂಬುತ್ತಿದ್ದೇವೆ ಹೊರತು ಬೇರೆ ಏನನ್ನೂ ಸಾಧಿಸುತ್ತಿಲ್ಲ’ ಎಂದು ಆರೋಪಿಸಿದ್ದಾರೆ.

ಅರ್ಚಕ ವೃತ್ತಿ ಎನ್ನುವುದೇ ಇರಬಾರದು ಎನ್ನುವ ನಾಗೇಗೌಡ ಕೀಲಾರ ಅವರು, ’ ಅರ್ಚಕ ವೃತ್ತಿ ಅನ್ನುವುದೇ ಇರಬಾರದು. ಮೊದಲು ನಾವುಗಳು ನಮ್ಮ ದೇವಸ್ಥಾನಗಳ ಗರ್ಭಗುಡಿಯನ್ನು ಮಾರ್ಪಾಟು ಮಾಡಬೇಕು. ವಿಶಾಲವಾದ ಕೋಣೆಯನ್ನಾಗಿ ಪರಿವರ್ತಿಸಿ ಅಲ್ಲಿ ಒಳ್ಳೆಯ ಗಾಳಿ ಬೆಳಕು ಇರಬೇಕು. ಜನರೇ ಸ್ವತಃ ಒಳಗೆ ಹೋಗಿ ಯಾರದೇ ನೆರವು ಇಲ್ಲದೆ ಒಂದೆರಡು ನಿಮಿಷ ಸ್ವತಃ ಪೂಜೆ ಮಾಡಿಕೊಂಡು ಬರುವ ವ್ಯವಸ್ಥೆ ಮಾಡಬೇಕು. ಪೂಜಾ ಕೋಣೆಯ ಸುವ್ಯವಸ್ಥೆಯನ್ನು ಕಾಪಾಡಲು ಯಾರನ್ನಾದರೂ ಒಬ್ಬರನ್ನು ನೇಮಕ ಮಾಡಿದರೆ ಸಾಕು. ಈ ವ್ಯಕ್ತಿಗೆ ಸೆಕ್ಯುರಿಟಿ ಗಾರ್ಡ್ ಗೆ ಇರುವ ಕೌಶಲ್ಯ ಇದ್ದರೆ ಸಾಕೇ ಹೊರತು ಯಾವುದೇ ಆಗಮ ಶಾಸ್ತ್ರದ ಟ್ರೈನಿಂಗ್ ಅವಶ್ಯಕತೆ ಇಲ್ಲ’ ಎಂದಿದ್ದಾರೆ.

’ಅಬ್ರಾಹ್ಮಣರು ಅರ್ಚಕರು ಆಗೋದು ನನ್ನ ಅಭಿಪ್ರಾಯದಲ್ಲಿ ಯಾವುದೇ ಸಾಮಾಜಿಕ ಮೇಲಿನ ಚಲನೆ ಅಲ್ಲವೇ ಅಲ್ಲ. ಇದು ಕೂಡ ಬ್ರಾಹ್ಮಣ್ಯದ ಮುಂದುವರಿಕೆಯೇ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ, ಕೆಲವು ವರ್ಷಗಳ ಹಿಂದೆ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪರಿಶಿಷ್ಟಜಾತಿ-ಪಂಗಡದವರ ಜೊತೆಯಲ್ಲಿ ಮಹಿಳೆಯರನ್ನೂ ಅರ್ಚಕರನ್ನಾಗಿ ನೇಮಿಸುವ ದಿಟ್ಟ ನಿರ್ಧಾರ ಕೈಗೊಂಡಿದ್ದರು. ಈಗ ತಮಿಳುನಾಡು ಸರ್ಕಾರದ ಕ್ರಮದಿಂದ ಪ್ರೇರಿತರಾಗಿ ರಾಜ್ಯದಲ್ಲಿಯೂ ಮಹಿಳೆಯರು ಮತ್ತು ಬ್ರಾಹ್ಮಣೇತರರಿಗೆ ಅರ್ಚಕ ಹುದ್ದೆ ನೀಡಲಿ ಎಂಬುದು ಸಾಮಾಜಿಕ ಹೋರಾಟಗಾರರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರನ್ನು ಅರ್ಚಕರಾಗಿ ನೇಮಿಸಲಾಗುತ್ತದೆ: ತಮಿಳುನಾಡು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...