Homeಮುಖಪುಟಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

ಪರಿಹಾರ ಬಿಡುಗಡೆ ಮಾಡದೆ ವಿಳಂಬ: ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ತಮಿಳುನಾಡು ಸರಕಾರ

- Advertisement -
- Advertisement -

ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಂಬಂಧಿಸಿದ ಪರಿಹಾರ ಧನವನ್ನು ಕೇಂದ್ರ ಸರಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ತಮಿಳುನಾಡು ಸರ್ಕಾರವು, ಇತ್ತೀಚಿನ ಪ್ರವಾಹ ಮತ್ತು ಮೈಚುಂಗ್ ಚಂಡಮಾರುತದಿಂದ ಉಂಟಾದ ಹಾನಿಗಳಿಗೆ ಪರಿಹಾರವಾಗಿ 37,000 ಕೋಟಿಗೂ ಹೆಚ್ಚು ಪರಿಹಾರ ಧನವನ್ನು ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡುವಂತೆ ನ್ಯಾಯಾಲಕ್ಕೆ ಮೂಲ ದಾವೆಯಾಗಿ ಸಲ್ಲಿಸಿದ ತನ್ನ ಮನವಿಯಲ್ಲಿ ಆಗ್ರಹಿಸಿದೆ.

ಹಣ ಬಿಡುಗಡೆಯಲ್ಲಿ ವಿಳಂಬ ಮಾಡುವುದರ ಬಗ್ಗೆ ಯಾವುದೇ ಸಮರ್ಥನೆ ಇಲ್ಲ. ಇತರ ರಾಜ್ಯಗಳಿಗೆ ಹೋಲಿಸಿದರೆ ಹಣ ಬಿಡುಗಡೆಯಲ್ಲಿನ ವ್ಯತ್ಯಾಸವು ತಾರತಮ್ಯಕ್ಕೆ ಸಮಾನವಾಗಿದೆ. ಇದು ವಿಪತ್ತುಗಳಿಂದ ಬಳಲುತ್ತಿರುವ ಮತ್ತು ಹೆಚ್ಚಿನ ಸಂಕಷ್ಟಗಳನ್ನು ಎದುರಿಸಿದ ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಈ ರೀತಿಯ ಮಲತಾಯಿ ಧೋರಣೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ನೀತಿಯನ್ನು ಉಲ್ಲಂಘಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಪರಿಹಾರ ಧನ ಬಿಡುಗಡೆ ಮಾಡಲು ಹಲವು ಬಾರಿ ಮನವಿ ಮಾಡಿದರೂ ಕೇಂದ್ರ ಸರಕಾರ ಮಣಿದಿಲ್ಲ ಎಂದು ಮೊಕದ್ದಮೆಯಲ್ಲಿ ಉಲ್ಲೇಖಿಸಲಾಗಿದೆ.

2023ರ ಡಿಸೆಂಬರ್‌ನಲ್ಲಿ ಮೈಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಗೆ ಹಣಕಾಸಿನ ನೆರವು ನೀಡಲು 19,692.69 ಕೋಟಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಮತ್ತು ಅಂತಹ ಹಣವನ್ನು ನಿಗದಿಪಡಿಸಿದ ಕಾಲಮಿತಿಯೊಳಗೆ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರಕಾರವು ಆಗ್ರಹಿಸಿದೆ.

ಇದಲ್ಲದೆ ಡಿಸೆಂಬರ್‌ನಲ್ಲಿ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಉಂಟಾದ ಭಾರೀ ಮಳೆಗೆ ಸಂಬಂಧಿಸಿದ  ಹಾನಿಗಳಿಗೆ 18,214.52 ಕೋಟಿ ನೆರವನ್ನು ಕೋರಲಾಗಿದೆ. ಪ್ರಕೃತಿ ವಿಕೋಪದಿಂದ ಉಂಟಾದ ಹಾನಿಯನ್ನು ನಿರ್ಣಯಿಸಲು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವಾಲಯದ ಆಂತರಿಕ ತಂಡದ ವರದಿಯ ಬಗ್ಗೆ ಕೇಂದ್ರ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಮೊಕದ್ದಮೆಯಲ್ಲಿ ಉಲ್ಲೇಖಿಸಲಾಗಿದೆ. ಇಂತಹ ನಿಷ್ಕ್ರಿಯತೆಯು ರಾಜ್ಯದ ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಒತ್ತಿ ಹೇಳಲಾಗಿದೆ.

ಇದು ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತದೆ ಮತ್ತು ರಾಜ್ಯದ ಜನರಿಗೆ ಮಾನಸಿಕ ಯಾತನೆ ಮತ್ತು ಕಷ್ಟಗಳನ್ನು ಉಂಟುಮಾಡುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡು ಸರಕಾರವು ಕೇಂದ್ರ ಸರಕಾರದ ವಿರುದ್ಧ ವಕೀಲ ಡಿ ಕುಮನನ್ ಮತ್ತು ಹಿರಿಯ ವಕೀಲ ಪಿ ವಿಲ್ಸನ್ ಮೂಲಕ ಅರ್ಜಿಯನ್ನು ಸಲ್ಲಿಸಿದೆ. ನೈಸರ್ಗಿಕ ವಿಕೋಪದ ವಿಚಾರದಲ್ಲಿ ಪರಿಹಾರದ ಹಣವನ್ನು ಕೇಂದ್ರವು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಸುಪ್ರೀಂಕೋರ್ಟ್‌ ಮೊರೆ ಹೋದ ಎರಡನೇ ರಾಜ್ಯ ತಮಿಳುನಾಡು ಆಗಿದೆ.

ಈ ಮೊದಲು ರಾಜ್ಯದ ಬರ ಪರಿಸ್ಥಿತಿ ನಿಭಾಯಿಸಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಎನ್‌ಡಿಆರ್‌ಎಫ್ ನಿಧಿಯಿಂದ 18,171.44 ಕೋಟಿ ಪರಿಹಾರವನ್ನು ನೀಡಲು ನಿರ್ದೇಶನ ನೀಡಬೇಕು ಎಂದು ಕಾಂಗ್ರೆಸ್ ಸರ್ಕಾರ ಕೋರ್ಟ್‌ನಲ್ಲಿ ಮನವಿ ಮಾಡಿಕೊಂಡಿತ್ತು.

ಇದನ್ನು ಓದಿ: ಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...