Homeಮುಖಪುಟತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು.

- Advertisement -
- Advertisement -

ತಮಿಳುನಾಡಿನ ಕುಂಡ್ರತ್ತೂರ್‌‌ನಲ್ಲಿ ಅಕ್ರಮ ಸರ್ಕಾರಿ ಜಮೀನಿನ ಮಾರಾಟ ಮತ್ತು ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದ ತಮಿಳನ್ ಟಿವಿ ಚಾನೆಲ್‌ನ 29 ವರ್ಷದ ವರದಿಗಾರನನ್ನು ಗುಂಪೊಂದು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದೆ.

ಕುಂಡ್ರತ್ತೂರ್‌‌ ಚೆನ್ನೈನ ಹೊರವಲಯದಲ್ಲಿರುವ ಉಪನಗರವಾಗಿದ್ದು, ಕಾಂಚೀಪುರಂ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಪುದು ನೆಲ್ಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ಮೋಸಸ್ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿದ್ದರು. ಆಗಿನಿಂದಲೇ ಮಾರಣಾಂತಿಕ ಬೆದರಿಕೆಗಳನ್ನು ಎದುರಿಸುತ್ತಿದ್ದ ಮೋಸಸ್‌ ಅವರನ್ನು ಭಾನುವಾರ ಇಬ್ಬರು ದುಷ್ಕರ್ಮಿಗಳು ಕುಡಗೋಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ಹೇಳುವ ಪತ್ರಕರ್ತರನ್ನು ತುಳಿಯುತ್ತಿರುವ ಪ್ರಭುತ್ವಗಳು

ಇದರ ಬೆನ್ನಲ್ಲೇ, ಸಾವಿಗೆ ಸಂಬಂಧಿಸಿದಂತೆ ಅಕ್ರಮ ಭೂ ಮಾರಾಟ ಮತ್ತು ಗಾಂಜಾ ಮಾರಾಟದಲ್ಲಿ ಭಾಗಿಯಾಗಿರುವ ಗುಂಪಿನ ನಾಲ್ಕು ಜನರನ್ನು ಸೋಮಂಗಲಂ ಪೊಲೀಸರು ಬಂಧಿಸಿದ್ದಾರೆ.

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು. ಕಳೆದ ವಾರ, ಈ ಪ್ರದೇಶದ ಗುಂಪೊಂದು ನಡೆಸುತ್ತಿದ್ದ ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದಕ್ಕಾಗಿ ಆ ಗುಂಪಿನಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದರು.

ಇದನ್ನೂ ಓದಿ: ಕ್ರಾಂತಿಯ ಕಿಡಿ ಹೊತ್ತಿಸಿದವರು ಕಿಡಿಗೇಡಿಗಳಿಂದ ಹತ್ಯೆಯಾದ ಕಥೆ

ತಮಿಳನ್ ಟಿವಿಯ ಮುಖ್ಯ ವರದಿಗಾರ ಮತ್ತು ವರ್ಕಿಂಗ್ ಜರ್ನಲಿಸ್ಟ್ಸ್ ಯೂನಿಯನ್ ರಾಜ್ಯ ಅಧ್ಯಕ್ಷ ಸಗಾಯರಾಜ್, “ಭಾನುವಾರ ರಾತ್ರಿ, ಮೋಸಸ್ ಅವರು ತಮ್ಮ ಮನೆಯಿಂದ ಹೊರಡುತ್ತಿದ್ದರು. ಶೀಘ್ರದಲ್ಲೇ ಅವರ ಕೂಗು ಕೇಳಿಸಿ ಏನಾಯಿತು ಎಂದು ನೋಡಲು ಅವನ ತಂದೆ ತಕ್ಷಣವೇ ಧಾವಿಸಿದರು. ಕುಡಗೋಲುಗಳೊಂದಿಗಿನ ಇಬ್ಬರು ಮೋಸಸ್‌ ಮೇಲೆ ಆಕ್ರಮಣ ಮಾಡುತ್ತಿದ್ದರು. ನಂತರ ಅವರು ಆತನ ತಂದೆಯನ್ನು ನೋಡಿ ಓಡಿಹೋದರು” ಎಂದು ಹೇಳಿದರು.

ಈ ದಾಳಿಯಲ್ಲಿ, ಮೋಸಸ್‌ಗೆ ತಲೆ ಮತ್ತು ಕೈಗೆ ತೀವ್ರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಕ್ರೋಮ್‌ಪೇಟ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ತೀವ್ರ ಗಾಯಗಳು ಮತ್ತು ಅತಿಯಾದ ರಕ್ತಸ್ರಾವದಿಂದಾಗಿ ಅವರು ನಿಧನರಾದರು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

ಸ್ವತಃ ಪತ್ರಕರ್ತರೂ ಆಗಿರುವ ಮೋಸಸ್‌ ತಂದೆ ಜೆಸುದಾಸ್, “ನನ್ನ ಮಗ ಯಾವಾಗಲೂ ಈ ಪ್ರದೇಶದಲ್ಲಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದನು. ಈ ಹಿಂದೆ ಭೂ ಕಬಳಿಕೆಯ ಬಗ್ಗೆ ವರದಿ ಮಾಡಿದ್ದನು. ಅಂದಿನಿಂದ ನಾವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಕಳೆದ ವಾರ ಅದೇ ಗುಂಪು ಗಾಂಜಾ ಮಾರಾಟದಲ್ಲಿ ಭಾಗಿಯಾಗಿದೆ ಎಂದು ವರದಿ ಮಾಡಿದ್ದನು. ಹಾಗಾಗಿ ಅವರು ನಮಗೆ ಬೆದರಿಕೆಗಳನ್ನು ಒಡ್ಡಿದ್ದರು. ನಂತರ ಪೊಲೀಸ್ ಠಾಣೆಗೆ ಹೋಗಿ ಬೆದರಿಕೆಗಳ ಬಗ್ಗೆ ತಿಳಿಸಿದ್ದನು. ಆದರೆ ಲಿಖಿತವಾಗಿ ದೂರು ನೀಡಿರಲಿಲ್ಲ. ಅದುವೇ ಈ ದಾಳಿಗೆ ಕಾರಣವಾಯಿತು” ಎಂದು ಹೇಳಿದರು.

ಆದರೆ ಪೊಲೀಸರು ಕ್ರಮ ಕೈಗೊಂಡು ವರದಿಗಾರನಿಗೆ ರಕ್ಷಣೆ ನೀಡಬೇಕಾಗಿತ್ತು ಎಂದು ಸಗಾಯರಾಜ್ ಹೇಳಿದ್ದಾರೆ. ತಕ್ಷಣದ ರಕ್ತಸಂಬಂಧಿಗಳಿಗೆ ಸರ್ಕಾರವು 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಕೆಲಸವನ್ನು ನೀಡಬೇಕು. ಪತ್ರಕರ್ತರ ರಕ್ಷಣೆಗಾಗಿ ತಮಿಳುನಾಡು ಸರ್ಕಾರ ಕಾನೂನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

ಏತನ್ಮಧ್ಯೆ, ಸೋಮಂಗಲಂ ಪೊಲೀಸರು ದೂರು ದಾಖಲಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮೋಸಸ್ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮಹಿಳಾ ಪತ್ರಕರ್ತರ ವೇದಿಕೆ ಹೀಗೆ ಹೇಳಿದೆ: “ಗಾಂಜಾ ಮಾರಾಟ ಮತ್ತು ಭೂ ಅತಿಕ್ರಮಣವನ್ನು ವರದಿ ಮಾಡಿದ್ದ ವರದಿಗಾರ ಮೋಸಸ್ ಅವರನ್ನು ಪುದು ನೆಲ್ಲೂರಿನಲ್ಲಿ ಹತ್ಯೆ ಮಾಡಲಾಗಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ನಾವು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಕೋರುತ್ತೇವೆ. ಈ ಕೊಲೆಗೆ ಪೊಲೀಸರೇ ಕಾರಣ. ಏಕೆಂದರೆ ಮೋಸೆಸ್ ತನ್ನ ಜೀವಕ್ಕೆ ಬೆದರಿಕೆ ಇದೆ ಎಂದು ದೂರು ನೀಡಿದಾಗ್ಯೂ ಪೊಲೀಸ್ ಇಲಾಖೆಯಿಂದ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ತನಿಖೆ ತೆರೆದಿಡುವ ಚರ್ಚೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....