Homeಮುಖಪುಟತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು.

- Advertisement -
- Advertisement -

ತಮಿಳುನಾಡಿನ ಕುಂಡ್ರತ್ತೂರ್‌‌ನಲ್ಲಿ ಅಕ್ರಮ ಸರ್ಕಾರಿ ಜಮೀನಿನ ಮಾರಾಟ ಮತ್ತು ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದ ತಮಿಳನ್ ಟಿವಿ ಚಾನೆಲ್‌ನ 29 ವರ್ಷದ ವರದಿಗಾರನನ್ನು ಗುಂಪೊಂದು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದೆ.

ಕುಂಡ್ರತ್ತೂರ್‌‌ ಚೆನ್ನೈನ ಹೊರವಲಯದಲ್ಲಿರುವ ಉಪನಗರವಾಗಿದ್ದು, ಕಾಂಚೀಪುರಂ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಪುದು ನೆಲ್ಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ಮೋಸಸ್ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿದ್ದರು. ಆಗಿನಿಂದಲೇ ಮಾರಣಾಂತಿಕ ಬೆದರಿಕೆಗಳನ್ನು ಎದುರಿಸುತ್ತಿದ್ದ ಮೋಸಸ್‌ ಅವರನ್ನು ಭಾನುವಾರ ಇಬ್ಬರು ದುಷ್ಕರ್ಮಿಗಳು ಕುಡಗೋಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ಹೇಳುವ ಪತ್ರಕರ್ತರನ್ನು ತುಳಿಯುತ್ತಿರುವ ಪ್ರಭುತ್ವಗಳು

ಇದರ ಬೆನ್ನಲ್ಲೇ, ಸಾವಿಗೆ ಸಂಬಂಧಿಸಿದಂತೆ ಅಕ್ರಮ ಭೂ ಮಾರಾಟ ಮತ್ತು ಗಾಂಜಾ ಮಾರಾಟದಲ್ಲಿ ಭಾಗಿಯಾಗಿರುವ ಗುಂಪಿನ ನಾಲ್ಕು ಜನರನ್ನು ಸೋಮಂಗಲಂ ಪೊಲೀಸರು ಬಂಧಿಸಿದ್ದಾರೆ.

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು. ಕಳೆದ ವಾರ, ಈ ಪ್ರದೇಶದ ಗುಂಪೊಂದು ನಡೆಸುತ್ತಿದ್ದ ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದಕ್ಕಾಗಿ ಆ ಗುಂಪಿನಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದರು.

ಇದನ್ನೂ ಓದಿ: ಕ್ರಾಂತಿಯ ಕಿಡಿ ಹೊತ್ತಿಸಿದವರು ಕಿಡಿಗೇಡಿಗಳಿಂದ ಹತ್ಯೆಯಾದ ಕಥೆ

ತಮಿಳನ್ ಟಿವಿಯ ಮುಖ್ಯ ವರದಿಗಾರ ಮತ್ತು ವರ್ಕಿಂಗ್ ಜರ್ನಲಿಸ್ಟ್ಸ್ ಯೂನಿಯನ್ ರಾಜ್ಯ ಅಧ್ಯಕ್ಷ ಸಗಾಯರಾಜ್, “ಭಾನುವಾರ ರಾತ್ರಿ, ಮೋಸಸ್ ಅವರು ತಮ್ಮ ಮನೆಯಿಂದ ಹೊರಡುತ್ತಿದ್ದರು. ಶೀಘ್ರದಲ್ಲೇ ಅವರ ಕೂಗು ಕೇಳಿಸಿ ಏನಾಯಿತು ಎಂದು ನೋಡಲು ಅವನ ತಂದೆ ತಕ್ಷಣವೇ ಧಾವಿಸಿದರು. ಕುಡಗೋಲುಗಳೊಂದಿಗಿನ ಇಬ್ಬರು ಮೋಸಸ್‌ ಮೇಲೆ ಆಕ್ರಮಣ ಮಾಡುತ್ತಿದ್ದರು. ನಂತರ ಅವರು ಆತನ ತಂದೆಯನ್ನು ನೋಡಿ ಓಡಿಹೋದರು” ಎಂದು ಹೇಳಿದರು.

ಈ ದಾಳಿಯಲ್ಲಿ, ಮೋಸಸ್‌ಗೆ ತಲೆ ಮತ್ತು ಕೈಗೆ ತೀವ್ರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಕ್ರೋಮ್‌ಪೇಟ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ತೀವ್ರ ಗಾಯಗಳು ಮತ್ತು ಅತಿಯಾದ ರಕ್ತಸ್ರಾವದಿಂದಾಗಿ ಅವರು ನಿಧನರಾದರು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

ಸ್ವತಃ ಪತ್ರಕರ್ತರೂ ಆಗಿರುವ ಮೋಸಸ್‌ ತಂದೆ ಜೆಸುದಾಸ್, “ನನ್ನ ಮಗ ಯಾವಾಗಲೂ ಈ ಪ್ರದೇಶದಲ್ಲಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದನು. ಈ ಹಿಂದೆ ಭೂ ಕಬಳಿಕೆಯ ಬಗ್ಗೆ ವರದಿ ಮಾಡಿದ್ದನು. ಅಂದಿನಿಂದ ನಾವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಕಳೆದ ವಾರ ಅದೇ ಗುಂಪು ಗಾಂಜಾ ಮಾರಾಟದಲ್ಲಿ ಭಾಗಿಯಾಗಿದೆ ಎಂದು ವರದಿ ಮಾಡಿದ್ದನು. ಹಾಗಾಗಿ ಅವರು ನಮಗೆ ಬೆದರಿಕೆಗಳನ್ನು ಒಡ್ಡಿದ್ದರು. ನಂತರ ಪೊಲೀಸ್ ಠಾಣೆಗೆ ಹೋಗಿ ಬೆದರಿಕೆಗಳ ಬಗ್ಗೆ ತಿಳಿಸಿದ್ದನು. ಆದರೆ ಲಿಖಿತವಾಗಿ ದೂರು ನೀಡಿರಲಿಲ್ಲ. ಅದುವೇ ಈ ದಾಳಿಗೆ ಕಾರಣವಾಯಿತು” ಎಂದು ಹೇಳಿದರು.

ಆದರೆ ಪೊಲೀಸರು ಕ್ರಮ ಕೈಗೊಂಡು ವರದಿಗಾರನಿಗೆ ರಕ್ಷಣೆ ನೀಡಬೇಕಾಗಿತ್ತು ಎಂದು ಸಗಾಯರಾಜ್ ಹೇಳಿದ್ದಾರೆ. ತಕ್ಷಣದ ರಕ್ತಸಂಬಂಧಿಗಳಿಗೆ ಸರ್ಕಾರವು 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಕೆಲಸವನ್ನು ನೀಡಬೇಕು. ಪತ್ರಕರ್ತರ ರಕ್ಷಣೆಗಾಗಿ ತಮಿಳುನಾಡು ಸರ್ಕಾರ ಕಾನೂನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

ಏತನ್ಮಧ್ಯೆ, ಸೋಮಂಗಲಂ ಪೊಲೀಸರು ದೂರು ದಾಖಲಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮೋಸಸ್ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮಹಿಳಾ ಪತ್ರಕರ್ತರ ವೇದಿಕೆ ಹೀಗೆ ಹೇಳಿದೆ: “ಗಾಂಜಾ ಮಾರಾಟ ಮತ್ತು ಭೂ ಅತಿಕ್ರಮಣವನ್ನು ವರದಿ ಮಾಡಿದ್ದ ವರದಿಗಾರ ಮೋಸಸ್ ಅವರನ್ನು ಪುದು ನೆಲ್ಲೂರಿನಲ್ಲಿ ಹತ್ಯೆ ಮಾಡಲಾಗಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ನಾವು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಕೋರುತ್ತೇವೆ. ಈ ಕೊಲೆಗೆ ಪೊಲೀಸರೇ ಕಾರಣ. ಏಕೆಂದರೆ ಮೋಸೆಸ್ ತನ್ನ ಜೀವಕ್ಕೆ ಬೆದರಿಕೆ ಇದೆ ಎಂದು ದೂರು ನೀಡಿದಾಗ್ಯೂ ಪೊಲೀಸ್ ಇಲಾಖೆಯಿಂದ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ತನಿಖೆ ತೆರೆದಿಡುವ ಚರ್ಚೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...