Homeಮುಖಪುಟತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು.

- Advertisement -
- Advertisement -

ತಮಿಳುನಾಡಿನ ಕುಂಡ್ರತ್ತೂರ್‌‌ನಲ್ಲಿ ಅಕ್ರಮ ಸರ್ಕಾರಿ ಜಮೀನಿನ ಮಾರಾಟ ಮತ್ತು ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದ ತಮಿಳನ್ ಟಿವಿ ಚಾನೆಲ್‌ನ 29 ವರ್ಷದ ವರದಿಗಾರನನ್ನು ಗುಂಪೊಂದು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದೆ.

ಕುಂಡ್ರತ್ತೂರ್‌‌ ಚೆನ್ನೈನ ಹೊರವಲಯದಲ್ಲಿರುವ ಉಪನಗರವಾಗಿದ್ದು, ಕಾಂಚೀಪುರಂ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಪುದು ನೆಲ್ಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ಮೋಸಸ್ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿದ್ದರು. ಆಗಿನಿಂದಲೇ ಮಾರಣಾಂತಿಕ ಬೆದರಿಕೆಗಳನ್ನು ಎದುರಿಸುತ್ತಿದ್ದ ಮೋಸಸ್‌ ಅವರನ್ನು ಭಾನುವಾರ ಇಬ್ಬರು ದುಷ್ಕರ್ಮಿಗಳು ಕುಡಗೋಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ಹೇಳುವ ಪತ್ರಕರ್ತರನ್ನು ತುಳಿಯುತ್ತಿರುವ ಪ್ರಭುತ್ವಗಳು

ಇದರ ಬೆನ್ನಲ್ಲೇ, ಸಾವಿಗೆ ಸಂಬಂಧಿಸಿದಂತೆ ಅಕ್ರಮ ಭೂ ಮಾರಾಟ ಮತ್ತು ಗಾಂಜಾ ಮಾರಾಟದಲ್ಲಿ ಭಾಗಿಯಾಗಿರುವ ಗುಂಪಿನ ನಾಲ್ಕು ಜನರನ್ನು ಸೋಮಂಗಲಂ ಪೊಲೀಸರು ಬಂಧಿಸಿದ್ದಾರೆ.

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು. ಕಳೆದ ವಾರ, ಈ ಪ್ರದೇಶದ ಗುಂಪೊಂದು ನಡೆಸುತ್ತಿದ್ದ ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದಕ್ಕಾಗಿ ಆ ಗುಂಪಿನಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದರು.

ಇದನ್ನೂ ಓದಿ: ಕ್ರಾಂತಿಯ ಕಿಡಿ ಹೊತ್ತಿಸಿದವರು ಕಿಡಿಗೇಡಿಗಳಿಂದ ಹತ್ಯೆಯಾದ ಕಥೆ

ತಮಿಳನ್ ಟಿವಿಯ ಮುಖ್ಯ ವರದಿಗಾರ ಮತ್ತು ವರ್ಕಿಂಗ್ ಜರ್ನಲಿಸ್ಟ್ಸ್ ಯೂನಿಯನ್ ರಾಜ್ಯ ಅಧ್ಯಕ್ಷ ಸಗಾಯರಾಜ್, “ಭಾನುವಾರ ರಾತ್ರಿ, ಮೋಸಸ್ ಅವರು ತಮ್ಮ ಮನೆಯಿಂದ ಹೊರಡುತ್ತಿದ್ದರು. ಶೀಘ್ರದಲ್ಲೇ ಅವರ ಕೂಗು ಕೇಳಿಸಿ ಏನಾಯಿತು ಎಂದು ನೋಡಲು ಅವನ ತಂದೆ ತಕ್ಷಣವೇ ಧಾವಿಸಿದರು. ಕುಡಗೋಲುಗಳೊಂದಿಗಿನ ಇಬ್ಬರು ಮೋಸಸ್‌ ಮೇಲೆ ಆಕ್ರಮಣ ಮಾಡುತ್ತಿದ್ದರು. ನಂತರ ಅವರು ಆತನ ತಂದೆಯನ್ನು ನೋಡಿ ಓಡಿಹೋದರು” ಎಂದು ಹೇಳಿದರು.

ಈ ದಾಳಿಯಲ್ಲಿ, ಮೋಸಸ್‌ಗೆ ತಲೆ ಮತ್ತು ಕೈಗೆ ತೀವ್ರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಕ್ರೋಮ್‌ಪೇಟ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ತೀವ್ರ ಗಾಯಗಳು ಮತ್ತು ಅತಿಯಾದ ರಕ್ತಸ್ರಾವದಿಂದಾಗಿ ಅವರು ನಿಧನರಾದರು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

ಸ್ವತಃ ಪತ್ರಕರ್ತರೂ ಆಗಿರುವ ಮೋಸಸ್‌ ತಂದೆ ಜೆಸುದಾಸ್, “ನನ್ನ ಮಗ ಯಾವಾಗಲೂ ಈ ಪ್ರದೇಶದಲ್ಲಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದನು. ಈ ಹಿಂದೆ ಭೂ ಕಬಳಿಕೆಯ ಬಗ್ಗೆ ವರದಿ ಮಾಡಿದ್ದನು. ಅಂದಿನಿಂದ ನಾವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಕಳೆದ ವಾರ ಅದೇ ಗುಂಪು ಗಾಂಜಾ ಮಾರಾಟದಲ್ಲಿ ಭಾಗಿಯಾಗಿದೆ ಎಂದು ವರದಿ ಮಾಡಿದ್ದನು. ಹಾಗಾಗಿ ಅವರು ನಮಗೆ ಬೆದರಿಕೆಗಳನ್ನು ಒಡ್ಡಿದ್ದರು. ನಂತರ ಪೊಲೀಸ್ ಠಾಣೆಗೆ ಹೋಗಿ ಬೆದರಿಕೆಗಳ ಬಗ್ಗೆ ತಿಳಿಸಿದ್ದನು. ಆದರೆ ಲಿಖಿತವಾಗಿ ದೂರು ನೀಡಿರಲಿಲ್ಲ. ಅದುವೇ ಈ ದಾಳಿಗೆ ಕಾರಣವಾಯಿತು” ಎಂದು ಹೇಳಿದರು.

ಆದರೆ ಪೊಲೀಸರು ಕ್ರಮ ಕೈಗೊಂಡು ವರದಿಗಾರನಿಗೆ ರಕ್ಷಣೆ ನೀಡಬೇಕಾಗಿತ್ತು ಎಂದು ಸಗಾಯರಾಜ್ ಹೇಳಿದ್ದಾರೆ. ತಕ್ಷಣದ ರಕ್ತಸಂಬಂಧಿಗಳಿಗೆ ಸರ್ಕಾರವು 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಕೆಲಸವನ್ನು ನೀಡಬೇಕು. ಪತ್ರಕರ್ತರ ರಕ್ಷಣೆಗಾಗಿ ತಮಿಳುನಾಡು ಸರ್ಕಾರ ಕಾನೂನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

ಏತನ್ಮಧ್ಯೆ, ಸೋಮಂಗಲಂ ಪೊಲೀಸರು ದೂರು ದಾಖಲಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮೋಸಸ್ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮಹಿಳಾ ಪತ್ರಕರ್ತರ ವೇದಿಕೆ ಹೀಗೆ ಹೇಳಿದೆ: “ಗಾಂಜಾ ಮಾರಾಟ ಮತ್ತು ಭೂ ಅತಿಕ್ರಮಣವನ್ನು ವರದಿ ಮಾಡಿದ್ದ ವರದಿಗಾರ ಮೋಸಸ್ ಅವರನ್ನು ಪುದು ನೆಲ್ಲೂರಿನಲ್ಲಿ ಹತ್ಯೆ ಮಾಡಲಾಗಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ನಾವು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಕೋರುತ್ತೇವೆ. ಈ ಕೊಲೆಗೆ ಪೊಲೀಸರೇ ಕಾರಣ. ಏಕೆಂದರೆ ಮೋಸೆಸ್ ತನ್ನ ಜೀವಕ್ಕೆ ಬೆದರಿಕೆ ಇದೆ ಎಂದು ದೂರು ನೀಡಿದಾಗ್ಯೂ ಪೊಲೀಸ್ ಇಲಾಖೆಯಿಂದ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ತನಿಖೆ ತೆರೆದಿಡುವ ಚರ್ಚೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...