Homeಮುಖಪುಟತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು.

- Advertisement -
- Advertisement -

ತಮಿಳುನಾಡಿನ ಕುಂಡ್ರತ್ತೂರ್‌‌ನಲ್ಲಿ ಅಕ್ರಮ ಸರ್ಕಾರಿ ಜಮೀನಿನ ಮಾರಾಟ ಮತ್ತು ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದ ತಮಿಳನ್ ಟಿವಿ ಚಾನೆಲ್‌ನ 29 ವರ್ಷದ ವರದಿಗಾರನನ್ನು ಗುಂಪೊಂದು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದೆ.

ಕುಂಡ್ರತ್ತೂರ್‌‌ ಚೆನ್ನೈನ ಹೊರವಲಯದಲ್ಲಿರುವ ಉಪನಗರವಾಗಿದ್ದು, ಕಾಂಚೀಪುರಂ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಪುದು ನೆಲ್ಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ಮೋಸಸ್ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿದ್ದರು. ಆಗಿನಿಂದಲೇ ಮಾರಣಾಂತಿಕ ಬೆದರಿಕೆಗಳನ್ನು ಎದುರಿಸುತ್ತಿದ್ದ ಮೋಸಸ್‌ ಅವರನ್ನು ಭಾನುವಾರ ಇಬ್ಬರು ದುಷ್ಕರ್ಮಿಗಳು ಕುಡಗೋಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ಹೇಳುವ ಪತ್ರಕರ್ತರನ್ನು ತುಳಿಯುತ್ತಿರುವ ಪ್ರಭುತ್ವಗಳು

ಇದರ ಬೆನ್ನಲ್ಲೇ, ಸಾವಿಗೆ ಸಂಬಂಧಿಸಿದಂತೆ ಅಕ್ರಮ ಭೂ ಮಾರಾಟ ಮತ್ತು ಗಾಂಜಾ ಮಾರಾಟದಲ್ಲಿ ಭಾಗಿಯಾಗಿರುವ ಗುಂಪಿನ ನಾಲ್ಕು ಜನರನ್ನು ಸೋಮಂಗಲಂ ಪೊಲೀಸರು ಬಂಧಿಸಿದ್ದಾರೆ.

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು. ಕಳೆದ ವಾರ, ಈ ಪ್ರದೇಶದ ಗುಂಪೊಂದು ನಡೆಸುತ್ತಿದ್ದ ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದಕ್ಕಾಗಿ ಆ ಗುಂಪಿನಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದರು.

ಇದನ್ನೂ ಓದಿ: ಕ್ರಾಂತಿಯ ಕಿಡಿ ಹೊತ್ತಿಸಿದವರು ಕಿಡಿಗೇಡಿಗಳಿಂದ ಹತ್ಯೆಯಾದ ಕಥೆ

ತಮಿಳನ್ ಟಿವಿಯ ಮುಖ್ಯ ವರದಿಗಾರ ಮತ್ತು ವರ್ಕಿಂಗ್ ಜರ್ನಲಿಸ್ಟ್ಸ್ ಯೂನಿಯನ್ ರಾಜ್ಯ ಅಧ್ಯಕ್ಷ ಸಗಾಯರಾಜ್, “ಭಾನುವಾರ ರಾತ್ರಿ, ಮೋಸಸ್ ಅವರು ತಮ್ಮ ಮನೆಯಿಂದ ಹೊರಡುತ್ತಿದ್ದರು. ಶೀಘ್ರದಲ್ಲೇ ಅವರ ಕೂಗು ಕೇಳಿಸಿ ಏನಾಯಿತು ಎಂದು ನೋಡಲು ಅವನ ತಂದೆ ತಕ್ಷಣವೇ ಧಾವಿಸಿದರು. ಕುಡಗೋಲುಗಳೊಂದಿಗಿನ ಇಬ್ಬರು ಮೋಸಸ್‌ ಮೇಲೆ ಆಕ್ರಮಣ ಮಾಡುತ್ತಿದ್ದರು. ನಂತರ ಅವರು ಆತನ ತಂದೆಯನ್ನು ನೋಡಿ ಓಡಿಹೋದರು” ಎಂದು ಹೇಳಿದರು.

ಈ ದಾಳಿಯಲ್ಲಿ, ಮೋಸಸ್‌ಗೆ ತಲೆ ಮತ್ತು ಕೈಗೆ ತೀವ್ರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಕ್ರೋಮ್‌ಪೇಟ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ತೀವ್ರ ಗಾಯಗಳು ಮತ್ತು ಅತಿಯಾದ ರಕ್ತಸ್ರಾವದಿಂದಾಗಿ ಅವರು ನಿಧನರಾದರು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

ಸ್ವತಃ ಪತ್ರಕರ್ತರೂ ಆಗಿರುವ ಮೋಸಸ್‌ ತಂದೆ ಜೆಸುದಾಸ್, “ನನ್ನ ಮಗ ಯಾವಾಗಲೂ ಈ ಪ್ರದೇಶದಲ್ಲಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದನು. ಈ ಹಿಂದೆ ಭೂ ಕಬಳಿಕೆಯ ಬಗ್ಗೆ ವರದಿ ಮಾಡಿದ್ದನು. ಅಂದಿನಿಂದ ನಾವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಕಳೆದ ವಾರ ಅದೇ ಗುಂಪು ಗಾಂಜಾ ಮಾರಾಟದಲ್ಲಿ ಭಾಗಿಯಾಗಿದೆ ಎಂದು ವರದಿ ಮಾಡಿದ್ದನು. ಹಾಗಾಗಿ ಅವರು ನಮಗೆ ಬೆದರಿಕೆಗಳನ್ನು ಒಡ್ಡಿದ್ದರು. ನಂತರ ಪೊಲೀಸ್ ಠಾಣೆಗೆ ಹೋಗಿ ಬೆದರಿಕೆಗಳ ಬಗ್ಗೆ ತಿಳಿಸಿದ್ದನು. ಆದರೆ ಲಿಖಿತವಾಗಿ ದೂರು ನೀಡಿರಲಿಲ್ಲ. ಅದುವೇ ಈ ದಾಳಿಗೆ ಕಾರಣವಾಯಿತು” ಎಂದು ಹೇಳಿದರು.

ಆದರೆ ಪೊಲೀಸರು ಕ್ರಮ ಕೈಗೊಂಡು ವರದಿಗಾರನಿಗೆ ರಕ್ಷಣೆ ನೀಡಬೇಕಾಗಿತ್ತು ಎಂದು ಸಗಾಯರಾಜ್ ಹೇಳಿದ್ದಾರೆ. ತಕ್ಷಣದ ರಕ್ತಸಂಬಂಧಿಗಳಿಗೆ ಸರ್ಕಾರವು 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಕೆಲಸವನ್ನು ನೀಡಬೇಕು. ಪತ್ರಕರ್ತರ ರಕ್ಷಣೆಗಾಗಿ ತಮಿಳುನಾಡು ಸರ್ಕಾರ ಕಾನೂನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

ಏತನ್ಮಧ್ಯೆ, ಸೋಮಂಗಲಂ ಪೊಲೀಸರು ದೂರು ದಾಖಲಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮೋಸಸ್ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮಹಿಳಾ ಪತ್ರಕರ್ತರ ವೇದಿಕೆ ಹೀಗೆ ಹೇಳಿದೆ: “ಗಾಂಜಾ ಮಾರಾಟ ಮತ್ತು ಭೂ ಅತಿಕ್ರಮಣವನ್ನು ವರದಿ ಮಾಡಿದ್ದ ವರದಿಗಾರ ಮೋಸಸ್ ಅವರನ್ನು ಪುದು ನೆಲ್ಲೂರಿನಲ್ಲಿ ಹತ್ಯೆ ಮಾಡಲಾಗಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ನಾವು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಕೋರುತ್ತೇವೆ. ಈ ಕೊಲೆಗೆ ಪೊಲೀಸರೇ ಕಾರಣ. ಏಕೆಂದರೆ ಮೋಸೆಸ್ ತನ್ನ ಜೀವಕ್ಕೆ ಬೆದರಿಕೆ ಇದೆ ಎಂದು ದೂರು ನೀಡಿದಾಗ್ಯೂ ಪೊಲೀಸ್ ಇಲಾಖೆಯಿಂದ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ತನಿಖೆ ತೆರೆದಿಡುವ ಚರ್ಚೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...