Homeಮುಖಪುಟತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳುನಾಡು: ಅನ್ಯಾಯಗಳ ವಿರುದ್ಧ ವರದಿ ಮಾಡಿದ ಪತ್ರಕರ್ತನ ಬರ್ಬರ ಹತ್ಯೆ!

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು.

- Advertisement -
- Advertisement -

ತಮಿಳುನಾಡಿನ ಕುಂಡ್ರತ್ತೂರ್‌‌ನಲ್ಲಿ ಅಕ್ರಮ ಸರ್ಕಾರಿ ಜಮೀನಿನ ಮಾರಾಟ ಮತ್ತು ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದ ತಮಿಳನ್ ಟಿವಿ ಚಾನೆಲ್‌ನ 29 ವರ್ಷದ ವರದಿಗಾರನನ್ನು ಗುಂಪೊಂದು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಿದೆ.

ಕುಂಡ್ರತ್ತೂರ್‌‌ ಚೆನ್ನೈನ ಹೊರವಲಯದಲ್ಲಿರುವ ಉಪನಗರವಾಗಿದ್ದು, ಕಾಂಚೀಪುರಂ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಪುದು ನೆಲ್ಲೂರು ಗ್ರಾಮದಲ್ಲಿ ವಾಸಿಸುತ್ತಿದ್ದ ಮೋಸಸ್ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತಿದ್ದರು. ಆಗಿನಿಂದಲೇ ಮಾರಣಾಂತಿಕ ಬೆದರಿಕೆಗಳನ್ನು ಎದುರಿಸುತ್ತಿದ್ದ ಮೋಸಸ್‌ ಅವರನ್ನು ಭಾನುವಾರ ಇಬ್ಬರು ದುಷ್ಕರ್ಮಿಗಳು ಕುಡಗೋಲುಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ಹೇಳುವ ಪತ್ರಕರ್ತರನ್ನು ತುಳಿಯುತ್ತಿರುವ ಪ್ರಭುತ್ವಗಳು

ಇದರ ಬೆನ್ನಲ್ಲೇ, ಸಾವಿಗೆ ಸಂಬಂಧಿಸಿದಂತೆ ಅಕ್ರಮ ಭೂ ಮಾರಾಟ ಮತ್ತು ಗಾಂಜಾ ಮಾರಾಟದಲ್ಲಿ ಭಾಗಿಯಾಗಿರುವ ಗುಂಪಿನ ನಾಲ್ಕು ಜನರನ್ನು ಸೋಮಂಗಲಂ ಪೊಲೀಸರು ಬಂಧಿಸಿದ್ದಾರೆ.

ತಮಿಳನ್ ಚಾನೆಲ್‌ನಲ್ಲಿ ಸಿರಪ್ಪು ಪಾರ್ವೈ (ವಿಶೇಷ ಗಮನ) ಕಾರ್ಯಕ್ರಮದ ಮೂಲಕ ಮೋಸಸ್ ಈ ಪ್ರದೇಶದಲ್ಲಿನ ಸಮಾಜ ವಿರೋಧಿ ಅಂಶಗಳ ರಹಸ್ಯ ಕಾರ್ಯಾಚರಣೆಯನ್ನು ಬಹಿರಂಗಪಡಿಸುತ್ತಿದ್ದರು. ಕಳೆದ ವಾರ, ಈ ಪ್ರದೇಶದ ಗುಂಪೊಂದು ನಡೆಸುತ್ತಿದ್ದ ಗಾಂಜಾ ಮಾರಾಟದ ಬಗ್ಗೆ ವರದಿ ಮಾಡಿದ್ದಕ್ಕಾಗಿ ಆ ಗುಂಪಿನಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದರು.

ಇದನ್ನೂ ಓದಿ: ಕ್ರಾಂತಿಯ ಕಿಡಿ ಹೊತ್ತಿಸಿದವರು ಕಿಡಿಗೇಡಿಗಳಿಂದ ಹತ್ಯೆಯಾದ ಕಥೆ

ತಮಿಳನ್ ಟಿವಿಯ ಮುಖ್ಯ ವರದಿಗಾರ ಮತ್ತು ವರ್ಕಿಂಗ್ ಜರ್ನಲಿಸ್ಟ್ಸ್ ಯೂನಿಯನ್ ರಾಜ್ಯ ಅಧ್ಯಕ್ಷ ಸಗಾಯರಾಜ್, “ಭಾನುವಾರ ರಾತ್ರಿ, ಮೋಸಸ್ ಅವರು ತಮ್ಮ ಮನೆಯಿಂದ ಹೊರಡುತ್ತಿದ್ದರು. ಶೀಘ್ರದಲ್ಲೇ ಅವರ ಕೂಗು ಕೇಳಿಸಿ ಏನಾಯಿತು ಎಂದು ನೋಡಲು ಅವನ ತಂದೆ ತಕ್ಷಣವೇ ಧಾವಿಸಿದರು. ಕುಡಗೋಲುಗಳೊಂದಿಗಿನ ಇಬ್ಬರು ಮೋಸಸ್‌ ಮೇಲೆ ಆಕ್ರಮಣ ಮಾಡುತ್ತಿದ್ದರು. ನಂತರ ಅವರು ಆತನ ತಂದೆಯನ್ನು ನೋಡಿ ಓಡಿಹೋದರು” ಎಂದು ಹೇಳಿದರು.

ಈ ದಾಳಿಯಲ್ಲಿ, ಮೋಸಸ್‌ಗೆ ತಲೆ ಮತ್ತು ಕೈಗೆ ತೀವ್ರವಾದ ಗಾಯಗಳಾಗಿದ್ದು, ತಕ್ಷಣ ಅವರನ್ನು ಕ್ರೋಮ್‌ಪೇಟ್ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ತೀವ್ರ ಗಾಯಗಳು ಮತ್ತು ಅತಿಯಾದ ರಕ್ತಸ್ರಾವದಿಂದಾಗಿ ಅವರು ನಿಧನರಾದರು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಇದನ್ನೂ ಓದಿ: ರಣಹದ್ದು ಮತ್ತು ಪತ್ರಕರ್ತರು : ತಣ್ಣನೆ ಹೆಸರಿನ ಪುಣ್ಯಾತ್ಮ ಹಸೀ ಸುಳ್ಳನ್ನ ಸುಡು ಬಿಸಲಿನ್ಯಾಗ ಹೇಳಿದ್ದು…

ಸ್ವತಃ ಪತ್ರಕರ್ತರೂ ಆಗಿರುವ ಮೋಸಸ್‌ ತಂದೆ ಜೆಸುದಾಸ್, “ನನ್ನ ಮಗ ಯಾವಾಗಲೂ ಈ ಪ್ರದೇಶದಲ್ಲಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದನು. ಈ ಹಿಂದೆ ಭೂ ಕಬಳಿಕೆಯ ಬಗ್ಗೆ ವರದಿ ಮಾಡಿದ್ದನು. ಅಂದಿನಿಂದ ನಾವು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಕಳೆದ ವಾರ ಅದೇ ಗುಂಪು ಗಾಂಜಾ ಮಾರಾಟದಲ್ಲಿ ಭಾಗಿಯಾಗಿದೆ ಎಂದು ವರದಿ ಮಾಡಿದ್ದನು. ಹಾಗಾಗಿ ಅವರು ನಮಗೆ ಬೆದರಿಕೆಗಳನ್ನು ಒಡ್ಡಿದ್ದರು. ನಂತರ ಪೊಲೀಸ್ ಠಾಣೆಗೆ ಹೋಗಿ ಬೆದರಿಕೆಗಳ ಬಗ್ಗೆ ತಿಳಿಸಿದ್ದನು. ಆದರೆ ಲಿಖಿತವಾಗಿ ದೂರು ನೀಡಿರಲಿಲ್ಲ. ಅದುವೇ ಈ ದಾಳಿಗೆ ಕಾರಣವಾಯಿತು” ಎಂದು ಹೇಳಿದರು.

ಆದರೆ ಪೊಲೀಸರು ಕ್ರಮ ಕೈಗೊಂಡು ವರದಿಗಾರನಿಗೆ ರಕ್ಷಣೆ ನೀಡಬೇಕಾಗಿತ್ತು ಎಂದು ಸಗಾಯರಾಜ್ ಹೇಳಿದ್ದಾರೆ. ತಕ್ಷಣದ ರಕ್ತಸಂಬಂಧಿಗಳಿಗೆ ಸರ್ಕಾರವು 25 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಕೆಲಸವನ್ನು ನೀಡಬೇಕು. ಪತ್ರಕರ್ತರ ರಕ್ಷಣೆಗಾಗಿ ತಮಿಳುನಾಡು ಸರ್ಕಾರ ಕಾನೂನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಪತ್ರಕರ್ತರ ಮೇಲೆ ಸುಳ್ಳು ಆರೋಪ, ಬಂಧನ ಖಂಡನೀಯ – ಕೆ.ದೊರೈರಾಜ್‌

ಏತನ್ಮಧ್ಯೆ, ಸೋಮಂಗಲಂ ಪೊಲೀಸರು ದೂರು ದಾಖಲಿಸಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಮೋಸಸ್ ಹತ್ಯೆಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಮಹಿಳಾ ಪತ್ರಕರ್ತರ ವೇದಿಕೆ ಹೀಗೆ ಹೇಳಿದೆ: “ಗಾಂಜಾ ಮಾರಾಟ ಮತ್ತು ಭೂ ಅತಿಕ್ರಮಣವನ್ನು ವರದಿ ಮಾಡಿದ್ದ ವರದಿಗಾರ ಮೋಸಸ್ ಅವರನ್ನು ಪುದು ನೆಲ್ಲೂರಿನಲ್ಲಿ ಹತ್ಯೆ ಮಾಡಲಾಗಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ನಾವು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಕೋರುತ್ತೇವೆ. ಈ ಕೊಲೆಗೆ ಪೊಲೀಸರೇ ಕಾರಣ. ಏಕೆಂದರೆ ಮೋಸೆಸ್ ತನ್ನ ಜೀವಕ್ಕೆ ಬೆದರಿಕೆ ಇದೆ ಎಂದು ದೂರು ನೀಡಿದಾಗ್ಯೂ ಪೊಲೀಸ್ ಇಲಾಖೆಯಿಂದ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ತನಿಖೆ ತೆರೆದಿಡುವ ಚರ್ಚೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....