Homeದಲಿತ್ ಫೈಲ್ಸ್ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

- Advertisement -
- Advertisement -

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

” ನಾನು ದಲಿತ ಸಮುದಾಯ ಎಂಬ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಲಾಗಿದೆ” ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಇತ್ತೀಚೆಗೆ ಕರೂರಿನಲ್ಲಿ ಜಿಲ್ಲಾಧಿಕಾರಿ ಮತ್ತು ಎಸ್‌ಪಿಗೆ ಅರ್ಜಿ ದೂರು ನೀಡಿದ್ದು, “ಇದು ಜಾತಿ ಆಧಾರಿತ ತಾರತಮ್ಯ” ಎಂದು ದೂರಿದ್ದಾರೆ.

ತೊಗಮಲೈ ಒಕ್ಕೂಟದ ಚಿನ್ನ ರೆಡ್ಡಿಪಟ್ಟಿಯ ನಿವಾಸಿ ಆರ್. ನಿರೋಷಾ ಅವರನ್ನು ಸೆಪ್ಟೆಂಬರ್ 10, 2025 ರಂದು ಶಾಲೆಯಲ್ಲಿ ಹೊಸ ಯೋಜನೆ ಪ್ರಾರಂಭಿಸಿದಾಗ ಸಿಎಮ್‌ಬಿಎಸ್ ಅಡಿಯಲ್ಲಿ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ ಅಡುಗೆಯವರಾಗಿ ನೇಮಿಸಲಾಯಿತು. ಶಾಲೆಯಲ್ಲಿ ಈ ಯೋಜನೆಯಡಿ ಕೆಲಸ ಮಾಡುತ್ತಿರುವ ಇಬ್ಬರು ಅಡುಗೆಯವರಲ್ಲಿ ನಿರೋಷಾ ಕೂಡ ಒಬ್ಬರಾಗಿದ್ದರು.

ಈ ಬಗ್ಗೆ ಮಾತನಾಡಿರುವ ನಿರೋಷಾ, “ಈ ಯೋಜನೆಯ ಲಾಭ ಪಡೆಯುತ್ತಿರುವ ಕೆಲವು ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳಿಗೆ ನಾನು ಅಡುಗೆ ಮಾಡುವುದನ್ನು ವಿರೋಧಿಸಿದ್ದಾರೆ. ಡಿಸೆಂಬರ್ 16 ರಂದು, ಮುಖ್ಯೋಪಾಧ್ಯಾಯಿನಿ ನನಗೆ ಕೆಲಸ ಬಿಡುವಂತೆ ಹೇಳಿದರು. ಪೋಷಕರು ತಮ್ಮ ಮಕ್ಕಳನ್ನು ಊಟಕ್ಕೆ ಕಳುಹಿಸುತ್ತಿಲ್ಲ ಎಂದು ಶಿಕ್ಷಕಿ ಕಾರಣ ನೀಡಿದ್ದಾರೆ” ಎಂದು ಹೇಳಿದರು.

ಮರುದಿನ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಶಾಲೆಗೆ ತೆರಳಿದಾಗ, ನನ್ನ ಜಾಗದಲ್ಲಿ ಮತ್ತೊಬ್ಬ ಮಹಿಳೆ ಕೆಲಸ ಮಾಡುತ್ತಿರುವುದು ಕಂಡುಬಂದಿತು ಎಂದು ಅವರು ಹೇಳಿದರು. ಹೊಸದಾಗಿ ನೇಮಕವಾದ ಮಹಿಳೆ, ತಾನು ಮೇಲ್ಜಾತಿ ಎಂದು ಹೇಳಿಕೊಂಡರು. ನಂತರ ನಾನು ಬ್ಲಾಕ್ ಮಿಷನ್ ಮ್ಯಾನೇಜರ್ (ಬಿಎಂಎಂ) ಮಹಲಿರ್ ತಿಟ್ಟಮ್ ಅವರನ್ನು ಸಂಪರ್ಕಿಸಿದರು, ಅವರು ಮುಖ್ಯೋಪಾಧ್ಯಾಯಿನಿ ತೆಗೆದುಕೊಂಡ ನಿಲುವನ್ನು ಪುನರುಚ್ಚರಿಸಿದರು” ಎಂದರು.

“ಡಿಸೆಂಬರ್ 18 ರಂದು, ನಿರೋಷಾ ತೋಗಮಲೈ ಪೊಲೀಸ್ ಠಾಣೆಯಲ್ಲಿ ಸಿಎಸ್ಆರ್ ದೂರು ಸಲ್ಲಿಸಿದರು. ಅದರಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಭಾನುಮತಿಯವರ ಒತ್ತಡದ ಮೇರೆಗೆ ತೋಗಮಲೈ ಒಕ್ಕೂಟದ ಬಿಎಂಎಂ ಕರ್ತವ್ಯಕ್ಕೆ ಹಾಜರಾಗುವುದನ್ನು ನಿಲ್ಲಿಸುವಂತೆ ಕೇಳಿಕೊಂಡಿದೆ” ಎಂದು ಹೇಳಲಾಗಿತ್ತು.

ವಿಚಾರಣೆಯ ಸಮಯದಲ್ಲಿ, “ನಿರೋಷಾ ಅವರನ್ನು ಸೇವೆಯಿಂದ ತೆಗೆದುಹಾಕಲಾಗಿಲ್ಲ. ಅವರು ಕೆಲ ದಿನಗಳಿಂದ ಕೆಲಸಕ್ಕೆ ಗೈರುಹಾಜರಾಗಿದ್ದಾರೆ” ಎಂದು ಬಿಎಂಎಂ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...