Homeಮುಖಪುಟತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

ತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

- Advertisement -
- Advertisement -

ಬಾಲ್ಯ ವಿವಾಹಕ್ಕಾಗಿ ವಯಸ್ಸು ಹೆಚ್ಚಿಸುವುದು ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯರ ಕುಟುಂಬಗಳು ಆಧಾರ್ ಕಾರ್ಡ್ ವಿವರಗಳನ್ನು ತಿರುಚಿರುವ ಕನಿಷ್ಠ ಆರು ಪ್ರಕರಣಗಳನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿಹಲವು ಪ್ರಕರಣಗಳು ಕೆಲಮಂಗಲಂ ಬ್ಲಾಕ್‌ನಿಂದ ವರದಿಯಾಗಿವೆ.

ಗರ್ಭಿಣಿಯರನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಆರೋಗ್ಯ ಇಲಾಖೆಯು ಬಳಸುವ ಡಿಜಿಟಲ್ ಟ್ರ್ಯಾಕಿಂಗ್ ವೇದಿಕೆಯಾದ ಪ್ರೆಗ್ನೆನ್ಸಿ ಮತ್ತು ಇನ್‌ಫೆಂಟ್ ಕೋಹಾರ್ಟ್ ಮಾನಿಟರಿಂಗ್ ಮತ್ತು ಮೌಲ್ಯಮಾಪನ (PICME) ವ್ಯವಸ್ಥೆಯ ಮೂಲಕ ಪೋಷಕರು ಎಸಗಿರುವ ವಂಚನೆ ಬೆಳಕಿಗೆ ಬಂದಿದೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳು ದಿನನಿತ್ಯದ ಮಾಃಇತಿ ನಮೂದು ಮಾಡುವ ಸಮಯದಲ್ಲಿ, ಹುಡುಗಿಯರ ಆಧಾರ್-ಲಿಂಕ್ಡ್ ದಾಖಲೆಗಳು ಮತ್ತು ಅವರು ಹೊಂದಿರುವ ಭೌತಿಕ ಆಧಾರ್ ಕಾರ್ಡ್‌ಗಳ ನಡುವಿನ ವ್ಯತ್ಯಾಸಗಳನ್ನು ಕಂಡುಕೊಂಡಿದ್ದಾರೆ.

ಒಂದು ಪ್ರಕರಣದಲ್ಲಿ, 29 ವರ್ಷದ ವ್ಯಕ್ತಿಯನ್ನು ಮದುವೆಯಾದ 14 ವರ್ಷದ ಬಾಲಕಿಯೊಬ್ಬಳು ಮೇ ಅಂತ್ಯದಲ್ಲಿ ತನ್ನ ಗರ್ಭಧಾರಣೆಯನ್ನು ನೋಂದಾಯಿಸಲು ನಾಗಮಂಗಲಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದಳು. ಆಕೆಯ ಆಧಾರ್ ಕಾರ್ಡ್‌ನಲ್ಲಿ ಆಕೆಯ ವಯಸ್ಸು 20 ಎಂದು ನಮೂದಿಸಲಾಗಿದ್ದರೂ, ಪಿಐಸಿಎಂಇ ದಾಖಲೆಗಳ ಪ್ರಕಾರ ಆಕೆಯ ನಿಜವಾದ ವಯಸ್ಸು 14 ಎಂದು ತೋರಿಸಿದೆ. ತನಿಖೆಯ ನಂತರ, ಬಾಲಕಿ ಮತ್ತು ಆಕೆಯ ಪತಿ ಬಾಲ್ಯವಿವಾಹ ಕಾನೂನುಗಳ ಅಡಿ ಕ್ರಮದಿಂದ ತಪ್ಪಿಸಿಕೊಳ್ಳಲು ಡೆಂಕಣಿಕೋಟೆಯಲ್ಲಿರುವ ಸ್ಥಳೀಯ ಬ್ರೌಸಿಂಗ್ ಕೇಂದ್ರದಲ್ಲಿ ಆಧಾರ್ ಜನ್ಮ ದಿನಾಂಕವನ್ನು 200 ರೂ ಕೊಟ್ಟು ಬದಲಾಯಿಸಿದ್ದರು ಎಂದು ಒಪ್ಪಿಕೊಂಡರು.

ಕೂಡಲೇ ಅಧಿಕಾರಿಗಳು ಬಾಲಕಿಯನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅಪಘಾತ ನೋಂದಣಿ (ಎಆರ್‌) ನಮೂದು ಮಾಡಿಸಿದ್ದಾರೆ. ಈ ಸಮಸ್ಯೆಯನ್ನು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಗೆ ವರದಿ ಮಾಡಲಾಯಿತು. ಹೆಚ್ಚಿನ ವಿಚಾರಣೆ ಬಳಿಕ, ರಾಯಕೊಟ್ಟೈ ಮತ್ತು ಡೆಂಕಣಿಕೋಟೆಯಲ್ಲಿರುವ ವಿವಿಧ ಬ್ರೌಸಿಂಗ್ ಕೇಂದ್ರಗಳು, ಫೋಟೋ ಸ್ಟುಡಿಯೋಗಳಲ್ಲಿ 500 ರೂ.ಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಘಾತಕಾರಿಯಾಗಿ, ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ವಂಚನೆಗೆ ಸಹಕರಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲಮಂಗಲಂ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಸಿ. ರಾಜೇಶ್ ಕುಮಾರ್ ಮಾತನಾಡಿ, ಮಾಹಿತಿ ತಿರುಚುತ್ತಿವೆ ಎಂದು ಗುರುತಿಸಲಾದ ಬ್ರೌಸಿಂಗ್ ಕೇಂದ್ರಗಳು ಮತ್ತು ಸ್ಟುಡಿಯೋಗಳನ್ನು ನಮ್ಮ ತಂಡವು ಪರಿಶೀಲಿಸುತ್ತದೆ. ಗ್ರಾಮ ಆರೋಗ್ಯ ದಾದಿಯರು ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಸಹಾಯ ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಆಧಾರ್ ತಿರುಚುವಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಬೆಟ್ಟಮುಗಿಲಲಂ ಪಂಚಾಯತ್‌ನ ಆರೋಗ್ಯ ಕಾರ್ಯಕರ್ತರನ್ನು ಈಗಾಗಲೇ ವಜಾಗೊಳಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಿ. ರಮೇಶ್ ಕುಮಾರ್ ಮಾತನಾಡಿ, “ಇಂತಹ ಪ್ರಕರಣಗಳನ್ನು ವರದಿ ಮಾಡಲು ಎಲ್ಲ ಸಿಬ್ಬಂದಿಗೆ ಜಾಗೃತಿ ಮೂಡಿಸಲಾಗುವುದು. ಯಾವುದೇ ರೂಪದಲ್ಲಿ ಬಾಲ್ಯವಿವಾಹವನ್ನು ಬೆಂಬಲಿಸುವುದನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದರು.

ಏಪ್ರಿಲ್ 2024 ರಿಂದ ಮಾರ್ಚ್ 2025 ರವರೆಗೆ, ಕೃಷ್ಣಗಿರಿ ಜಿಲ್ಲೆಯಲ್ಲಿ ಒಟ್ಟು 545 ಹದಿಹರೆಯದ ಗರ್ಭಧಾರಣೆಯ ವರದಿಯಾಗಿದೆ. ಶೂಲಗಿರಿ (81), ಕೃಷ್ಣಗಿರಿ ಗ್ರಾಮೀಣ (72) ಮತ್ತು ಕೆಲಮಂಗಲಂ (66) ನಲ್ಲಿ ಅತಿ ಹೆಚ್ಚು ಸಂಖ್ಯೆಗಳು ದಾಖಲಾಗಿವೆ.

ಆಧಾರ್ ತಿರುಚುವಿಕೆ ಮತ್ತು ಬಾಲ್ಯವಿವಾಹದಲ್ಲಿ ಭಾಗಿಯಾಗಿರುವವರ ವಿರುದ್ಧ ತನಿಖೆ ನಡೆಸಲು ಮತ್ತು ಕ್ರಮ ಕೈಗೊಳ್ಳಲು ವಿಶೇಷ ತಂಡವನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ. ದಿನೇಶ್ ಹೇಳಿದರು.

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...