Homeಮುಖಪುಟತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

ತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

- Advertisement -
- Advertisement -

ಬಾಲ್ಯ ವಿವಾಹಕ್ಕಾಗಿ ವಯಸ್ಸು ಹೆಚ್ಚಿಸುವುದು ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯರ ಕುಟುಂಬಗಳು ಆಧಾರ್ ಕಾರ್ಡ್ ವಿವರಗಳನ್ನು ತಿರುಚಿರುವ ಕನಿಷ್ಠ ಆರು ಪ್ರಕರಣಗಳನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿಹಲವು ಪ್ರಕರಣಗಳು ಕೆಲಮಂಗಲಂ ಬ್ಲಾಕ್‌ನಿಂದ ವರದಿಯಾಗಿವೆ.

ಗರ್ಭಿಣಿಯರನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಆರೋಗ್ಯ ಇಲಾಖೆಯು ಬಳಸುವ ಡಿಜಿಟಲ್ ಟ್ರ್ಯಾಕಿಂಗ್ ವೇದಿಕೆಯಾದ ಪ್ರೆಗ್ನೆನ್ಸಿ ಮತ್ತು ಇನ್‌ಫೆಂಟ್ ಕೋಹಾರ್ಟ್ ಮಾನಿಟರಿಂಗ್ ಮತ್ತು ಮೌಲ್ಯಮಾಪನ (PICME) ವ್ಯವಸ್ಥೆಯ ಮೂಲಕ ಪೋಷಕರು ಎಸಗಿರುವ ವಂಚನೆ ಬೆಳಕಿಗೆ ಬಂದಿದೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳು ದಿನನಿತ್ಯದ ಮಾಃಇತಿ ನಮೂದು ಮಾಡುವ ಸಮಯದಲ್ಲಿ, ಹುಡುಗಿಯರ ಆಧಾರ್-ಲಿಂಕ್ಡ್ ದಾಖಲೆಗಳು ಮತ್ತು ಅವರು ಹೊಂದಿರುವ ಭೌತಿಕ ಆಧಾರ್ ಕಾರ್ಡ್‌ಗಳ ನಡುವಿನ ವ್ಯತ್ಯಾಸಗಳನ್ನು ಕಂಡುಕೊಂಡಿದ್ದಾರೆ.

ಒಂದು ಪ್ರಕರಣದಲ್ಲಿ, 29 ವರ್ಷದ ವ್ಯಕ್ತಿಯನ್ನು ಮದುವೆಯಾದ 14 ವರ್ಷದ ಬಾಲಕಿಯೊಬ್ಬಳು ಮೇ ಅಂತ್ಯದಲ್ಲಿ ತನ್ನ ಗರ್ಭಧಾರಣೆಯನ್ನು ನೋಂದಾಯಿಸಲು ನಾಗಮಂಗಲಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದಳು. ಆಕೆಯ ಆಧಾರ್ ಕಾರ್ಡ್‌ನಲ್ಲಿ ಆಕೆಯ ವಯಸ್ಸು 20 ಎಂದು ನಮೂದಿಸಲಾಗಿದ್ದರೂ, ಪಿಐಸಿಎಂಇ ದಾಖಲೆಗಳ ಪ್ರಕಾರ ಆಕೆಯ ನಿಜವಾದ ವಯಸ್ಸು 14 ಎಂದು ತೋರಿಸಿದೆ. ತನಿಖೆಯ ನಂತರ, ಬಾಲಕಿ ಮತ್ತು ಆಕೆಯ ಪತಿ ಬಾಲ್ಯವಿವಾಹ ಕಾನೂನುಗಳ ಅಡಿ ಕ್ರಮದಿಂದ ತಪ್ಪಿಸಿಕೊಳ್ಳಲು ಡೆಂಕಣಿಕೋಟೆಯಲ್ಲಿರುವ ಸ್ಥಳೀಯ ಬ್ರೌಸಿಂಗ್ ಕೇಂದ್ರದಲ್ಲಿ ಆಧಾರ್ ಜನ್ಮ ದಿನಾಂಕವನ್ನು 200 ರೂ ಕೊಟ್ಟು ಬದಲಾಯಿಸಿದ್ದರು ಎಂದು ಒಪ್ಪಿಕೊಂಡರು.

ಕೂಡಲೇ ಅಧಿಕಾರಿಗಳು ಬಾಲಕಿಯನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅಪಘಾತ ನೋಂದಣಿ (ಎಆರ್‌) ನಮೂದು ಮಾಡಿಸಿದ್ದಾರೆ. ಈ ಸಮಸ್ಯೆಯನ್ನು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಗೆ ವರದಿ ಮಾಡಲಾಯಿತು. ಹೆಚ್ಚಿನ ವಿಚಾರಣೆ ಬಳಿಕ, ರಾಯಕೊಟ್ಟೈ ಮತ್ತು ಡೆಂಕಣಿಕೋಟೆಯಲ್ಲಿರುವ ವಿವಿಧ ಬ್ರೌಸಿಂಗ್ ಕೇಂದ್ರಗಳು, ಫೋಟೋ ಸ್ಟುಡಿಯೋಗಳಲ್ಲಿ 500 ರೂ.ಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಘಾತಕಾರಿಯಾಗಿ, ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ವಂಚನೆಗೆ ಸಹಕರಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲಮಂಗಲಂ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಸಿ. ರಾಜೇಶ್ ಕುಮಾರ್ ಮಾತನಾಡಿ, ಮಾಹಿತಿ ತಿರುಚುತ್ತಿವೆ ಎಂದು ಗುರುತಿಸಲಾದ ಬ್ರೌಸಿಂಗ್ ಕೇಂದ್ರಗಳು ಮತ್ತು ಸ್ಟುಡಿಯೋಗಳನ್ನು ನಮ್ಮ ತಂಡವು ಪರಿಶೀಲಿಸುತ್ತದೆ. ಗ್ರಾಮ ಆರೋಗ್ಯ ದಾದಿಯರು ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಸಹಾಯ ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಆಧಾರ್ ತಿರುಚುವಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಬೆಟ್ಟಮುಗಿಲಲಂ ಪಂಚಾಯತ್‌ನ ಆರೋಗ್ಯ ಕಾರ್ಯಕರ್ತರನ್ನು ಈಗಾಗಲೇ ವಜಾಗೊಳಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಿ. ರಮೇಶ್ ಕುಮಾರ್ ಮಾತನಾಡಿ, “ಇಂತಹ ಪ್ರಕರಣಗಳನ್ನು ವರದಿ ಮಾಡಲು ಎಲ್ಲ ಸಿಬ್ಬಂದಿಗೆ ಜಾಗೃತಿ ಮೂಡಿಸಲಾಗುವುದು. ಯಾವುದೇ ರೂಪದಲ್ಲಿ ಬಾಲ್ಯವಿವಾಹವನ್ನು ಬೆಂಬಲಿಸುವುದನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದರು.

ಏಪ್ರಿಲ್ 2024 ರಿಂದ ಮಾರ್ಚ್ 2025 ರವರೆಗೆ, ಕೃಷ್ಣಗಿರಿ ಜಿಲ್ಲೆಯಲ್ಲಿ ಒಟ್ಟು 545 ಹದಿಹರೆಯದ ಗರ್ಭಧಾರಣೆಯ ವರದಿಯಾಗಿದೆ. ಶೂಲಗಿರಿ (81), ಕೃಷ್ಣಗಿರಿ ಗ್ರಾಮೀಣ (72) ಮತ್ತು ಕೆಲಮಂಗಲಂ (66) ನಲ್ಲಿ ಅತಿ ಹೆಚ್ಚು ಸಂಖ್ಯೆಗಳು ದಾಖಲಾಗಿವೆ.

ಆಧಾರ್ ತಿರುಚುವಿಕೆ ಮತ್ತು ಬಾಲ್ಯವಿವಾಹದಲ್ಲಿ ಭಾಗಿಯಾಗಿರುವವರ ವಿರುದ್ಧ ತನಿಖೆ ನಡೆಸಲು ಮತ್ತು ಕ್ರಮ ಕೈಗೊಳ್ಳಲು ವಿಶೇಷ ತಂಡವನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ. ದಿನೇಶ್ ಹೇಳಿದರು.

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...