Homeಮುಖಪುಟತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

ತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

- Advertisement -
- Advertisement -

ಬಾಲ್ಯ ವಿವಾಹಕ್ಕಾಗಿ ವಯಸ್ಸು ಹೆಚ್ಚಿಸುವುದು ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯರ ಕುಟುಂಬಗಳು ಆಧಾರ್ ಕಾರ್ಡ್ ವಿವರಗಳನ್ನು ತಿರುಚಿರುವ ಕನಿಷ್ಠ ಆರು ಪ್ರಕರಣಗಳನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿಹಲವು ಪ್ರಕರಣಗಳು ಕೆಲಮಂಗಲಂ ಬ್ಲಾಕ್‌ನಿಂದ ವರದಿಯಾಗಿವೆ.

ಗರ್ಭಿಣಿಯರನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಆರೋಗ್ಯ ಇಲಾಖೆಯು ಬಳಸುವ ಡಿಜಿಟಲ್ ಟ್ರ್ಯಾಕಿಂಗ್ ವೇದಿಕೆಯಾದ ಪ್ರೆಗ್ನೆನ್ಸಿ ಮತ್ತು ಇನ್‌ಫೆಂಟ್ ಕೋಹಾರ್ಟ್ ಮಾನಿಟರಿಂಗ್ ಮತ್ತು ಮೌಲ್ಯಮಾಪನ (PICME) ವ್ಯವಸ್ಥೆಯ ಮೂಲಕ ಪೋಷಕರು ಎಸಗಿರುವ ವಂಚನೆ ಬೆಳಕಿಗೆ ಬಂದಿದೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳು ದಿನನಿತ್ಯದ ಮಾಃಇತಿ ನಮೂದು ಮಾಡುವ ಸಮಯದಲ್ಲಿ, ಹುಡುಗಿಯರ ಆಧಾರ್-ಲಿಂಕ್ಡ್ ದಾಖಲೆಗಳು ಮತ್ತು ಅವರು ಹೊಂದಿರುವ ಭೌತಿಕ ಆಧಾರ್ ಕಾರ್ಡ್‌ಗಳ ನಡುವಿನ ವ್ಯತ್ಯಾಸಗಳನ್ನು ಕಂಡುಕೊಂಡಿದ್ದಾರೆ.

ಒಂದು ಪ್ರಕರಣದಲ್ಲಿ, 29 ವರ್ಷದ ವ್ಯಕ್ತಿಯನ್ನು ಮದುವೆಯಾದ 14 ವರ್ಷದ ಬಾಲಕಿಯೊಬ್ಬಳು ಮೇ ಅಂತ್ಯದಲ್ಲಿ ತನ್ನ ಗರ್ಭಧಾರಣೆಯನ್ನು ನೋಂದಾಯಿಸಲು ನಾಗಮಂಗಲಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದಳು. ಆಕೆಯ ಆಧಾರ್ ಕಾರ್ಡ್‌ನಲ್ಲಿ ಆಕೆಯ ವಯಸ್ಸು 20 ಎಂದು ನಮೂದಿಸಲಾಗಿದ್ದರೂ, ಪಿಐಸಿಎಂಇ ದಾಖಲೆಗಳ ಪ್ರಕಾರ ಆಕೆಯ ನಿಜವಾದ ವಯಸ್ಸು 14 ಎಂದು ತೋರಿಸಿದೆ. ತನಿಖೆಯ ನಂತರ, ಬಾಲಕಿ ಮತ್ತು ಆಕೆಯ ಪತಿ ಬಾಲ್ಯವಿವಾಹ ಕಾನೂನುಗಳ ಅಡಿ ಕ್ರಮದಿಂದ ತಪ್ಪಿಸಿಕೊಳ್ಳಲು ಡೆಂಕಣಿಕೋಟೆಯಲ್ಲಿರುವ ಸ್ಥಳೀಯ ಬ್ರೌಸಿಂಗ್ ಕೇಂದ್ರದಲ್ಲಿ ಆಧಾರ್ ಜನ್ಮ ದಿನಾಂಕವನ್ನು 200 ರೂ ಕೊಟ್ಟು ಬದಲಾಯಿಸಿದ್ದರು ಎಂದು ಒಪ್ಪಿಕೊಂಡರು.

ಕೂಡಲೇ ಅಧಿಕಾರಿಗಳು ಬಾಲಕಿಯನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅಪಘಾತ ನೋಂದಣಿ (ಎಆರ್‌) ನಮೂದು ಮಾಡಿಸಿದ್ದಾರೆ. ಈ ಸಮಸ್ಯೆಯನ್ನು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಗೆ ವರದಿ ಮಾಡಲಾಯಿತು. ಹೆಚ್ಚಿನ ವಿಚಾರಣೆ ಬಳಿಕ, ರಾಯಕೊಟ್ಟೈ ಮತ್ತು ಡೆಂಕಣಿಕೋಟೆಯಲ್ಲಿರುವ ವಿವಿಧ ಬ್ರೌಸಿಂಗ್ ಕೇಂದ್ರಗಳು, ಫೋಟೋ ಸ್ಟುಡಿಯೋಗಳಲ್ಲಿ 500 ರೂ.ಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಘಾತಕಾರಿಯಾಗಿ, ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ವಂಚನೆಗೆ ಸಹಕರಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲಮಂಗಲಂ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಸಿ. ರಾಜೇಶ್ ಕುಮಾರ್ ಮಾತನಾಡಿ, ಮಾಹಿತಿ ತಿರುಚುತ್ತಿವೆ ಎಂದು ಗುರುತಿಸಲಾದ ಬ್ರೌಸಿಂಗ್ ಕೇಂದ್ರಗಳು ಮತ್ತು ಸ್ಟುಡಿಯೋಗಳನ್ನು ನಮ್ಮ ತಂಡವು ಪರಿಶೀಲಿಸುತ್ತದೆ. ಗ್ರಾಮ ಆರೋಗ್ಯ ದಾದಿಯರು ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಸಹಾಯ ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಆಧಾರ್ ತಿರುಚುವಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಬೆಟ್ಟಮುಗಿಲಲಂ ಪಂಚಾಯತ್‌ನ ಆರೋಗ್ಯ ಕಾರ್ಯಕರ್ತರನ್ನು ಈಗಾಗಲೇ ವಜಾಗೊಳಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಿ. ರಮೇಶ್ ಕುಮಾರ್ ಮಾತನಾಡಿ, “ಇಂತಹ ಪ್ರಕರಣಗಳನ್ನು ವರದಿ ಮಾಡಲು ಎಲ್ಲ ಸಿಬ್ಬಂದಿಗೆ ಜಾಗೃತಿ ಮೂಡಿಸಲಾಗುವುದು. ಯಾವುದೇ ರೂಪದಲ್ಲಿ ಬಾಲ್ಯವಿವಾಹವನ್ನು ಬೆಂಬಲಿಸುವುದನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದರು.

ಏಪ್ರಿಲ್ 2024 ರಿಂದ ಮಾರ್ಚ್ 2025 ರವರೆಗೆ, ಕೃಷ್ಣಗಿರಿ ಜಿಲ್ಲೆಯಲ್ಲಿ ಒಟ್ಟು 545 ಹದಿಹರೆಯದ ಗರ್ಭಧಾರಣೆಯ ವರದಿಯಾಗಿದೆ. ಶೂಲಗಿರಿ (81), ಕೃಷ್ಣಗಿರಿ ಗ್ರಾಮೀಣ (72) ಮತ್ತು ಕೆಲಮಂಗಲಂ (66) ನಲ್ಲಿ ಅತಿ ಹೆಚ್ಚು ಸಂಖ್ಯೆಗಳು ದಾಖಲಾಗಿವೆ.

ಆಧಾರ್ ತಿರುಚುವಿಕೆ ಮತ್ತು ಬಾಲ್ಯವಿವಾಹದಲ್ಲಿ ಭಾಗಿಯಾಗಿರುವವರ ವಿರುದ್ಧ ತನಿಖೆ ನಡೆಸಲು ಮತ್ತು ಕ್ರಮ ಕೈಗೊಳ್ಳಲು ವಿಶೇಷ ತಂಡವನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ. ದಿನೇಶ್ ಹೇಳಿದರು.

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...