Homeಮುಖಪುಟತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

ತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

- Advertisement -
- Advertisement -

ಬಾಲ್ಯ ವಿವಾಹಕ್ಕಾಗಿ ವಯಸ್ಸು ಹೆಚ್ಚಿಸುವುದು ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯರ ಕುಟುಂಬಗಳು ಆಧಾರ್ ಕಾರ್ಡ್ ವಿವರಗಳನ್ನು ತಿರುಚಿರುವ ಕನಿಷ್ಠ ಆರು ಪ್ರಕರಣಗಳನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿಹಲವು ಪ್ರಕರಣಗಳು ಕೆಲಮಂಗಲಂ ಬ್ಲಾಕ್‌ನಿಂದ ವರದಿಯಾಗಿವೆ.

ಗರ್ಭಿಣಿಯರನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಆರೋಗ್ಯ ಇಲಾಖೆಯು ಬಳಸುವ ಡಿಜಿಟಲ್ ಟ್ರ್ಯಾಕಿಂಗ್ ವೇದಿಕೆಯಾದ ಪ್ರೆಗ್ನೆನ್ಸಿ ಮತ್ತು ಇನ್‌ಫೆಂಟ್ ಕೋಹಾರ್ಟ್ ಮಾನಿಟರಿಂಗ್ ಮತ್ತು ಮೌಲ್ಯಮಾಪನ (PICME) ವ್ಯವಸ್ಥೆಯ ಮೂಲಕ ಪೋಷಕರು ಎಸಗಿರುವ ವಂಚನೆ ಬೆಳಕಿಗೆ ಬಂದಿದೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳು ದಿನನಿತ್ಯದ ಮಾಃಇತಿ ನಮೂದು ಮಾಡುವ ಸಮಯದಲ್ಲಿ, ಹುಡುಗಿಯರ ಆಧಾರ್-ಲಿಂಕ್ಡ್ ದಾಖಲೆಗಳು ಮತ್ತು ಅವರು ಹೊಂದಿರುವ ಭೌತಿಕ ಆಧಾರ್ ಕಾರ್ಡ್‌ಗಳ ನಡುವಿನ ವ್ಯತ್ಯಾಸಗಳನ್ನು ಕಂಡುಕೊಂಡಿದ್ದಾರೆ.

ಒಂದು ಪ್ರಕರಣದಲ್ಲಿ, 29 ವರ್ಷದ ವ್ಯಕ್ತಿಯನ್ನು ಮದುವೆಯಾದ 14 ವರ್ಷದ ಬಾಲಕಿಯೊಬ್ಬಳು ಮೇ ಅಂತ್ಯದಲ್ಲಿ ತನ್ನ ಗರ್ಭಧಾರಣೆಯನ್ನು ನೋಂದಾಯಿಸಲು ನಾಗಮಂಗಲಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದಳು. ಆಕೆಯ ಆಧಾರ್ ಕಾರ್ಡ್‌ನಲ್ಲಿ ಆಕೆಯ ವಯಸ್ಸು 20 ಎಂದು ನಮೂದಿಸಲಾಗಿದ್ದರೂ, ಪಿಐಸಿಎಂಇ ದಾಖಲೆಗಳ ಪ್ರಕಾರ ಆಕೆಯ ನಿಜವಾದ ವಯಸ್ಸು 14 ಎಂದು ತೋರಿಸಿದೆ. ತನಿಖೆಯ ನಂತರ, ಬಾಲಕಿ ಮತ್ತು ಆಕೆಯ ಪತಿ ಬಾಲ್ಯವಿವಾಹ ಕಾನೂನುಗಳ ಅಡಿ ಕ್ರಮದಿಂದ ತಪ್ಪಿಸಿಕೊಳ್ಳಲು ಡೆಂಕಣಿಕೋಟೆಯಲ್ಲಿರುವ ಸ್ಥಳೀಯ ಬ್ರೌಸಿಂಗ್ ಕೇಂದ್ರದಲ್ಲಿ ಆಧಾರ್ ಜನ್ಮ ದಿನಾಂಕವನ್ನು 200 ರೂ ಕೊಟ್ಟು ಬದಲಾಯಿಸಿದ್ದರು ಎಂದು ಒಪ್ಪಿಕೊಂಡರು.

ಕೂಡಲೇ ಅಧಿಕಾರಿಗಳು ಬಾಲಕಿಯನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅಪಘಾತ ನೋಂದಣಿ (ಎಆರ್‌) ನಮೂದು ಮಾಡಿಸಿದ್ದಾರೆ. ಈ ಸಮಸ್ಯೆಯನ್ನು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಗೆ ವರದಿ ಮಾಡಲಾಯಿತು. ಹೆಚ್ಚಿನ ವಿಚಾರಣೆ ಬಳಿಕ, ರಾಯಕೊಟ್ಟೈ ಮತ್ತು ಡೆಂಕಣಿಕೋಟೆಯಲ್ಲಿರುವ ವಿವಿಧ ಬ್ರೌಸಿಂಗ್ ಕೇಂದ್ರಗಳು, ಫೋಟೋ ಸ್ಟುಡಿಯೋಗಳಲ್ಲಿ 500 ರೂ.ಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಘಾತಕಾರಿಯಾಗಿ, ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ವಂಚನೆಗೆ ಸಹಕರಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲಮಂಗಲಂ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಸಿ. ರಾಜೇಶ್ ಕುಮಾರ್ ಮಾತನಾಡಿ, ಮಾಹಿತಿ ತಿರುಚುತ್ತಿವೆ ಎಂದು ಗುರುತಿಸಲಾದ ಬ್ರೌಸಿಂಗ್ ಕೇಂದ್ರಗಳು ಮತ್ತು ಸ್ಟುಡಿಯೋಗಳನ್ನು ನಮ್ಮ ತಂಡವು ಪರಿಶೀಲಿಸುತ್ತದೆ. ಗ್ರಾಮ ಆರೋಗ್ಯ ದಾದಿಯರು ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಸಹಾಯ ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಆಧಾರ್ ತಿರುಚುವಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಬೆಟ್ಟಮುಗಿಲಲಂ ಪಂಚಾಯತ್‌ನ ಆರೋಗ್ಯ ಕಾರ್ಯಕರ್ತರನ್ನು ಈಗಾಗಲೇ ವಜಾಗೊಳಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಿ. ರಮೇಶ್ ಕುಮಾರ್ ಮಾತನಾಡಿ, “ಇಂತಹ ಪ್ರಕರಣಗಳನ್ನು ವರದಿ ಮಾಡಲು ಎಲ್ಲ ಸಿಬ್ಬಂದಿಗೆ ಜಾಗೃತಿ ಮೂಡಿಸಲಾಗುವುದು. ಯಾವುದೇ ರೂಪದಲ್ಲಿ ಬಾಲ್ಯವಿವಾಹವನ್ನು ಬೆಂಬಲಿಸುವುದನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದರು.

ಏಪ್ರಿಲ್ 2024 ರಿಂದ ಮಾರ್ಚ್ 2025 ರವರೆಗೆ, ಕೃಷ್ಣಗಿರಿ ಜಿಲ್ಲೆಯಲ್ಲಿ ಒಟ್ಟು 545 ಹದಿಹರೆಯದ ಗರ್ಭಧಾರಣೆಯ ವರದಿಯಾಗಿದೆ. ಶೂಲಗಿರಿ (81), ಕೃಷ್ಣಗಿರಿ ಗ್ರಾಮೀಣ (72) ಮತ್ತು ಕೆಲಮಂಗಲಂ (66) ನಲ್ಲಿ ಅತಿ ಹೆಚ್ಚು ಸಂಖ್ಯೆಗಳು ದಾಖಲಾಗಿವೆ.

ಆಧಾರ್ ತಿರುಚುವಿಕೆ ಮತ್ತು ಬಾಲ್ಯವಿವಾಹದಲ್ಲಿ ಭಾಗಿಯಾಗಿರುವವರ ವಿರುದ್ಧ ತನಿಖೆ ನಡೆಸಲು ಮತ್ತು ಕ್ರಮ ಕೈಗೊಳ್ಳಲು ವಿಶೇಷ ತಂಡವನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ. ದಿನೇಶ್ ಹೇಳಿದರು.

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...