Homeರಾಜಕೀಯಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

ಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

- Advertisement -
- Advertisement -

ತಮಿಳುನಾಡು ವಿಧಾನಸಭೆಯು ಗುರುವಾರ ವಿಶೇಷ ನಿರ್ಣಯವನ್ನು ಅಂಗೀಕರಿಸಿದ್ದು, ಸೇತುಸಮುದ್ರಂ ಯೋಜನೆಯನ್ನು ತಕ್ಷಣವೇ ಜಾರಿಗೆ ತರಲು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. ನಿರ್ಣಯವನ್ನು ಬಿಜೆಪಿ ಸೇರಿದಂತೆ ವಿಧಾನಸಭೆಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವೆ ಹಡಗು ಮಾರ್ಗವನ್ನು ರಚಿಸಲು ಸೇತುಸಮುದ್ರಂ ಯೋಜನೆಯನ್ನು ಆರಂಭದಲ್ಲಿ 1860ರಲ್ಲಿ ರಚಿಸಲಾಗಿತ್ತು. ಮನ್ನಾರ್ ಕೊಲ್ಲಿ ಮತ್ತು ಪಾಕ್ ಜಲಸಂಧಿಯನ್ನು ಸಂಪರ್ಕಿಸುವ ಕಾಲುವೆ ರಚನೆ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ವಿಧಾನಸಭೆಯಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ನಿರ್ಣಯವನ್ನು ಅಂಗೀಕರಿಸಿದವು. ಆದರೆ ರಾಮಸೇತುವಿಗೆ ಹಾನಿಯಾಗದಂತೆ ಯೋಜನೆ ಅನುಷ್ಠಾನಗೊಳ್ಳುವವರೆಗೂ ಬೆಂಬಲಿಸುವುದಾಗಿ ಬಿಜೆಪಿ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಸೇತುಸಮುದ್ರಂ ಯೋಜನೆಯ ಅನುಷ್ಠಾನದಿಂದ ತಮಿಳುನಾಡಿನ ಆರ್ಥಿಕತೆಯನ್ನು ಸುಧಾರಿಸುತ್ತದೆ, ಅದರಲ್ಲೂ ವಿಶೇಷವಾಗಿ ದಕ್ಷಿಣ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಿದೆ ಎಂದು ಸಿಎಂ ಸ್ಟಾಲಿನ್‌ ನಿರ್ಣಯವನ್ನು ಓದುವಾಗ ಪ್ರಸ್ತಾಪಿಸಿದ್ದಾರೆ.

ಒಕ್ಕೂಟ ಸರಕಾರ ಕೂಡಲೇ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. “ತಮಿಳುನಾಡು ಮತ್ತು ಭಾರತದ ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸಲು ಸೇತುಸಮುದ್ರಂ ಯೋಜನೆ ಅತ್ಯಗತ್ಯ. ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಸರ್ಕಾರ ಎಲ್ಲ ಸಹಕಾರ ನೀಡಲಿದೆ” ಎಂದು ಸಿಎಂ ಹೇಳಿದ್ದಾರೆ.

“ಇದು ಡಿಎಂಕೆಯ ಮೊದಲ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಅವರ ಕನಸಿನ ಯೋಜನೆಯಾಗಿದೆ. ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಕೂಡ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಆಸಕ್ತಿ ವಹಿಸಿದ್ದರು. ಈ ಯೋಜನೆಯನ್ನು ನಾಲ್ಕನೇ ಪಂಚವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದ್ದು, ಆಗಿನ ಪ್ರಧಾನಿ ಜವಾಹರಲಾಲ್ ನೆಹರು ನೇತೃತ್ವದ ಸಚಿವ ಸಂಪುಟ ಸಭೆಯು ಅನುಮೋದಿಸಿದೆ” ಎಂದು ಸಿಎಂ ಹೇಳಿದ್ದಾರೆ.

1967ರಲ್ಲಿ ಮುಖ್ಯಮಂತ್ರಿಯಾದ ಅಣ್ಣಾದೊರೈ ತಮಿಳುನಾಡನ್ನು ಶ್ರೀಮಂತ ರಾಜ್ಯವನ್ನಾಗಿ ಮಾಡುವುದಾಗಿ ಹೇಳಿ ಈ ಯೋಜನೆಯನ್ನು ಜಾರಿಗೆ ತರಲು ಬಯಸಿದ್ದರು ಎಂದು ಅವರು ಹೇಳಿದ್ದಾರೆ.

2004ರಲ್ಲಿ ಡಿಎಂಕೆಯನ್ನು ಒಳಗೊಂಡ ಯುಪಿಎ ಸರ್ಕಾರ ಈ ಯೋಜನೆಗೆ 2,427 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. 50%ದಷ್ಟು ಕಾಮಗಾರಿ ಮುಗಿಯುವ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ ಅಡೆತಡೆಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು.

“ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಆರಂಭದಲ್ಲಿ ಇದನ್ನು ಬೆಂಬಲಿಸಿದ್ದರು. ಆದರೆ ನಂತರ ತಮ್ಮ ನಿಲುವನ್ನು ಬದಲಾಯಿಸಿದರು ಮತ್ತು ಯೋಜನೆಯ ವಿರುದ್ಧ ಪ್ರಕರಣ ದಾಖಲಿಸಿದರು” ಎಂದು ಸ್ಟಾಲಿನ್ ಹೇಳಿದರು.

ಈ ಯೋಜನೆ ಜಾರಿಯಾದರೆ ತಮಿಳುನಾಡಿನ ಆರ್ಥಿಕತೆಯನ್ನು ಮೇಲೆತ್ತುವ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಕ್ಷಿಣದ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

ಈ ನಡುವೆ ಮುಖ್ಯಮಂತ್ರಿ ರಾಮನನ್ನು ಕಾಲ್ಪನಿಕ ಪಾತ್ರ ಎಂಬ ಹೇಳಿಕೆಯನ್ನು ಎಐಎಡಿಎಂಕೆ ಮತ್ತು ಬಿಜೆಪಿ ವಿರೋಧಿಸಿದ್ದು, ಎಐಎಡಿಎಂಕೆ ನಾಯಕ, ಪೊಲ್ಲಾಚಿ ವಿ.ಜಯರಾಮನ್ ಅವರು, ಶ್ರೀರಾಮ ಅವತಾರವೇ ಹೊರತು ಮುಖ್ಯಮಂತ್ರಿ ಹೇಳಿದಂತೆ ಕಾಲ್ಪನಿಕ ಪಾತ್ರವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...