Homeರಾಜಕೀಯಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

ಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

- Advertisement -
- Advertisement -

ತಮಿಳುನಾಡು ವಿಧಾನಸಭೆಯು ಗುರುವಾರ ವಿಶೇಷ ನಿರ್ಣಯವನ್ನು ಅಂಗೀಕರಿಸಿದ್ದು, ಸೇತುಸಮುದ್ರಂ ಯೋಜನೆಯನ್ನು ತಕ್ಷಣವೇ ಜಾರಿಗೆ ತರಲು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. ನಿರ್ಣಯವನ್ನು ಬಿಜೆಪಿ ಸೇರಿದಂತೆ ವಿಧಾನಸಭೆಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವೆ ಹಡಗು ಮಾರ್ಗವನ್ನು ರಚಿಸಲು ಸೇತುಸಮುದ್ರಂ ಯೋಜನೆಯನ್ನು ಆರಂಭದಲ್ಲಿ 1860ರಲ್ಲಿ ರಚಿಸಲಾಗಿತ್ತು. ಮನ್ನಾರ್ ಕೊಲ್ಲಿ ಮತ್ತು ಪಾಕ್ ಜಲಸಂಧಿಯನ್ನು ಸಂಪರ್ಕಿಸುವ ಕಾಲುವೆ ರಚನೆ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ವಿಧಾನಸಭೆಯಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ನಿರ್ಣಯವನ್ನು ಅಂಗೀಕರಿಸಿದವು. ಆದರೆ ರಾಮಸೇತುವಿಗೆ ಹಾನಿಯಾಗದಂತೆ ಯೋಜನೆ ಅನುಷ್ಠಾನಗೊಳ್ಳುವವರೆಗೂ ಬೆಂಬಲಿಸುವುದಾಗಿ ಬಿಜೆಪಿ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಸೇತುಸಮುದ್ರಂ ಯೋಜನೆಯ ಅನುಷ್ಠಾನದಿಂದ ತಮಿಳುನಾಡಿನ ಆರ್ಥಿಕತೆಯನ್ನು ಸುಧಾರಿಸುತ್ತದೆ, ಅದರಲ್ಲೂ ವಿಶೇಷವಾಗಿ ದಕ್ಷಿಣ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಿದೆ ಎಂದು ಸಿಎಂ ಸ್ಟಾಲಿನ್‌ ನಿರ್ಣಯವನ್ನು ಓದುವಾಗ ಪ್ರಸ್ತಾಪಿಸಿದ್ದಾರೆ.

ಒಕ್ಕೂಟ ಸರಕಾರ ಕೂಡಲೇ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. “ತಮಿಳುನಾಡು ಮತ್ತು ಭಾರತದ ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸಲು ಸೇತುಸಮುದ್ರಂ ಯೋಜನೆ ಅತ್ಯಗತ್ಯ. ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಸರ್ಕಾರ ಎಲ್ಲ ಸಹಕಾರ ನೀಡಲಿದೆ” ಎಂದು ಸಿಎಂ ಹೇಳಿದ್ದಾರೆ.

“ಇದು ಡಿಎಂಕೆಯ ಮೊದಲ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಅವರ ಕನಸಿನ ಯೋಜನೆಯಾಗಿದೆ. ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಕೂಡ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಆಸಕ್ತಿ ವಹಿಸಿದ್ದರು. ಈ ಯೋಜನೆಯನ್ನು ನಾಲ್ಕನೇ ಪಂಚವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದ್ದು, ಆಗಿನ ಪ್ರಧಾನಿ ಜವಾಹರಲಾಲ್ ನೆಹರು ನೇತೃತ್ವದ ಸಚಿವ ಸಂಪುಟ ಸಭೆಯು ಅನುಮೋದಿಸಿದೆ” ಎಂದು ಸಿಎಂ ಹೇಳಿದ್ದಾರೆ.

1967ರಲ್ಲಿ ಮುಖ್ಯಮಂತ್ರಿಯಾದ ಅಣ್ಣಾದೊರೈ ತಮಿಳುನಾಡನ್ನು ಶ್ರೀಮಂತ ರಾಜ್ಯವನ್ನಾಗಿ ಮಾಡುವುದಾಗಿ ಹೇಳಿ ಈ ಯೋಜನೆಯನ್ನು ಜಾರಿಗೆ ತರಲು ಬಯಸಿದ್ದರು ಎಂದು ಅವರು ಹೇಳಿದ್ದಾರೆ.

2004ರಲ್ಲಿ ಡಿಎಂಕೆಯನ್ನು ಒಳಗೊಂಡ ಯುಪಿಎ ಸರ್ಕಾರ ಈ ಯೋಜನೆಗೆ 2,427 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. 50%ದಷ್ಟು ಕಾಮಗಾರಿ ಮುಗಿಯುವ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ ಅಡೆತಡೆಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು.

“ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಆರಂಭದಲ್ಲಿ ಇದನ್ನು ಬೆಂಬಲಿಸಿದ್ದರು. ಆದರೆ ನಂತರ ತಮ್ಮ ನಿಲುವನ್ನು ಬದಲಾಯಿಸಿದರು ಮತ್ತು ಯೋಜನೆಯ ವಿರುದ್ಧ ಪ್ರಕರಣ ದಾಖಲಿಸಿದರು” ಎಂದು ಸ್ಟಾಲಿನ್ ಹೇಳಿದರು.

ಈ ಯೋಜನೆ ಜಾರಿಯಾದರೆ ತಮಿಳುನಾಡಿನ ಆರ್ಥಿಕತೆಯನ್ನು ಮೇಲೆತ್ತುವ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಕ್ಷಿಣದ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

ಈ ನಡುವೆ ಮುಖ್ಯಮಂತ್ರಿ ರಾಮನನ್ನು ಕಾಲ್ಪನಿಕ ಪಾತ್ರ ಎಂಬ ಹೇಳಿಕೆಯನ್ನು ಎಐಎಡಿಎಂಕೆ ಮತ್ತು ಬಿಜೆಪಿ ವಿರೋಧಿಸಿದ್ದು, ಎಐಎಡಿಎಂಕೆ ನಾಯಕ, ಪೊಲ್ಲಾಚಿ ವಿ.ಜಯರಾಮನ್ ಅವರು, ಶ್ರೀರಾಮ ಅವತಾರವೇ ಹೊರತು ಮುಖ್ಯಮಂತ್ರಿ ಹೇಳಿದಂತೆ ಕಾಲ್ಪನಿಕ ಪಾತ್ರವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...