Homeರಾಜಕೀಯಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

ಸೇತುಸಮುದ್ರಂ ಯೋಜನೆಗೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು; ಬಿಜೆಪಿ ಬೆಂಬಲ

- Advertisement -
- Advertisement -

ತಮಿಳುನಾಡು ವಿಧಾನಸಭೆಯು ಗುರುವಾರ ವಿಶೇಷ ನಿರ್ಣಯವನ್ನು ಅಂಗೀಕರಿಸಿದ್ದು, ಸೇತುಸಮುದ್ರಂ ಯೋಜನೆಯನ್ನು ತಕ್ಷಣವೇ ಜಾರಿಗೆ ತರಲು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. ನಿರ್ಣಯವನ್ನು ಬಿಜೆಪಿ ಸೇರಿದಂತೆ ವಿಧಾನಸಭೆಯ ಎಲ್ಲಾ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ.

ಭಾರತ ಮತ್ತು ಶ್ರೀಲಂಕಾ ನಡುವೆ ಹಡಗು ಮಾರ್ಗವನ್ನು ರಚಿಸಲು ಸೇತುಸಮುದ್ರಂ ಯೋಜನೆಯನ್ನು ಆರಂಭದಲ್ಲಿ 1860ರಲ್ಲಿ ರಚಿಸಲಾಗಿತ್ತು. ಮನ್ನಾರ್ ಕೊಲ್ಲಿ ಮತ್ತು ಪಾಕ್ ಜಲಸಂಧಿಯನ್ನು ಸಂಪರ್ಕಿಸುವ ಕಾಲುವೆ ರಚನೆ ಮಾಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಮಿಳುನಾಡು ವಿಧಾನಸಭೆಯಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ನಿರ್ಣಯವನ್ನು ಅಂಗೀಕರಿಸಿದವು. ಆದರೆ ರಾಮಸೇತುವಿಗೆ ಹಾನಿಯಾಗದಂತೆ ಯೋಜನೆ ಅನುಷ್ಠಾನಗೊಳ್ಳುವವರೆಗೂ ಬೆಂಬಲಿಸುವುದಾಗಿ ಬಿಜೆಪಿ ಪಕ್ಷದ ನಾಯಕ ನೈನಾರ್ ನಾಗೇಂದ್ರನ್ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಸೇತುಸಮುದ್ರಂ ಯೋಜನೆಯ ಅನುಷ್ಠಾನದಿಂದ ತಮಿಳುನಾಡಿನ ಆರ್ಥಿಕತೆಯನ್ನು ಸುಧಾರಿಸುತ್ತದೆ, ಅದರಲ್ಲೂ ವಿಶೇಷವಾಗಿ ದಕ್ಷಿಣ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಿದೆ ಎಂದು ಸಿಎಂ ಸ್ಟಾಲಿನ್‌ ನಿರ್ಣಯವನ್ನು ಓದುವಾಗ ಪ್ರಸ್ತಾಪಿಸಿದ್ದಾರೆ.

ಒಕ್ಕೂಟ ಸರಕಾರ ಕೂಡಲೇ ಯೋಜನೆ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸ್ಟಾಲಿನ್ ಒತ್ತಾಯಿಸಿದ್ದಾರೆ. “ತಮಿಳುನಾಡು ಮತ್ತು ಭಾರತದ ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸಲು ಸೇತುಸಮುದ್ರಂ ಯೋಜನೆ ಅತ್ಯಗತ್ಯ. ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಸರ್ಕಾರ ಎಲ್ಲ ಸಹಕಾರ ನೀಡಲಿದೆ” ಎಂದು ಸಿಎಂ ಹೇಳಿದ್ದಾರೆ.

“ಇದು ಡಿಎಂಕೆಯ ಮೊದಲ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಅವರ ಕನಸಿನ ಯೋಜನೆಯಾಗಿದೆ. ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಕೂಡ ಈ ಯೋಜನೆಯನ್ನು ಕಾರ್ಯಗತಗೊಳಿಸಲು ಆಸಕ್ತಿ ವಹಿಸಿದ್ದರು. ಈ ಯೋಜನೆಯನ್ನು ನಾಲ್ಕನೇ ಪಂಚವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದ್ದು, ಆಗಿನ ಪ್ರಧಾನಿ ಜವಾಹರಲಾಲ್ ನೆಹರು ನೇತೃತ್ವದ ಸಚಿವ ಸಂಪುಟ ಸಭೆಯು ಅನುಮೋದಿಸಿದೆ” ಎಂದು ಸಿಎಂ ಹೇಳಿದ್ದಾರೆ.

1967ರಲ್ಲಿ ಮುಖ್ಯಮಂತ್ರಿಯಾದ ಅಣ್ಣಾದೊರೈ ತಮಿಳುನಾಡನ್ನು ಶ್ರೀಮಂತ ರಾಜ್ಯವನ್ನಾಗಿ ಮಾಡುವುದಾಗಿ ಹೇಳಿ ಈ ಯೋಜನೆಯನ್ನು ಜಾರಿಗೆ ತರಲು ಬಯಸಿದ್ದರು ಎಂದು ಅವರು ಹೇಳಿದ್ದಾರೆ.

2004ರಲ್ಲಿ ಡಿಎಂಕೆಯನ್ನು ಒಳಗೊಂಡ ಯುಪಿಎ ಸರ್ಕಾರ ಈ ಯೋಜನೆಗೆ 2,427 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಸ್ಟಾಲಿನ್ ಹೇಳಿದ್ದಾರೆ. 50%ದಷ್ಟು ಕಾಮಗಾರಿ ಮುಗಿಯುವ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರಕಾರ ಅಡೆತಡೆಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು.

“ದಿವಂಗತ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಆರಂಭದಲ್ಲಿ ಇದನ್ನು ಬೆಂಬಲಿಸಿದ್ದರು. ಆದರೆ ನಂತರ ತಮ್ಮ ನಿಲುವನ್ನು ಬದಲಾಯಿಸಿದರು ಮತ್ತು ಯೋಜನೆಯ ವಿರುದ್ಧ ಪ್ರಕರಣ ದಾಖಲಿಸಿದರು” ಎಂದು ಸ್ಟಾಲಿನ್ ಹೇಳಿದರು.

ಈ ಯೋಜನೆ ಜಾರಿಯಾದರೆ ತಮಿಳುನಾಡಿನ ಆರ್ಥಿಕತೆಯನ್ನು ಮೇಲೆತ್ತುವ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಕ್ಷಿಣದ ರಾಜ್ಯಗಳ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

ಈ ನಡುವೆ ಮುಖ್ಯಮಂತ್ರಿ ರಾಮನನ್ನು ಕಾಲ್ಪನಿಕ ಪಾತ್ರ ಎಂಬ ಹೇಳಿಕೆಯನ್ನು ಎಐಎಡಿಎಂಕೆ ಮತ್ತು ಬಿಜೆಪಿ ವಿರೋಧಿಸಿದ್ದು, ಎಐಎಡಿಎಂಕೆ ನಾಯಕ, ಪೊಲ್ಲಾಚಿ ವಿ.ಜಯರಾಮನ್ ಅವರು, ಶ್ರೀರಾಮ ಅವತಾರವೇ ಹೊರತು ಮುಖ್ಯಮಂತ್ರಿ ಹೇಳಿದಂತೆ ಕಾಲ್ಪನಿಕ ಪಾತ್ರವಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...